Prakarana Tanikha Hantadallide Movie; ಟ್ರೇಲರ್ ನಲ್ಲಿ ಪ್ರಕರಣದ ವಿವರ
Team Udayavani, Sep 23, 2024, 6:33 PM IST
“ಪ್ರಕರಣ ತನಿಖಾ ಹಂತದಲ್ಲಿದೆ’ ಎಂಬ ಸಿನಿಮಾವೊಂದು ತಯಾರಾಗಿದೆ. ಈ ಚಿತ್ರ ಈಗ ಬಿಡುಗಡೆಯ ಹಂತಕ್ಕೆ ಬಂದಿದ್ದು, ಅಕ್ಟೋಬರ್ 18ರಂದು ತೆರೆ ಕಾಣುತ್ತಿದೆ. ಮೊದಲ ಹಂತವಾಗಿ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದೆ ತಂಡ. ಈ ಚಿತ್ರವನ್ನು ಚಿಂತನ್ ಕಂಬಣ್ಣ ನಿರ್ಮಿಸುತ್ತಿದ್ದು, ಅವರ ತಂದೆ ಡಾ.ಶಿವಣ್ಣ ಟ್ರೇಲರ್ ರಿಲೀಸ್ ಮಾಡಿ ಶುಭಕೋರಿದರು.
ಚಿತ್ರದ ಟೈಟಲ್ ಟ್ರ್ಯಾಕ್ಗೆ ಶಿವಣ್ಣ ಅವರೇ ಸಾಹಿತ್ಯ ಬರೆದಿದ್ದಾರೆ. ಸುಂದರ್ ಎಸ್. ಈ ಚಿತ್ರದ ನಿರ್ದೇಶಕರು. ಚಿತ್ರದ ಬಗ್ಗೆ ಮಾತನಾಡುವ ಚಿಂತನ್, “ನಾನು ನಟನೆಯತ್ತ ಆಕರ್ಷಿತನಾಗಿ ರಂಗ ತಂಡಗಳೊಂದಿಗೆ ಸೇರಿಕೊಂಡಾಗ ನಿರ್ದೇಶಕ ಸುಂದರ್ ಎಸ್. ಮತ್ತು ತಂಡದ ಪರಿಚಯವಾಯಿತು. ಆ ಹಂತದಲ್ಲಿ ಸುಂದರ್ ಅವರು ರೆಡಿ ಮಾಡಿಟ್ಟುಕೊಂಡಿದ್ದ ಕಥೆಯೊಂದು ಇಷ್ಟವಾಗಿ, ಅದನ್ನು ತಾವೇ ನಿರ್ಮಾಣ ಮಾಡಲು ನಿರ್ಧರಿಸಿದೆ’ ಎಂದರು.
ನಿರ್ದೇಶಕ ಸುಂದರ್ ಎಸ್. ಮಾತನಾಡಿ, “ಈ ತಂಡದಲ್ಲಿರುವವರೆಲ್ಲರೂ ರಂಗಭೂಮಿ ಹಿನ್ನೆಲೆಯವರು. ಈಗಿರುವ ಟ್ರೆಂಡ್ಗೆ ಈ ಕಥೆ ಹೊಂದಿಕೆಯಾಗುತ್ತದೆ’ ಎಂದು ಹೇಳಿದರು.
ಕರದಾಯಾಮ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಿರುವ ಚಿಂತನ್ ಕಂಬಣ್ಣ ಒಂದು ಪಾತ್ರದಲ್ಲಿಯೂ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Virajpete: ಮನೆಯಂಗಳದಲ್ಲಿ ಕಾಡಾನೆ; ಗ್ರಾಮಸ್ಥರಲ್ಲಿ ಆತಂಕ
Embarrassing; ಹಣ ನೀಡದೆ ಮದ್ಯದ ಬಾಟಲಿ ಸಮೇತ ಪರಾರಿಯಾಗಿ ಬಂಧನಕ್ಕೊಳಗಾದ ಪೊಲೀಸ್!
Rain: ದ.ಕ.ಜಿಲ್ಲೆಯ ಹಲವೆಡೆ ಮಳೆ; ಸೆ.24ಕ್ಕೆ ಕರಾವಳಿಗೆ ರೆಡ್ ಅಲರ್ಟ್
Secularism ಯುರೋಪಿಯನ್ ಪರಿಕಲ್ಪನೆ, ಭಾರತದಲ್ಲಿ ಅಗತ್ಯವಿಲ್ಲ: ತಮಿಳುನಾಡು ರಾಜ್ಯಪಾಲ
Udupi-D.K; ಪ್ರತ್ಯೇಕ ಪ್ರಕರಣ: ನಾಲ್ವರು ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.