Son of Muthanna; ಮುತ್ತಣ್ಣನಿಗೆ ಶಿವಣ್ಣ ಸಾಥ್: ತಂದೆ-ಮಗನ ಬಾಂಧವ್ಯದ ಸುತ ಸಿನಿಮಾ
Team Udayavani, Oct 28, 2024, 3:47 PM IST
ಹಿರಿಯ ನಟ ದೇವರಾಜ್ ಅವರ ಪುತ್ರ ಪ್ರಣಮ್ ನಾಯಕರಾಗಿ ನಟಿಸಿರುವ “ಸನ್ ಆಫ್ ಮುತ್ತಣ್ಣ’ (Son of Muthanna) ಸಿನಿಮಾದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ನಟ ಶಿವರಾಜ್ಕುಮಾರ್ ಟೀಸರ್ ಬಿಡುಗಡೆ ಮಾಡಿ ಶುಭಕೋರಿದರು.
ನಟ ಶಿವರಾಜ್ಕುಮಾರ್ ಮಾತನಾಡಿ, “ದೇವರಾಜ್ ಅವರ ಫ್ಯಾಮಿಲಿ ಎಂದರೆ ನಮಗೆ ಅಭಿಮಾನ, ಪ್ರೀತಿ, ವಿಶ್ವಾಸ. ಟೀಸರ್ ನೋಡಿದರೆ ಖುಷಿಯಾಯ್ತು. ತಂದೆ ಮಗನ ಬಾಂಧವ್ಯ ತುಂಬಾ ಚೆನ್ನಾಗಿ ತೆಗೆದುಕೊಂಡು ಹೋಗಿದ್ದಾರೆ. ಅಪ್ಪಾಜಿ ಜೊತೆ ನನ್ನ ಹಳೆ ನೆನಪುಗಳನ್ನು ನೋಡಿ ಖುಷಿಯಾಯ್ತು, ತಂದೆ ಮಗನ ಬಾಂಧವ್ಯನ ಸಿನಿಮಾ ಚೆನ್ನಾಗಿ ಆಗಬೇಕು. ದೇವರಾಜ್ ಅವರ ಕುಟುಂಬದ ಜೊತೆ ನಿಲ್ಲುತ್ತೇವೆ. ಕನ್ನಡ ಚಿತ್ರರಂಗದಲ್ಲಿ ಯಾರೇ ಆಗಲಿ ಸಪೋರ್ಟ್ ಮಾಡುತ್ತೇವೆ. ಯಾರೇ ಆಗಲಿ ನಮ್ಮ ಭಾಷೆ ಉಳಿಬೇಕು ಅಂದರೆ ಎಲ್ಲಾ ಹೀರೋಗಳ ಸಿನಿಮಾಗಳು ಗೆಲ್ಲಬೇಕು’ ಎಂದರು.
ಹಿರಿಯ ನಟ ರಂಗಾಯಣ ರಘು ಮಾತನಾಡಿ, “ಮುತ್ತಣ್ಣ ಟೈಟಲ್ ಯಾಕೆ ಇಟ್ಟಿದ್ದಾರೆ ಅನ್ನೋದು ನಿಮಗೆ ಗೊತ್ತಾಗಿರಬೇಕು. ಒರಿಜನಲ್ ಮುತ್ತಣ್ಣನೇ ಬಂದಿದ್ದಾರೆ. ಪುರಾತನ ಫಿಲಂಸ್ ಹರಿಯಣ್ಣ ಶಿವಣ್ಣನಿಗೆ ದೊಡ್ಡ ಅಭಿಮಾನಿ. ಶಿವಣ್ಣನೇ ಕಾರ್ಯಕ್ರಮಕ್ಕೆ ಬರಬೇಕು ಎನ್ನುವುದು ಅವರ ಕನಸಾಗಿತ್ತು. ಶಿವಣ್ಣ ಆಶೀರ್ವಾದ ಮಾಡಿದರು. ಡೈನಾಮಿಕ್ ಅಂಡ್ ಯಂಗ್ ಡೈನಾಮಿಕ್ ಎಲ್ಲರಿಗೂ ಒಳ್ಳೆದಾಗಲಿ’ ಎಂದರು.
ನಾಯಕ ಪ್ರಣಂ ದೇವರಾಜ್ ಮಾತನಾಡಿ, ರಿಯಲ್ ಸನ್ ಆಫ್ ಮುತ್ತಣ್ಣ, ರೀಲ್ ಸನ್ ಆಫ್ ಮುತ್ತಣ್ಣನಿಗೆ ಬಂದು ಟೀಸರ್ ಮಾಡಿರುವುದು ಖುಷಿ ಕೊಟ್ಟಿದೆ. ನಾವೆಲ್ಲರೂ ಶಿವಣ್ಣನ ಅಭಿಮಾನಿ. ನಿಮ್ಮನ್ನು ನೋಡಿಕೊಂಡು ಬೆಳೆದಿರುವುದು. ಅವರ ಡ್ಯಾನ್ಸ್, ನಟನೆ, ಆಕ್ಷನ್ ಎಲ್ಲದಕ್ಕೂ ಅಭಿಮಾನಿ. ನಾನು ಸಾಕಷ್ಟು ಚಿಕ್ಕವನು ಅವರ ಬಗ್ಗೆ ಮಾತಾನಾಡಲು. ಮುಂದೆ ಬರುವ ಜನರೇಷನ್ಗೆ ಶಿವಣ್ಣ ಸ್ಫೂರ್ತಿ. ತಂದೆಯಾಗುವ ಮುಂಚೆ ಸಾಮಾನ್ಯ ಮನುಷ್ಯ. ಹೆಂಡ್ತಿ, ಕೆಲಸ, ಮನೆ ನೋಡಿಕೊಳ್ಳುತ್ತಾನೆ. ಆದ್ರೆ ತಂದೆಯಾದ ಬಳಿಕ ರೋಲ್ ಮಾಡೆಲ್, ಟೀಚರ್, ಸ್ಟೋರಿ ಟೆಲ್ಲರ್ ಆಗ್ತಾರೆ. ಅಪ್ಪ ಆದ ಬಂದ ಬಳಿಕ ಎಷ್ಟೋ ಕಥೆ ಹುಟ್ಟುತ್ತವೆ. ಅಪ್ಪ ಮಗನ ಬಾಂಧವ್ಯವನ್ನು ಹೇಗೆ ಇರುತ್ತೇ ಅನ್ನೋದನ್ನು ಸನ್ ಆಫ್ ಮುತ್ತಣ್ಣದಲ್ಲಿ ಮಾಡಿದ್ದೇವೆ. ಇಡೀ ತಂಡ ಸಿನಿಮಾಗಾಗಿ ಸಾಕಷ್ಟು ಶ್ರಮಿಸಿದೆ’ ಎಂದರು.
“ಸನ್ ಆಫ್ ಮುತ್ತಣ್ಣ, ಅಪ್ಪ ಮಗನ ಎಮೋಷನ್. ಪ್ರೀತಿ ಹೇಗಿದೆ? ಅಪ್ಪ ಮಗನ ಬಾಂಧವ್ಯವನ್ನು ಚಿತ್ರತೋರಿಸುತ್ತದೆ. ಇಡೀ ಕುಟುಂಬ ನೋಡುವಂತಹ ಸಿನಿಮಾ. ನಿಮ್ಮ ಬೆಂಬಲ ನಮ್ಮ ಮೇಲೆ ಇರಲಿದೆ’ ಎನ್ನುವುದು ನಾಯಕಿ ಖುಷಿ ರವಿ ಮಾತು. ಶ್ರೀಕಾಂತ್ ಹುಣಸೂರು ಈ ಚಿತ್ರದ ನಿರ್ದೇಶಕರು. ಈ ಚಿತ್ರವನ್ನು ಪುರಾತನ ಫಿಲ್ಮಂ ಹಾಗೂ ಎಸ್ಆರ್ಕೆ ಫಿಲಂಸ್ ಸಹಯೋಗದಲ್ಲಿ ಈ ಚಿತ್ರ ನಿರ್ಮಾಣ ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ
Chewing Gum: ಕ್ರಿಕೆಟಿಗರು ಚೂಯಿಂಗ್ ಗಮ್ ಜಗಿಯುವುದು ಯಾಕೆ ಗೊತ್ತಾ? ಇಲ್ಲಿದೆ ಕಾರಣ
Udupi: ವಿವಿಧ ಬೇಡಿಕೆ ಈಡೇರಿಸುವಂತೆ ಅಂಗವಿಕಲರಿಂದ ಪ್ರತಿಭಟನೆ
Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ
Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್ ಹನುಮಂತ ಪ್ರತಿಮೆ ಅನಾವರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.