Bangalore: ಫಿಲ್ಮ್ ಚೇಂಬರ್‌ನಿಂದ ಕನ್ನಡಪರ ಹೋರಾಟಗಾರರಿಗೆ ಬೆಂಬಲ


Team Udayavani, Jan 2, 2024, 2:05 PM IST

Bangalore: ಫಿಲ್ಮ್ ಚೇಂಬರ್‌ನಿಂದ ಕನ್ನಡಪರ ಹೋರಾಟಗಾರರಿಗೆ ಬೆಂಬಲ

ಬೆಂಗಳೂರು: ಕನ್ನಡ ನಾಡು, ನುಡಿ, ನೆಲ, ಜಲ ವಿಷಯದಲ್ಲಿ ಹೋರಾಟ ಮಾಡುತ್ತಾ ಬಂದಿರುವ ಕನ್ನಡಪರ ಹೋರಾಟಗಾರರನ್ನು ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಖಂಡಿಸಿದೆ.

ಅಲ್ಲದೆ ಕನ್ನಡ ನಾಮಫ‌ಲಕ ವಿಷಯದಲ್ಲಿ ಹೋರಾಟ ಮಾಡಿ ಬಂಧನಕ್ಕೆ ಒಳಗಾಗಿರುವ ಕನ್ನಡಪರ ಹೋರಾಟಗಾರರನ್ನು ತಕ್ಷಣವೇ ಬಿಡುಗಡೆಗೊಳಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದೆ.

ಈ ಬಗ್ಗೆ ಸೋಮವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷ ಎನ್‌. ಎಂ. ಸುರೇಶ್‌, “ಅನೇಕ ದಶಕಗಳಿಂದ ಕನ್ನಡ ಪರ ಸಂಘಟನೆಗಳು ಮತ್ತು ಕನ್ನಡಪರ ಹೋರಾಟಗಾರರು ಈ ರಾಜ್ಯದ ನೆಲ, ಜಲ, ಭಾಷೆಯ ವಿಷಯದಲ್ಲಿ ಹೋರಾಟ ನಡೆಸುತ್ತಾ ಬಂದಿದ್ದಾರೆ. ಈಗ ನಾಮಫ‌ಲಕ ವಿಷಯದಲ್ಲೂ ಹೋರಾಟ ಮಾಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಅವರ ಹೋರಾಟ ನ್ಯಾಯಯುತವಾದದ್ದು. ಕನ್ನಡ ನಾಡು, ನುಡಿ ವಿಷಯದಲ್ಲಿ ಇಡೀ ಚಿತ್ರೋದ್ಯಮ ಕನ್ನಡಪರ ಹೋರಾಟಗಾರರ ಪರವಾಗಿ ನಿಲ್ಲುತ್ತದೆ. ಕೂಡಲೇ ಬಂಧನಕ್ಕೆ ಒಳಗಾಗಿರುವ ಹೋರಾಟಗಾರರನ್ನು ಬಿಡುಗಡೆ ಮಾಡಬೇಕೆಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇವೆ’ ಎಂದರು.

“ಕನ್ನಡೇತರರು ಮನೆಯಲ್ಲಿ ಯಾವ ಭಾಷೆ ಬೇಕಾದರು ಮಾತನಾಡಲಿ ಆದರೆ, ವ್ಯವಹರಿಸುವ ಜಾಗದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು. ರಾಜ್ಯ ಸರ್ಕಾರದ ನಿರ್ದೇಶನದಂತೆ, ಕರ್ನಾಟಕದಲ್ಲಿರುವ ಎಲ್ಲ ನಾಮಫ‌ಲಕಗಳಲ್ಲೂ 60-40 ಆದೇಶವನ್ನು ಎಲ್ಲರೂ ಪಾಲಿಸಬೇಕು. ಸರ್ಕಾರದ ಆದೇಶ ಉಲ್ಲಂಘನೆಯಾದಾಗ ಇಂಥ ಘಟನೆಗಳು ನಡೆಯುತ್ತವೆ’ ಎಂದು ಎನ್‌. ಎಂ. ಸುರೇಶ್‌ ಹೇಳಿದರು.

ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್‌ ಬಣಕಾರ್‌ ಮಾತನಾಡಿ, ಎಲ್ಲ ಕಲಾವಿದರ ಪರವಾಗಿ ವಾಣಿಜ್ಯ ಮಂಡಳಿ ಹಾಗೂ ನಿರ್ಮಾಪಕರ ಸಂಘ ನಿಲುವು ವ್ಯಕ್ತಪಡಿಸುತ್ತಿದೆ. ಜತೆಗೆ ಬಂಧನಕ್ಕೆ ಒಳಗಾದ ಹೋರಾಟಗಾರರನ್ನು ಬಿಡುಗಡೆ ಮಾಡಬೇಕು’ ಎಂದು ಸರ್ಕಾರವನ್ನು ಒತ್ತಾಯಿಸಿದರು.

ಟಾಪ್ ನ್ಯೂಸ್

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈರ್‌ ಬ್ರ್ಯಾಂಡ್‌ʼ ಎಂಟ್ರಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

Ramesh Aravind spoke about bhairadevi movie

Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್‌ ಅರವಿಂದ್‌

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

upendra

Upendra Movie: ರೀ ರಿಲೀಸ್‌ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ

night road kannada movie

Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್‌ ರೋಡ್‌ʼ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈರ್‌ ಬ್ರ್ಯಾಂಡ್‌ʼ ಎಂಟ್ರಿ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.