Swetha Leonilla Dsouza; ಕರಾವಳಿ ಹುಡುಗಿ ಕೈತುಂಬಾ ಸಿನಿಮಾ


Team Udayavani, Dec 25, 2023, 12:45 PM IST

swetha leonilla dsouza

“ಖಾಸಗಿ ಪುಟಗಳು’ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ನಾಯಕ ನಟಿಯಾಗಿ ಎಂಟ್ರಿಯಾಗಿರುವ ಕರಾವಳಿ ಲಿಯೋನಿಲ್ಲ ಶ್ವೇತಾ ಡಿಸೋಜಾ. ತಮ್ಮ ಮೊದಲ ಸಿನಿಮಾದಲ್ಲೇ ಸಿನಿಪ್ರಿಯರು ಮತ್ತು ಸಿನಿ ಮಂದಿಯ ಮನ, ಗಮನ ಎರಡನ್ನೂ ಸೆಳೆಯಲು ಯಶಸ್ವಿಯಾಗಿರುವ ಲಿಯೋನಿಲ್ಲ ಶ್ವೇತಾ ಡಿಸೋಜಾ ಸದ್ಯ ಬ್ಯಾಕ್‌ ಟು ಬ್ಯಾಕ್‌ ಸಿನಿಮಾಗಳಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಸದ್ಯ ಚಿತ್ರರಂಗದಲ್ಲಿ ತಮಗೆ ಸಿಗುತ್ತಿರುವ ಅವಕಾಶಗಳು, ಮುಂಬರಲಿರುವ ಸಿನಿಮಾಗಳ ಬಗ್ಗೆ ಶ್ವೇತಾ ಒಂದಷ್ಟು ಮಾತನಾಡಿದ್ದಾರೆ.

“ನಾನು ಸಿನಿಮಾಕ್ಕೆ ಬರುತ್ತೇನೆ ಅಂಥ ಚಿಕ್ಕ ವಯಸ್ಸಿನಲ್ಲಿ ಅಂದುಕೊಂಡಿರಲಿಲ್ಲ. ನಮ್ಮ ಮನೆಯಲ್ಲೂ ಯಾವತ್ತೂ ಈ ಬಗ್ಗೆ ಮಾತಾಡಿರಲಿಲ್ಲ. ಇಂಜಿನಿಯರಿಂಗ್‌ ಓದುತ್ತಿರುವಾಗ ಅಭಿನಯದ ಕಡೆಗೆ ಒಂದಷ್ಟು ಆಸಕ್ತಿ ಮುಡಿತು. ಆ ಬಳಿಕ ಒಂದಷ್ಟು ಶಾರ್ಟ್‌ ಫಿಲಂಗಳಲ್ಲಿ ಅಭಿನಯಿಸಿದೆ. ಅದಾದ ನಂತರ ನಟ ಮತ್ತು ನಿರ್ದೇಶಕ ರಾಜ್‌ ಬಿ. ಶೆಟ್ಟಿ ಅವರ ಪರಿಚಯವಾಯಿತು. ಅಲ್ಲಿಂದ ಸಿನಿಮಾದ ಕಡೆಗೆ ನನಗಿದ್ದ ದೃಷ್ಟಿಕೋನವೇ ಬದಲಾಯಿತು…’ ಇದು ನಟಿ ಲಿಯೋನಿಲ್ಲ ಶ್ವೇತಾ ಡಿಸೋಜಾ ಮಾತು.

“ಖಾಸಗಿ ಪುಟಗಳು’ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ನಾಯಕ ನಟಿಯಾಗಿ ಎಂಟ್ರಿಯಾಗಿರುವ ಕರಾವಳಿ ಲಿಯೋನಿಲ್ಲ ಶ್ವೇತಾ ಡಿಸೋಜಾ, ಮೊದಲ ಸಿನಿಮಾದಲ್ಲೇ ಒಂದಷ್ಟು ನಿರೀಕ್ಷೆ ಮೂಡಿಸಲು ಯಶಸ್ವಿಯಾಗಿರುವ ನಟಿ.

ಶ್ವೇತಾ ಈಗಾಗಲೇ ಹಿಂದಿಯ “ದಿ ವೈ’ ಮತ್ತು ಕನ್ನಡದ “ಖಾಸಗಿ ಪುಟಗಳು’ ಎರಡು ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಈ ಎರಡೂ ಸಿನಿಮಾಗಳು ಮತ್ತು ಅದರಲ್ಲಿ ಸಿಕ್ಕಿರುವ ಎರಡೂ ಪಾತ್ರಗಳೂ ತುಂಬ ವಿಭಿನ್ನ ಮತ್ತು ವಿಶೇಷವಾದವು ಎಂಬುದು ಶ್ವೇತಾ ಮಾತು.

ಸೋಶಿಯಲ್‌ ಮೀಡಿಯಾದಲ್ಲಿ ನನ್ನ ಪ್ರೊಫೈಲ್‌ ನೋಡಿದ ನಿರ್ದೇಶಕರು “ಖಾಸಗಿ ಪುಟಗಳು’ ಸಿನಿಮಾಕ್ಕೆ ನನ್ನನ್ನು ಅಪ್ರೋಚ್‌ ಮಾಡಿದರು. ಮೊದಲ ಹಿಂದಿಯ ಸಿನಿಮಾಕ್ಕೂ ಎರಡನೇ ಸಿನಿಮಾಕ್ಕೂ ಸಾಕಷ್ಟು ವ್ಯತ್ಯಾಸವಿತ್ತು. ಮೊದಲ ಸಿನಿಮಾಕ್ಕೆ ಸಂಪೂರ್ಣ ವಿರುದ್ದವಾದ ಪಾತ್ರ ಎರಡನೇ ಸಿನಿಮಾದಲ್ಲಿ ಸಿಕ್ಕಿತು. ನಟಿಯಾಗಿ ಪಾತ್ರಗಳನ್ನು ಹೇಗೆ ನಿಭಾಯಿಸಬೇಕು, ಏನೆಲ್ಲ ತಯಾರಿ ಮಾಡಿಕೊಳ್ಳಬೇಕು ಎಂಬುದನ್ನು ಈ ಸಿನಿಮಾಗಳಲ್ಲಿ ಕಲಿತಿದ್ದೇನೆ’ ಎನ್ನುತ್ತಾರೆ ಶ್ವೇತಾ.

ಅಂದಹಾಗೆ, ಲಿಯೋನಿಲ್ಲ ಶ್ವೇತಾ ಡಿಸೋಜಾ ಮೂಲತಃ ಮಂಗಳೂರಿನ ಬಜ್ಪೆಯ ಹುಡುಗಿ. ತಂದೆ-ತಾಯಿಯರ ಏಕಮಾತ್ರ ಪುತ್ರಿ ಶ್ವೇತಾ, ತನ್ನ ಪ್ರಾಥಮಿಕ ಶಿಕ್ಷಣವನ್ನು ಬಜ್ಪೆಯಲ್ಲಿ, ಪ್ರೌಢ ಶಿಕ್ಷಣ ಮತ್ತು ಪಿಯುಸಿ ಮಂಗಳೂರಿನಲ್ಲಿ ಮುಗಿಸಿದ್ದಾರೆ.

ಬಳಿಕ ಇಂಜಿನಿಯರಿಂಗ್‌ ಶಿಕ್ಷಣಕ್ಕಾಗಿ ಬೆಂಗಳೂರಿನತ್ತ ಮುಖ ಮಾಡಿದ ಶ್ವೇತಾಗೆ ನಿಧಾನವಾಗಿ ಬಣ್ಣದ ಲೋಕದ ನಂಟು ಶುರುವಾಯಿತು. ಸಾಫ್ಟ್ವೇರ್‌ ಇಂಜಿನಿಯರ್‌ ಆಗಿ ಒಳ್ಳೆಯ ಕೆಲಸ, ಕೈತುಂಬ ಸಂಪಾದನೆಯಿದ್ದರೂ, ಶ್ವೇತಾಗೆ ಅಭಿನಯದ ಕಡೆಗಿದ್ದ ಆಸಕ್ತಿ ಅವರನ್ನು ಐಟಿ ಕ್ಷೇತ್ರದಲ್ಲಿ ಹೆಚ್ಚು ಸಮಯ ಇರಲು ಬಿಡಲಿಲ್ಲ. ಜಾಹೀರಾತೊಂದರ ಆಡಿಷನ್‌ ಸಂದರ್ಭದಲ್ಲಿ ಶ್ವೇತಾಗೆ “ಒಂದು ಮೊಟ್ಟೆಯ ಕಥೆ’ ಖ್ಯಾತಿಯ ನಟ ಕಂ ನಿರ್ದೇಶಕ ರಾಜ್‌ ಬಿ. ಶೆಟ್ಟಿ ಪರಿಚಯವಾಯಿತು. ಬಳಿಕ ರಾಜ್‌ ಬಿ. ಶೆಟ್ಟಿ ಅವರಿಂದ ಕೆಲ ಕಾಲ ಅಭಿನಯಕ್ಕೆ ಸಂಬಂಧಿಸಿದ ಒಂದಷ್ಟು ತರಬೇತಿ, ತಯಾರಿ ಮಾಡಿಕೊಂಡು ಪೂರ್ಣ ಪ್ರಮಾಣದಲ್ಲಿ ಸಿನಿಮಾದತ್ತ ಮುಖ ಮಾಡುವ ನಿರ್ಧಾರಕ್ಕೆ ಬಂದರು.

ಸದ್ಯ ಶ್ವೇತಾ ಡಿಸೋಜಾ “ಹೆಜ್ಜಾರು’, “ನೆಲ್ಸನ್‌’ ಸೇರಿದಂತೆ ಇನ್ನೂ ಹೆಸರಿಡದ ಎರಡು-ಮೂರು ಸಿನಿಮಾಗಳಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾಗಳ ಹೆಸರು ಮತ್ತು ಪಾತ್ರಗಳ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

ಟಾಪ್ ನ್ಯೂಸ್

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Kollur: ಸೊಸೈಟಿಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌

ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

1-asdsdas

Yakshagana; ಖ್ಯಾತ ಪ್ರಸಾಧನ ಕಲಾವಿದ ಬಾಲಕೃಷ್ಣ ನಾಯಕ್‌ ವಿಧಿವಶ

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

1-sa-dsadsa

Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.