ಪಡ್ಡೆಹುಲಿಯಲ್ಲಿ ಪುನೀತ್‌ ನಟನೆ

ಹೊಸ ನಾಯಕನಿಗೆ ಪವರ್‌ಸ್ಟಾರ್‌ ಸಾಥ್‌

Team Udayavani, Apr 9, 2019, 3:00 AM IST

Paddehuli

“ಪಡ್ಡೆಹುಲಿ’ ತಂಡದಿಂದ ದಿನಕ್ಕೊಂದು ಹೊಸ ಸುದ್ದಿಗಳು ಬರುತ್ತಿವೆ. ಈ ಮೂಲಕ ಚಿತ್ರದಲ್ಲೇನಿದೆ ಎಂಬ ಕುತೂಹಲ ಆರಂಭವಾಗಿದೆ. ಕೆಲವು ದಿನಗಳ ಹಿಂದಷ್ಟೇ ನಟ ರಕ್ಷಿತ್‌ ಶೆಟ್ಟಿ “ಪಡ್ಡೆಹುಲಿ’ ಚಿತ್ರದಲ್ಲಿ ಗೆಸ್ಟ್‌ ಅಪಿಯರೆನ್ಸ್‌ ಮಾಡಿರುವ ಸುದ್ದಿಯನ್ನು ನೀವು ಓದಿರಬಹುದು.

ಈಗ ಕನ್ನಡ ಚಿತ್ರರಂಗದ ಸ್ಟಾರ್‌ನಟರೊಬ್ಬರು ಕೂಡಾ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ಈ ಮೂಲಕ ಹೊಸ ಹುಡುಗ ಶ್ರೇಯಸ್‌ ಚಿತ್ರಕ್ಕೆ ಸ್ಟಾರ್‌ ಟಚ್‌ ಸಿಕ್ಕಿದೆ. ಹಾಗಾದರೆ ಯಾರು ಆ ಸ್ಟಾರ್‌ ನಟ ಎಂದು ನೀವು ಕೇಳಬಹುದು. ಅದಕ್ಕೆ ಉತ್ತರ ಪುನೀತ್‌ ರಾಜಕುಮಾರ್‌.

ಹೌದು, ಪುನೀತ್‌ ರಾಜಕುಮಾರ್‌ “ಪಡ್ಡೆಹುಲಿ’ ಚಿತ್ರದಲ್ಲಿ ಗೆಸ್ಟ್‌ ಅಪಿಯರೆನ್ಸ್‌ ಮಾಡಿದ್ದಾರೆ. ನಟ ರಕ್ಷಿತ್‌ ಶೆಟ್ಟಿ “ಪಡ್ಡೆಹುಲಿ’ಯಲ್ಲಿ ಸಖತ್‌ ರಗಡ್‌ ಲುಕ್‌ನಲ್ಲಿ ಕಾಣಿಸಿಕೊಂಡಿರುವುದು ಟೀಸರ್‌ನಲ್ಲಿ ಸ್ಪಷ್ಟವಾಗಿದೆ. ಹಾಗಾದರೆ, ಪುನೀತ್‌ ರಾಜಕುಮಾರ್‌ ಅವರು ಯಾವ ಪಾತ್ರ ಮಾಡಿದ್ದಾರೆಂದು ನೀವು ಕೇಳಬಹುದು.

ಅದಕ್ಕೆ ಸದ್ಯಕ್ಕೆ ಉತ್ತರವಿಲ್ಲ. ಏಕೆಂದರೆ ಚಿತ್ರತಂಡ ಆ ಕುತೂಹಲವನ್ನು ಕಾಯ್ದಿರಿಸಿದೆ. ಸಿನಿಮಾ ಬಿಡುಗಡೆಯಾದಾಗಲೇ ಪುನೀತ್‌ ಅವರು ಯಾವ ಸನ್ನಿವೇಶದಲ್ಲಿ ಎಂಟ್ರಿಕೊಡುತ್ತಾರೆಂಬುದು ಗೊತ್ತಾಗಲಿದೆ. “ಪಡ್ಡೆಹುಲಿ’ ಚಿತ್ರದ ಮೂಲಕ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್‌ ಹೀರೋ ಆಗಿ ಎಂಟ್ರಿಕೊಡುತ್ತಿದ್ದಾರೆ.

ನಿಶ್ವಿ‌ಕಾ ನಾಯ್ಡು ನಾಯಕಿ. ಚಿತ್ರದಲ್ಲಿ ರವಿಚಂದ್ರನ್‌ ಕೂಡಾ ನಟಿಸಿದ್ದು, ನಾಯಕನ ತಂದೆಯ ಪಾತ್ರ ಮಾಡಿದ್ದಾರೆ. ರಮೇಶ್‌ ರೆಡ್ಡಿ ಈ ಚಿತ್ರವನ್ನು ನಿರ್ಮಿಸಿದ್ದು, ಗುರುದೇಶಪಾಂಡೆ ಚಿತ್ರದ ನಿರ್ದೇಶಕರು. ಈ ಚಿತ್ರದ ಮತ್ತೂಂದು ವಿಶೇಷವೆಂದರೆ ಹಾಡುಗಳು.

ಚಿತ್ರದಲ್ಲಿ ಬರೋಬ್ಬರಿ 10 ಹಾಡುಗಳಿದ್ದು, ಅಜನೀಶ್‌ ಲೋಕನಾಥ್‌ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ವಚನ ಸೇರಿದಂತೆ ಕವಿಗಳ ಹಾಡುಗಳನ್ನು ಇಲ್ಲಿ ಬಳಸಿಕೊಳ್ಳಲಾಗಿದೆ. ಜೊತೆಗೆ 10 ಹಾಡುಗಳನ್ನು ಸನ್ನಿವೇಶಕ್ಕೆ ತಕ್ಕಂತೆ ಚಿತ್ರೀಕರಿಸಲಾಗಿದೆ.

ಈ ಬಗ್ಗೆ ಮಾತನಾಡುವ ನಿರ್ದೇಶಕ ಗುರುದೇಶಪಾಂಡೆ, ಇವತ್ತಿನ ಯುವಕರು ರ್ಯಾಪ್‌ ಸೇರಿದಂತೆ ಮಾಡರ್ನ್ ಹಾಡುಗಳ ಮೊರೆ ಹೋಗುತ್ತಿರುವ ಸಂದರ್ಭದಲ್ಲಿ ಅವರಿಗೆ ನಮ್ಮ ನೆಲದ, ಸಂಸ್ಕೃತಿಯ ಹಾಡುಗಳನ್ನು ಕೇಳಿಸಬೇಕೆಂಬ ಕಾರಣಕ್ಕೆ ವಚನ ಹಾಗೂ ನಮ್ಮ ಕವಿಗಳ ಹಾಡುಗಳನ್ನು ಬಳಸಿಕೊಂಡಿದ್ದಾಗಿ ಹೇಳಿದರು. ಅಂದಹಾಗೆ, ಚಿತ್ರ ಏಪ್ರಿಲ್‌ 19 ರಂದು ತೆರೆಕಾಣುತ್ತಿದೆ.

ಪಡ್ಡೆಹುಲಿ ಹಿಂದಿ ಡಬ್ಬಿಂಗ್‌ ರೈಟ್ಸ್‌ ಮಾರಾಟ: ಸಿನಿಮಾ ಬಿಡುಗಡೆಯಾಗುವ ಮೊದಲೇ ಚಿತ್ರತಂಡ ಖುಷಿಯಾಗಿದೆ. ಅದಕ್ಕೆ ಕಾರಣ ಹಿಂದಿ ಡಬ್ಬಿಂಗ್‌ ರೈಟ್ಸ್‌. ಹೌದು, “ಪಡ್ಡೆಹುಲಿ’ ಚಿತ್ರದ ಹಿಂದಿ ಡಬ್ಬಿಂಗ್‌ ರೈಟ್ಸ್‌ ಬರೋಬ್ಬರಿ 2.36 ಕೋಟಿಗೆ ಮಾರಾಟವಾಗಿದೆ.

ಒಬ್ಬ ಹೊಸ ಹೀರೋನಾ ಸಿನಿಮಾಕ್ಕೆ ಈ ಮಟ್ಟದ ಬೆಲೆ ಸಿಕ್ಕಿರೋದು ದಾಖಲೆ ಎಂಬುದು ಚಿತ್ರತಂಡದ ಮಾತು. “ಹೊಸ ಹುಡುಗನ ಚಿತ್ರವೊಂದು ದಾಖಲೆ ಮೊತ್ತಕ್ಕೆ ಮಾರಾಟವಾಗಿರುವುದು ಇದೇ ಮೊದಲು. ಚಿತ್ರದ ಮೇಕಿಂಗ್‌ ಹಾಗೂ ಹಾಡುಗಳನ್ನು ನೋಡಿಯೇ ಈ ಮೊತ್ತ ನೀಡಲಾಗಿದೆ’ ಎಂಬುದು ನಿರ್ದೇಶಕ ಗುರುದೇಶಪಾಂಡೆ ಮಾತು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.