![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 26, 2021, 3:54 PM IST
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಅಭಿನಯ ಶಾರದೆ ಜಯಂತಿ ಅವರ ನಿಧನಕ್ಕೆ ಚಂದನವನದ ಹಿರಿಯ ನಟ-ನಟಿಯರು ಸಂತಾಪ ಸೂಚಿಸಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರೂ ಕಂಬನಿ ಮಿಡಿದಿದ್ದು, ತಮ್ಮ ಕುಟುಂಬದ ಜೊತೆಗೆ ಜಯಂತಿ ಅಮ್ಮನವರು ಒಡನಾಟ ಹೇಗಿತ್ತು ಎಂಬುದನ್ನು ಮೆಲುಕು ಹಾಕಿದ್ದಾರೆ.
ಇಂದು ಟ್ವೀಟ್ ಮಾಡಿರುವ ಅಪ್ಪು, ಜಯಂತಿ ಅಮ್ಮಾವ್ರು ಭಾರತೀಯ ಚಿತ್ರರಂಗದಲ್ಲಿ ಸುಮಾರು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ನಮ್ಮ ತಂದೆಯವರ ಜೊತೆ ಮೂವತ್ತೈದಕ್ಕೂ ಹೆಚ್ಚು ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ. ನಮ್ಮ ಕುಟುಂಬಕ್ಕೆ ತುಂಬಾ ಹತ್ತಿರವಾದಂಥವರು, ನಮ್ಮ ಮನೆಯ ಎಲ್ಲಾ ಕಾರ್ಯಕ್ರಮಗಳಲ್ಲೂ ಭಾಗವಸುತ್ತಿದ್ದರು.
ಅಪ್ಪಾಜಿ ಕಾಡಿಗೆ ಹೋಗಿದ್ದಂತಹ ಸಂದರ್ಭದಲ್ಲಿ ಕರೆ ಮಾಡಿ ನಮ್ಮ ಕುಟುಂಬದ ಯೋಗಕ್ಷೇಮ ವಿಚಾರಿಸುತ್ತಿದ್ದರು. ನಮಗೆ ಒಳ್ಳೆಯದಾಗಲಿ ಅಂತ ಪೂಜೆಗಳನ್ನು ಮಾಡಿಸುತ್ತಿದ್ದರು. ಅವರ ಜೊತೆ ನಾನು ‘ರಾಜ್’ ಸಿನಿಮಾದಲ್ಲಿ ಅಭಿನಯಿಸಿದ್ದು ನನ್ನ ಭಾಗ್ಯ ಎಂದಿರುವ ಪುನೀತ್, ಇವತ್ತು ಅವರನ್ನು ಕಳೆದುಕೊಂಡಿರುವ ನನಗೆ, ನಮ್ಮ ಕುಟುಂಬಕ್ಕೆ ತುಂಬಾ ನೋವುಂಟು ಮಾಡಿದೆ. ಅವರ ನೆನಪುಗಳು ನಮ್ಮೊಳಗೆ ಸದಾ ಜೀವಂತ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಆ ದೇವರಲ್ಲಿ ಪ್ರಾರ್ಥಿಸೋಣ. ಓಂ ಶಾಂತಿ ಎಂದು ಟ್ವಿಟ್ ಮಾಡಿದ್ದಾರೆ.
— Puneeth Rajkumar (@PuneethRajkumar) July 26, 2021
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.