ಕೊರೊನಾಕ್ಕೆ ಭಯಪಡಬೇಡಿ, ಧೈರ್ಯವಾಗಿ ಎದುರಿಸಿ: ಪುನೀತ್ ರಾಜ್ ಕುಮಾರ್


Team Udayavani, Apr 24, 2021, 3:20 PM IST

puneeth rajkumar

ದಿನದಿಂದ ದಿನಕ್ಕೆ ಕೊರೋನಾ ಎರಡನೇ ಅಲೆಯ ಅಬ್ಬರ ಜೋರಾಗುತ್ತಿದ್ದು, ಸೋಂಕಿತರ ಸಂಖ್ಯೆಯಲ್ಲಿ ತೀವ್ರ ಏರಿಕೆಯಾಗುತ್ತಿದೆ. ಇದು ಸಹಜವಾಗಿಯೇ ಜನಸಾಮಾನ್ಯರಲ್ಲಿ ಭಯ-ಆತಂಕಕ್ಕೆ ಕಾರಣವಾಗಿದೆ. ಇದೇ ವೇಳೆ ನಟ ಪವರ್ ಸ್ಟಾರ್‌ ಪುನೀತ್‌ ರಾಜಕುಮಾರ್‌, ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

“ಒಂದು ವೇಳೆ ಕೊರೋನಾ ಪಾಸಿಟಿವ್‌ ಬಂದ್ರೂ ಬೇಜಾರಾಗಬೇಡಿ, ಭಯ ಪಡಬೇಡಿ. ಧೈರ್ಯವಾಗಿ ಎದುರಿಸಿ. ಮಾಸ್ಕ್ ಧರಿಸೋದು ಮರಿಬೇಡಿ. ಸುರಕ್ಷತಾ ಕ್ರಮಗಳನ್ನು ಅನುಸರಿಸಿ’ ಎಂದು ಪವರ್‌ಸ್ಟಾರ್‌ ಮನವಿ ಮಾಡಿದ್ದಾರೆ.

ಈ ಕುರಿತು ವಿಡಿಯೋದಲ್ಲಿ ಮಾತನಾಡಿರುವ ಪುನೀತ್‌ ರಾಜಕುಮಾರ್‌, “ಕೊರೊನಾ ಎರಡನೇ ಅಲೆ ಶುರುವಾಗಿದ್ದು, ಇದರ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ. ಈಗಾಗಲೇ ವ್ಯಾಕ್ಸಿನೇಷನ್‌ ಶುರುವಾಗಿದೆ. ನಾನು ಕೂಡ ಮೊದಲ ಹಂತದ ವ್ಯಾಕ್ಸಿನ್‌ ತೆಗೆದುಕೊಂಡಿದ್ದೇನೆ. ವ್ಯಾಕ್ಸಿನ್‌ ತುಂಬ ಸುರಕ್ಷಿತವಾಗಿದೆ. ಹಾಗಾಗಿ, ಎಲ್ಲರೂ ಹೋಗಿ ವ್ಯಾಕ್ಸಿನ್‌ ತೆಗೆದುಕೊಳ್ಳಿ’ ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ:ದೃಶ್ಯವೊಂದಕ್ಕಾಗಿ ರಾಜ್‌ ಕುಮಾರ್ ಎಂಟು ಗಂಟೆ ಕದಲದೇ ನಿಂತೇ ಇದ್ದರು!

“ಹಾಗೆಯೇ ದಯವಿಟ್ಟು ಎಲ್ಲ ಕಡೆ ಮಾಸ್ಕ್ಗಳನ್ನು ಹಾಕಿಕೊಳ್ಳುವುದನ್ನು ಮರೆಯಬೇಡಿ. ಅದರಲ್ಲೂ ಮುಖ್ಯವಾಗಿ ಜನರ ಮಧ್ಯೆ ಇರುವಾಗ, ಕೆಲಸಗಳಿಗೆ ಹೋಗುವಾಗ ಮರೆಯದೇ ಮಾಸ್ಕ್ ಬಳಸಿ. ಈ ಹೊತ್ತಿನಲ್ಲಿ ಮಾಸ್ಕ್ ತುಂಬ ಮಹತ್ವದ್ದು’ ಎಂದು ಮಾಸ್ಕ್ ಬಳಕೆಯ ಬಗ್ಗೆ ಕರೆ ನೀಡಿದ್ದಾರೆ.

“ಈಗ ಕೊರೊನಾ ಅಲೆ ಹೆಚ್ಚಾಗುತ್ತಿದ್ದು, ಆಕಸ್ಮಾತ್‌ ನಮಗೆ ಸೋಂಕು ತಗುಲಿದರೆ, ಭಯಪಡೋದು ಬೇಡ. ಧೈರ್ಯವಾಗಿರೋಣ. ಸಂಬಂಧಪಟ್ಟವರಿಗೆ ಕರೆ ಮಾಡಿ, ಆಸ್ಪತ್ರೆಗೆ ಹೋಗಬೇಕಾ? ಮನೆಯಲ್ಲೇ ಇರೋದಾ ಎಂದು ತಿಳಿದುಕೊಂಡು ಚಿಕಿತ್ಸೆ ಪಡೆಯೋಣ. ಮನೆಯಲ್ಲೇ ಕ್ವಾರಂಟೈನ್‌ ಆಗಿ, ನಮ್ಮ ಕೊರೋನಾ ವರದಿ ನೆಗೆಟಿವ್‌ ಆದಮೇಲೆ ಹೊರಗೆ ಬರೋಣ. ಅದರ ಜೊತೆಗೆ ಸರ್ಕಾರದ ರೂಲ್ಸ್ ಗಳನ್ನು ನಾವು ಫಾಲೋ ಮಾಡೋಣ’ ಎಂದಿದ್ದಾರೆ ಅಪ್ಪು.

“ಕೊರೋನಾ ಬಂದಿದೆ ಅಂದಾಕ್ಷಣ ಯಾರೂ ಭಯಪಟ್ಟು ಕೊಳ್ಳಬೇಕಾದ ಅಗತ್ಯವಿಲ್ಲ. ಕೊರೋನಾ ಬಂದರೆ ಬೇಜಾರು ಮಾಡಿಕೊಳ್ಳಬೇಡಿ. ಧೈರ್ಯವಾಗಿದ್ದು, ಬೇಕಾದ ಟ್ರೀಟ್‌ಮೆಂಟ್‌ ಪಡೆಯೋಣ. ಇದರಲ್ಲಿ ನಾಚಿಕೆ ಪಟ್ಟುಕೊಳ್ಳುವುದು, ಭಯ ಪಡುವುದು ಏನೂ ಇಲ್ಲ. ತುಂಬ ಕಾನ್ಫಿಡೆಂಟ್‌ ಆಗಿರಿ. ನಮ್ಮ ಕೆಲಸಗಳನ್ನು ನಾವುಮಾಡಲೇಬೇಕು. ಆದ್ದರಿಂದ ನಿಯಮಗಳನ್ನು ಫಾಲೋ ಮಾಡಿಕೊಂಡು ಕೆಲಸ ಮಾಡಿಕೊಳ್ಳೋಣ’ ಎಂದಿದ್ದಾರೆ ಪುನೀತ್‌.

ಸದ್ಯ ಬೆಂಗಳೂರು ನಗರ ಪೊಲೀಸ್‌ ತಮ್ಮ ಟ್ವಿಟ್ಟರ್‌ ಪೇಜ್‌ನಲ್ಲಿ ಪುನೀತ್‌ ರಾಜಕುಮಾರ್‌ ಜನರಿಗೆ ಕರೆಕೊಟ್ಟ ವಿಡಿಯೋವನ್ನು ಅಪ್‌ಲೋಡ್‌ ಮಾಡಿದ್ದು, ಅಪ್ಪು ಆಡಿರುವ ಮಾತುಗಳು ಸೋಶಿಯಲ್‌ ಮೀಡಿಯಾದಲ್ಲಿ ಜೋರಾಗಿ ಹರಿದಾಡುತ್ತಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.