![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 21, 2020, 7:04 AM IST
ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಹಾವಳಿ ಹೆಚ್ಚಾಗುತ್ತಿದ್ದು, ಸರ್ಕಾರ ಕೂಡ ಬಿಗಿಯಾದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ. ಮತ್ತೂಂದೆಡೆ, ಕೊರೊನಾ ವಿರುದ್ದ ಹೋರಾಟಕ್ಕೆ ಜನ ಸಾಮಾನ್ಯರು, ವಿವಿಧ ಕ್ಷೇತ್ರಗಳ ಗಣ್ಯರು ಕೂಡ ಸಾಥ್ ನೀಡುತ್ತಿದ್ದಾರೆ. ಇನ್ನು ಚಿತ್ರರಂಗದ ಮಂದಿಕೂಡ ಇದರಲ್ಲಿ ಹಿಂದೆ ಬಿದ್ದಿಲ್ಲ. ಈಗಾಗಲೇ ಚಿತ್ರರಂಗದ ಹಲವು ತಾರೆಯರು, ಸ್ಟಾರ್-ಸೆಲೆಬ್ರಿಟಿಗಳು ಕೊರೊನಾ ವಿರುದ್ದ ಜನ ಜಾಗೃತಿ ಕೆಲಸ ಮಾಡುತ್ತಿದ್ದಾರೆ.
ಇದೀಗ ಪವರ್ಸ್ಟಾರ್ ಪುನೀತ್ ರಾಜಕುಮಾರ್ ಕೂಡ ಕೊರೊನಾ ಎನ್ನುವ ಮಹಾಮಾರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರಿಗೆ ಹ್ಯಾಟ್ಸಾಫ್ ಹೇಳುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ “ಬ್ರಾವೋಡಾಕ್ಟರ್’ ಎನ್ನುವ ಹೊಸ ಅಭಿಯಾನ ಪ್ರಾರಂಭವಾಗಿದ್ದು, ಸದ್ಯದ ಅಪಾಯಕಾರಿ ಸಂದರ್ಭದಲ್ಲಿ ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯಕೀಯ ಸಿಬ್ಬಂದಿಗೆ ಈ ಅಭಿಯಾನದ ಮೂಲಕ ಸೆಲ್ಯೂಟ್ ಹೇಳಲಾಗುತ್ತಿದೆ.
Starting this hashtag challenge – #bravodoctors Pl share and show your solidarity to the medical professionals- our corona warriors …. Saluting our medical professionals who are the most vulnerable and yet are fighting this pandemic from the frontlines..pl share this hashtag pic.twitter.com/AninWWGor0
— Puneeth Rajkumar (@PuneethRajkumar) March 20, 2020
ಸಾಮಾಜಿಕ ಜಾಲತಾಣದಲ್ಲಿ “ಬ್ರಾವೋಡಾಕ್ಟರ್’ ಹ್ಯಾಶ್ಟ್ಯಾಗ್ ಬಳಸಿ ಶೇರ್ ಮಾಡುವ ಮೂಲಕ ವೈದ್ಯರಿಗೆ ಸೆಲ್ಯೂಟ್ ಹೇಳುವ ಇಂತಹ ಅಭಿಯಾನದಲ್ಲಿ ಇದೀಗ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಕೂಡ ಭಾಗಿಯಾಗಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ “ಬ್ರಾವೋಡಾಕ್ಟರ್’ ಎನ್ನುವ ಹ್ಯಾಶ್ ಟ್ಯಾಗ್ ಬಳಸಿ ಪೋಸ್ಟ್ ಶೇರ್ ಮಾಡಿರುವ ಪುನೀತ್ ರಾಜಕುಮಾರ್, ದಯವಿಟ್ಟು ಎಲ್ಲರೂ ಶೇರ್ ಮಾಡಿ, ಒಗ್ಗಟ್ಟನ್ನು ಪ್ರದರ್ಶಿಸಿ. ಕೊರೊನಾ ವಿರುದ್ಧ ಹೋರಾಡುತ್ತಿರುವ ನಮ್ಮ ವೈದ್ಯಕೀಯ ಸಿಬ್ಬಂದಿಗೆ ಎಲ್ಲರ ಬೆಂಬಲವಿರಲಿ.
ಅಪಾಯಕಾರಿ ವಾತಾವರಣದಲ್ಲೂ ಮುಂದೆ ನಿಂತು ಈ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಹೋರಾಡುತ್ತಿರುವ ಎಲ್ಲ ವೈದ್ಯರಿಗೆ ನನ್ನ ಸೆಲ್ಯೂಟ್. ದಯವಿಟ್ಟು ಹ್ಯಾಶ್ ಟ್ಯಾಗ್ ಶೇರ್ ಮಾಡಿ ಎಂದು ಹೇಳಿದ್ದಾರೆ. ಇನ್ನು ಪುನೀತ್ ರಾಜಕುಮಾರ್ ಶೇರ್ ಮಾಡಿರುವ ಈ ಹ್ಯಾಶ್ ಟ್ಯಾಗ್ ಅನ್ನು ಪುನೀತ್ ಅಭಿಮಾನಿಗಳು ಮತ್ತು ಚಿತ್ರರಂಗದ ಸಾಕಷ್ಟು ಗಣ್ಯರು ಸೋಶಿಯಲ್ ಮೀಡಿಯಾಗಳಲ್ಲಿ ಶೇರ್ ಮಾಡುವ ಮೂಲಕ ಅಭಿಯಾನದಲ್ಲಿ ಬಾಗಿಯಾಗುತ್ತಿದ್ದಾರೆ. ನಟ ಧನಂಜಯ್ ಕೂಡ ಹ್ಯಾಶ್ ಟ್ಯಾಗ್ ಶೇರ್ ಮಾಡಿ ವೈದ್ಯಕೀಯ ಸಿಬ್ಬಂದಿಗೆ ಸೆಲ್ಯೂಟ್ ಹೇಳುತ್ತಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.