![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Sep 12, 2024, 1:15 PM IST
ಸ್ಟಾರ್ ನಟ, ನಟಿಯರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದಾಗ ಅದು ವೈರಲ್ ಆಗುವುದು ಸಹಜ. ಆದರೆ, ಕೆಲವು ಪೋಸ್ಟ್ಗಳು ಮಾತ್ರ ಹೆಚ್ಚು ಚರ್ಚೆಗೆ ಒಳಪಡುತ್ತವೆ. ಸದ್ಯ ನಟಿ ರಚಿತಾ ರಾಮ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡ ಪೋಸ್ಟ್ ಒಂದು ವೈರಲ್ ಆಗುವುದಲ್ಲದೇ, ಅಭಿಮಾನಿಗಳ ವಲಯದಲ್ಲಿ ಸಾಕಷ್ಟು ಚರ್ಚೆಗೆ ಒಳಪಡುತ್ತಿದೆ.
“ಮುಖವಾಡ ಹಾಕಿಕೊಂಡ ನಕಲಿ ಜನರು ತಮ್ಮ ವರ್ಚಸ್ಸನ್ನು ಕಾಯ್ದುಕೊಳ್ಳ ಬೇಕಾಗುತ್ತದೆ. ಆದರೆ, ನಿಜ ವ್ಯಕ್ತಿತ್ವದವರು ಇದ್ಯಾವುದಕ್ಕೂ ತಲೆಕೆಡಿಸಿ ಕೊಳ್ಳುವುದಿಲ್ಲ’ ಎಂದು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಈಗಾಗಲೇ ಈ ಪೋಸ್ಟ್ಗೆ ನೂರಾರು ಕಮೆಂಟ್ಸ್ಗಳು ಬಂದಿದ್ದು, ಪರೋಕ್ಷವಾಗಿ ಇದು ನಟ ದರ್ಶನ್ ಕುರಿತಾಗಿ ಹೇಳಿರುವುದು ಎಂದು ಅಭಿಮಾನಿಗಳು ಅಂದುಕೊಂಡಿದ್ದಾರೆ. ರಚಿತಾ ರಾಮ್ ಅವರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ್ದು ನಟ ದರ್ಶನ್ ಎಂಬುದು ಗೊತ್ತಿರುವ ವಿಷಯ. ಈ ಹಿಂದೆಯೂ ಅವರ ಪರವಾಗಿ ಪೋಸ್ಟ್ ಹಂಚಿಕೊಂಡಿದ್ದರು. ಈಗ ಮತ್ತೆ ಅವರ ಕುರಿತು ಮಾತನಾಡಿದ್ದಾರೆ ಎನ್ನಲಾಗಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.