Renukaswamy case: ʼದಾಸʼನನ್ನು ನೋಡಲು ಪರಪ್ಪನ ಅಗ್ರಹಾರಕ್ಕೆ ಬಂದ ʼಬುಲ್‌ ಬುಲ್‌ʼ


Team Udayavani, Aug 22, 2024, 5:05 PM IST

Renukaswamy case: ʼದಾಸʼನನ್ನು ನೋಡಲು ಪರಪ್ಪನ ಅಗ್ರಹಾರಕ್ಕೆ ಬಂದ ʼಬುಲ್‌ ಬುಲ್‌ʼ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy case) ಜೈಲುಪಾಲಾಗಿರುವ ನಟ ದರ್ಶನ್‌(Darshan) ಅವರನ್ನು ಭೇಟಿ ಆಗಲು ಚಿತ್ರರಂಗದ ಅನೇಕರು ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡುತ್ತಿದ್ದಾರೆ.

ವಾರದಲ್ಲಿ ಎರಡು ಬಾರಿ ಮಾತ್ರ ಭೇಟಿಗೆ ಅವಕಾಶವಿರುವುದರಿಂದ ಗುರುವಾರ(ಆ.22ರಂದು) ದರ್ಶನ್‌ ಸಿನಿಮಾದ ನಾಯಕಿ,ಅಭಿಮಾನಿಗಳ ಮೆಚ್ಚಿನ ರಚ್ಚು(Rachita Ram)‌ ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿದ್ದಾರೆ.

ಭೇಟಿಗೂ ಮೊದಲು ಉತ್ತರಹಳ್ಳಿ ಕೆಂಗೇರಿ ರೋಡ್ ಬಳಿ ಇರುವ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ತೆರಳಿದ್ದರು. ರಾಯರ ದರ್ಶನ ಪಡೆದು ಪೂಜೆ ಸಲ್ಲಿಸಿ, ಹಣ್ಣು ಹಂಪಲು ಹಾಗೂ ಮೂರು ಬ್ಯಾಗ್‌ ಗಳನ್ನು ಹಿಡಿದುಕೊಂಡು ದರ್ಶನ್‌ ಅವರನ್ನು ನೋಡಲು ಹೋಗಿದ್ದಾರೆ.

ರಚಿತಾ ರಾಮ್‌ ಜೊತೆ ಬಿಜೆಪಿ ಮುಖಂಡ ಸಚ್ಚಿದಾನಂದ ಕೂಡ ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿದ್ದಾರೆ.

ಎರಡು ತಿಂಗಳ ಬಳಿಕ ದರ್ಶನ್‌ ಅವರ ಭೇಟಿ ರಚಿತಾ ರಾಮ್‌ ತೆರಳಿದ್ದಾರೆ. ಈ ಹಿಂದೆ ರೇಣುಕಾಸ್ವಾಮಿ ಪ್ರಕರಣ ಕುರಿತು ತನ್ನ ಸೋಶಿಯಲ್‌ ಮೀಡಿಯಾ ಖಾತೆಯಲ್ಲಿ  “ನಮಸ್ಕಾರ ಈ ಹೇಳಿಕೆಯನ್ನು ನಾನು ನಟಿಯಾಗಿ ಅಲ್ಲ, ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ. ಇತ್ತೀಚಿಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು! ಮೊದಲನೆಯದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ಭಗವಂತ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನನಗಿದೆ. ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್ ಸರ್ ನನಗೆ ಗುರು ಸಮಾನರು. ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ. ಏನಿದ್ದರೂ ಸತ್ಯ ಪೊಲೀಸರ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೆ ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಕೇಸ್‌ನ ವರದಿಯಲ್ಲಿ ಪಾರದರ್ಶಕವಾಗಿರುತ್ತೀರಿ ಮತ್ತು ನಿಷ್ಪಕ್ಷವಾಗಿ ಕೆಲಸ ಮಾಡುತ್ತೀರಿ ಎಂದು ಆಶಿಸುತ್ತೇನೆ” ಎಂದು ಬರೆದುಕೊಂಡಿದ್ದರು.

ಕಿರುತೆರೆಯಿಂದ ಸಿನಿಮಾರಂಗಕ್ಕೆ ಬಂದ ರಚಿತಾ ರಾಮ್‌ ದರ್ಶನ್‌ ಅವರೊಂದಿಗೆ ʼಬುಲ್ ಬುಲ್ʼ, ʼಅಂಬರೀಷ್ʼ, ʼಕ್ರಾಂತಿʼ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇತ್ತ ಪ್ರಕರಣ ಸಂಬಂಧ ದರ್ಶನ್‌ ವಿರುದ್ಧ ಪೊಲೀಸರು 4000 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧರಾಗಿದ್ದಾರೆ.

ಟಾಪ್ ನ್ಯೂಸ್

Hosanagar

Hosanagar: ಅಡಗೋಡಿ ಶ್ರೀಮೂಕಾರ್ತೇಶ್ವರ ದೇಗುಲದ ಶಿವಲಿಂಗ 14-15ನೇ ಶತಮಾನದ್ದು!

Ankola-School

Ankola: ಸಿಸಿ ಕೆಮರಾ ನಿಷ್ಕ್ರಿಯಗೊಳಿಸಿ ಶಿಕ್ಷಣ ಸಂಸ್ಥೆಯಿಂದ ಲಕ್ಷಾಂತರ ರೂ. ದೋಚಿದ ಕಳ್ಳರು!

1-adasdsaddas

Mangaluru CCB Police: 8 ಕೆಜಿ ಗಾಂಜಾ ಸಹಿತ ಇಬ್ಬರ ಬಂಧನ

CM–Nagamangala

Riots: ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆ ತಂದ್ರೆ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ

siddanna-2

BJP ಪ್ರತಿಭಟನೆ ಪ್ರಾಣಿ ಹಿಂಸೆಯ ವಿರುದ್ಧ ಕಟುಕರು ಪ್ರತಿಭಟಿಸಿದಂತೆ: ಸಿದ್ದರಾಮಯ್ಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-baghi

Hombale Films ಬಹು ನಿರೀಕ್ಷಿತ ಬಘೀರ ಚಿತ್ರದ ರಿಲೀಸ್ ಡೇಟ್ ಘೋಷಣೆ

Ronny actress Samikshaa

Ronny ಗೆಲ್ಲುವ ಸಿನಿಮಾ: ನಟಿ ಸಮೀಕ್ಷಾ

fire-fly

Firefly: ಟೀಸರ್‌ ನಲ್ಲಿ ಮಿಂಚಿದ ʼಫೈರ್‌ ಫ್ಲೈʼ

krishnam pranaya sakhi 25th day celebration

Krishnam Pranaya Sakhi: ಕೃಷ್ಣ 25ರ ಸಂಭ್ರಮ; ಚಿತ್ರ ಗೆದ್ದಿದೆ, ಕಲೆಕ್ಷನ್‌ ಹೇಳಲ್ಲ..

ಮುಖವಾಡ ಹಾಕಿದವರು ವರ್ಚಸ್ಸು ಕಾಪಾಡಿಕೊಳ್ಳಿ: ರಚಿತಾ ರಾಮ್‌ ಪೋಸ್ಟ್

Rachita Ram: ಮುಖವಾಡ ಹಾಕಿದವರು ವರ್ಚಸ್ಸು ಕಾಪಾಡಿಕೊಳ್ಳಿ: ರಚಿತಾ ರಾಮ್‌ ಪೋಸ್ಟ್

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Hosanagar

Hosanagar: ಅಡಗೋಡಿ ಶ್ರೀಮೂಕಾರ್ತೇಶ್ವರ ದೇಗುಲದ ಶಿವಲಿಂಗ 14-15ನೇ ಶತಮಾನದ್ದು!

Ankola-School

Ankola: ಸಿಸಿ ಕೆಮರಾ ನಿಷ್ಕ್ರಿಯಗೊಳಿಸಿ ಶಿಕ್ಷಣ ಸಂಸ್ಥೆಯಿಂದ ಲಕ್ಷಾಂತರ ರೂ. ದೋಚಿದ ಕಳ್ಳರು!

1-rrrr

Yadgir: ಮನೆ ಮೇಲ್ಛಾವಣಿ ಕುಸಿದು ಬಾಲಕಿ ದಾರುಣ ಸಾ*ವು

dw

Bike ಅಪಘಾತ- ಚಿಕಿತ್ಸೆ ಫಲಕಾರಿಯಾಗದೆ ಅತಿಥಿ ಉಪನ್ಯಾಸಕಿ ನಿಧನ

3

Puttur: ರಸ್ತೆ ಅಪಘಾತ; ಗಾಯಾಳು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.