ರಾಧಿಕಾ ಬರ್ತ್‌ಡೇ ಗಿಫ್ಟ್


Team Udayavani, Nov 13, 2018, 11:20 AM IST

bhairadevi.jpg

ನಟಿ ರಾಧಿಕಾ ಕುಮಾರಸ್ವಾಮಿ ಸೋಮವಾರ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅವರ ಜನ್ಮದಿನದ ಸಂಭ್ರಮದಲ್ಲಿ ಅವರು ಅಭಿನಯಿಸುತ್ತಿರುವ “ಭೈರಾದೇವಿ’ ಮತ್ತು “ದಮಯಂತಿ’ ಚಿತ್ರತಂಡಗಳು ಎರಡು ವಿಶೇಷ ಉಡುಗೊರೆ ಕೊಟ್ಟಿವೆ. ಹೌದು, “ಭೈರಾದೇವಿ’, ಚಿತ್ರತಂಡ ಅವರ ಹುಟ್ಟುಹಬ್ಬದಂದು ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿರುವ ರಾಧಿಕಾ ಭಾವಚಿತ್ರವಿರುವ ಪೋಸ್ಟರ್‌ ಬಿಡುಗಡೆ ಮಾಡುವ ಮೂಲಕ ಶುಭಾಶಯ ಕೋರಿದೆ.

ಕೆಲವು ದಿನಗಳ ಹಿಂದಷ್ಟೇ “ಭೈರಾದೇವಿ’ ಚಿತ್ರತಂಡ, ರಾಧಿಕಾ ಕುಮಾರಸ್ವಾಮಿ ಅವರು ಕಾಳಿ ಅವತಾರದಲ್ಲಿರುವ ಫೋಟೋವನ್ನು ಬಿಡುಗಡೆ ಮಾಡಿತ್ತು. ಈಗ ಅವರ ಬರ್ತ್‌ಡೇಗಾಗಿಯೇ ಮತ್ತೂಂದು ಹೊಸ ಅವತಾರದ ಪೋಸ್ಟರ್‌ ಬಿಡುಗಡೆ ಮಾಡಿದೆ. ಇಲ್ಲಿಯವರೆಗೆ ಕ್ಯೂಟ್‌ ಆಗಿ, ಹೋಮ್ಲಿ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದ ರಾಧಿಕಾ, ಈ ಪೋಸ್ಟರ್‌ನಲ್ಲಿ ಮುಖಕ್ಕೆ ಭಸ್ಮ ಬಳಿದು, ಹಣೆಗೊಂದು ದೊಡ್ಡ ಕುಂಕುಮದ ತಿಲಕ ಇಟ್ಟು, ಭಯ ಹುಟ್ಟಿಸುವ ರೀತಿ ಕಾಣಿಸಿಕೊಂಡಿದ್ದಾರೆ.

ಇನ್ನು, ಈ ಚಿತ್ರ ಶಮಿಕಾ ಎಂಟರ್‌ಪ್ರೈಸಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿದೆ. ಇದೊಂದು ಸೈಕೋಲಾಜಿಕಲ್‌ ಥ್ರಿಲ್ಲರ್‌ ಕಥಾಹಂದರ ಹೊಂದಿದೆ. ಈ ಚಿತ್ರದಲ್ಲಿ ರಾಧಿಕಾ ಅವರೊಂದಿಗೆ ನಟ ರಮೇಶ್‌ ಅರವಿಂದ್‌ ಕೂಡ ನಟಿಸುತ್ತಿದ್ದಾರೆ. ಈ ಹಿಂದೆ “ಆರ್‌ಎಕ್ಸ್‌ ಸೂರಿ’ ಚಿತ್ರ ನಿರ್ದೇಶಿಸಿದ್ದ ಶ್ರೀಜೈ “ಭೈರಾದೇವಿ’ ನಿರ್ದೇಶಕರು.

ದಮಯಂತಿ ಟೀಸರ್‌ ರಿಲೀಸ್‌: ಇನ್ನು, ನಿರ್ದೇಶಕ ನವರಸನ್‌ ಕೂಡ ರಾಧಿಕಾ ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ, “ದಮಯಂತಿ’ ಚಿತ್ರದ ಟೀಸರ್‌ ಬಿಡುಗಡೆ ಮಾಡಿದ್ದಾರೆ. ರಾಧಿಕಾ ಕುಮಾರಸ್ವಾಮಿ ಅವರ ಹುಟ್ಟುಹಬ್ಬ ಆಚರಿಸಿದ ಚಿತ್ರತಂಡ, ಟೀಸರ್‌ ಬಿಡುಗಡೆ ಮಾಡಿ ಶುಭಕೋರಿದೆ. “ದಮಯಂತಿ’ ಮಹಿಳಾ ಪ್ರಧಾನ ಮತ್ತು ಐತಿಹಾಸಿಕ ಹಿನ್ನೆಲೆಯ ಥ್ರಿಲ್ಲರ್‌ ಕಥೆ ಹೊಂದಿದೆ.

“ದಮಯಂತಿ’ ಟೀಸರ್‌ ನೋಡಿದವರಿಗೆ ತೆಲುಗಿನ “ಅರುಂಧತಿ’, “ಪಂಚಾಕ್ಷರಿ’, “ಭಾಗಮತಿ’ ಮಾದರಿಯಲ್ಲಿನ ಗ್ರಾಫಿಕ್ಸ್‌ ಹೊಂದಿದೆ. ಅಂದಹಾಗೆ, ನವೆಂಬರ್‌ 19ರಿಂದ “ದಮಯಂತಿ’ ಚಿತ್ರೀಕರಣ ಶುರುವಾಗಲಿದೆ. ನಿರ್ದೇಶಕ ನವರಸನ್‌ ಚಿತ್ರದ ನಿರ್ಮಾಣದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ಚಿತ್ರಕ್ಕೆ ಪಿಕೆಹೆಚ್‌ ದಾಸ್‌ ಛಾಯಾಗ್ರಹಣವಿದೆ. ಗಣೇಶ್‌ ನಾರಾಯಣ್‌ ಸಂಗೀತವಿದೆ. ಕನ್ನಡ ಹಾಗು ತಮಿಳಿನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರ, ಮುಂದಿನ ಫೆಬ್ರವರಿ ವೇಳೆಗೆ ತೆರೆಗೆ ಬರುವ ಸಾಧ್ಯತೆ ಇದೆ.

 

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

Billari; ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

vidyarthi vidyarthiniyare premier show in dubai

ದುಬೈನಲ್ಲಿ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಪ್ರೀಮಿಯರ್‌ ಶೋ

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

Kalki

Indian Cinema; ಕಲ್ಕಿ ಗೆಲುವಲ್ಲಿ ಸ್ಟಾರ್ ನಗು

Jigar

Jigar; ತೆರೆಗೆ ಬಂತು ಪ್ರವೀಣ್ ತೇಜ್ ನಟನೆಯ ಜಿಗರ್

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.