Sandalwood: ದರ್ಶನ್‌ ನಮ್ಮ ಚಿತ್ರರಂಗಕ್ಕೆ ಬೇಕು.. ʼದಾಸʼನ ಬಗ್ಗೆ ರಾಧಿಕಾ ಕುಮಾರಸ್ವಾಮಿ


Team Udayavani, Sep 5, 2024, 7:28 PM IST

15

ಬೆಂಗಳೂರು: ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು 3,991ರಲ್ಲಿ ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದಾರೆ.

ದರ್ಶನ್‌ ಬಂಧನವಾದ ಬಳಿಕ ಜೈಲಿಗೆ ತೆರಳಿ ಅವರನ್ನು ಭೇಟಿಯಾಗಿ ಸಹ ಕಲಾವಿದರು ಧೈರ್ಯ ತುಂಬಿದ್ದಾರೆ. ಇದಲ್ಲದೆ ಇತರೆ ಕಲಾವಿದರು ದರ್ಶನ್‌ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ.

ದರ್ಶನ್‌ ಅವರ ವ್ಯಕ್ತಿತ್ವ ಹಾಗೂ ಅವರು ಈ ಪ್ರಕರಣದಲ್ಲಿ ಬಂಧನವಾಗಿರುವ ಬಗ್ಗೆ ನಟಿ ರಾಧಿಕಾ ಕುಮಾರಸ್ವಾಮಿ (Radhika Kumaraswamy) ಅವರು ಮಾತನಾಡಿದ್ದಾರೆ.

‘ಮಂಡ್ಯ’, ‘ಅನಾಥರು’ಸಿನಿಮಾದಲ್ಲಿ ದರ್ಶನ್‌ ಅವರೊಂದಿಗೆ ನಟಿಸಿರುವ ರಾಧಿಕಾ ಖಾಸಗಿ ಸುದ್ದಿ ವಾಹಿನಿಗೆ ಕೊಟ್ಟ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿದ್ದಾರೆ.

“ದರ್ಶನ್​ ಅವರ ವಿಷಯ ಮಾತನಾಡುವಾಗ ಮನಸ್ಸಿಗೆ ತುಂಬ ನೋವಾಗುತ್ತದೆ. ನಾನು ‘ಮಂಡ್ಯ’ ಮತ್ತು ‘ಅನಾಥರು’ ಸಿನಿಮಾಗಳ ಶೂಟಿಂಗ್​ ಸಮಯದಲ್ಲಿ ಅವರನ್ನು ನೋಡಿದ್ದು. ಸೆಟ್‌ ನಲ್ಲಿ ಅವರು ಎಲ್ಲರ ಬಳಿ ಅಣ್ಣ ಬನ್ನಿ  ಹೋಗಿ ಎಂದು ಗೌರವ ಕೊಟ್ಟು ಮಾತನಾಡುತ್ತಿದ್ದರು. ಅವರು ದೊಡ್ಡ ನಟವೆಂದು ಎಲ್ಲೂ ಕೂಡ ತೋರಿಸಿಕೊಳ್ಳುತ್ತಾ ಇರಲಿಲ್ಲ” ಎಂದು ಹೇಳಿದ್ದಾರೆ.

“ಈ ವಿಚಾರ ಒಮ್ಮೆಗೆ ಕೇಳಿದಾಗ ಇದನ್ನು ನಂಬೋಕೆ ಆಗಿರಲಿಲ್ಲ. ಇದು ನಿಜನಾ ಅಂಥ ಪ್ರಶ್ನೆ ಮೂಡಿತು. ಅವರ ಜೀವನದಲ್ಲಿ ಏನು ಆಗಿರುತ್ತೋ ಎನ್ನುವುದು ಅವರಿಗೆ ಮಾತ್ರ ಗೊತ್ತಿರಲು ಸಾಧ್ಯ. ಯಾರೋ ಹೇಳಿದ್ದು, ನ್ಯೂಸ್‌ ನಲ್ಲಿ ನೋಡಿದ್ದು ಮಾತ್ರ ನಮಗೆ ಗೊತ್ತಿರುತ್ತದೆ. ಯಾರ ಬಗ್ಗೆಯೂ ಗೊತ್ತಿಲ್ಲದೆ ನಾವು ಕಮೆಂಟ್‌ ಮಾಡುವುದು ತಪ್ಪು” ಎಂದು ಅವರು ಹೇಳಿದ್ದಾರೆ.

“ಪ್ರಾಮಾಣಿಕವಾಗಿ ಹೇಳಬೇಕೆಂದರೆ ದರ್ಶನ್‌ ಅವರು ನಮ್ಮ ಚಿತ್ರರಂಗಕ್ಕೆ ಬೇಕು. ಅವರಿಗೆ ಒಳ್ಳೆದಾಗಲಿ ಎನ್ನುವುದಷ್ಟೇ ನಾನು ಹೇಳಲು ಬಯಸುತ್ತೇನೆ. ಎಲ್ಲರ ಜೀವನದಲ್ಲಿ ಕೆಟ್ಟ ಘಟನೆಗಳು ನಡೆಯುತ್ತವೆ. ಅದನ್ನೆಲ್ಲ ನಾವು ಎದುರಿಸಿ ಮುಂದೆ ಹೋಗಬೇಕು. ಜೀವನದಲ್ಲಿ ಇರುವ ತೊಂದರೆಗಳನ್ನು ಆದಷ್ಟು ಬೇಗ ಪರಿಹರಿಸಿಕೊಂಡು ಅವರು ನಮ್ಮ ಚಿತ್ರರಂಗಕ್ಕೆ ಮರಳಿ ಬರಲಿ’ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

4

Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು

1-vaya-big

Wayanad; ಲಯನಾಡಿನಲ್ಲಿ ಕಣ್ಣೀರಿನ ಓಣಂ, ಈದ್‌!

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

deepak subramanya’s Mr Rani movie

Kannada Movie: ಮಿ.ರಾಣಿ ಎಂದ ದೀಪಕ್‌ ಸುಬ್ರಹ್ಮಣ್ಯ

Kiran raj

Ronny: ಗಿಮಿಕ್‌ ಅಗತ್ಯ ನನಗಿಲ್ಲ…: ಅಪಘಾತ ಹಿನ್ನೆಲೆಯಲ್ಲಿ ಕಿರಣ್‌ ರಾಜ್‌ ಮಾತು

simha roopini Kannada movie

Simha Roopini; ಹಾಡಿನಲ್ಲಿ ʼಸಿಂಹ ರೂಪಿಣಿ’

Abhimanyu Kashinath starrer Ellige Payana Yavudo Daari movie teaser

Abhimanyu Kashinath: ʼಎಲ್ಲಿಗೆ ಪಯಣ ಯಾವುದೋ ದಾರಿ’ ಟೀಸರ್‌ ಬಂತು

Kannada Movie; ಟೀಸರ್‌ ನಲ್ಲಿ ಅಸುರರು

Kannada Movie; ಟೀಸರ್‌ ನಲ್ಲಿ ಅಸುರರು

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

4

Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು

1-vaya-big

Wayanad; ಲಯನಾಡಿನಲ್ಲಿ ಕಣ್ಣೀರಿನ ಓಣಂ, ಈದ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.