ʼರಕ್ಷಕʼ ಹಾಡಿನ ಮೂಲಕ ಪೊಲೀಸ್‌ ಇಲಾಖೆಗೆ ಗೌರವ ಸಲ್ಲಿಸಿದ “ನಿಮ್ಮೆಲ್ಲರ ಆಶೀರ್ವಾದ” ಚಿತ್ರತಂಡ


Team Udayavani, Jul 17, 2023, 4:35 PM IST

ʼರಕ್ಷಕʼ ಹಾಡಿನ ಮೂಲಕ ಪೊಲೀಸ್‌ ಇಲಾಖೆಗೆ ಗೌರವ ಸಲ್ಲಿಸಿದ “ನಿಮ್ಮೆಲ್ಲರ ಆಶೀರ್ವಾದ” ಚಿತ್ರತಂಡ

ಬೆಂಗಳೂರು: ಪೊಲೀಸ್‌ ವೃತ್ತಿ ಬದುಕಿನ ಸುತ್ತ ಸಾಗುವ ಕಥೆಯನ್ನಿಟ್ಟುಕೊಂಡು ತೆರೆಗೆ ಬರಲು ಸಿದ್ದವಾಗಿರುವ “ನಿಮ್ಮೆಲ್ಲರ ಆಶೀರ್ವಾದ” ಚಿತ್ರತಂಡ ಟ್ರೇಲರ್‌ ರಿಲೀಸ್‌ ಮಾಡಿ ಗಮನ ಸೆಳೆದಿತ್ತು. ಇದೀಗ ಚಿತ್ರತಂಡ ಸಿನಿಮಾದ ಮತ್ತೊಂದು ಹಾಡನ್ನು ರಿಲೀಸ್‌ ಮಾಡಿದ್ದು, ಸಖತ್‌ ಗಮನ ಸೆಳೆಯುತ್ತಿದೆ. ‌

ಆಶೀರ್ವಾದ್‌ ಎನ್ನುವ ಪೊಲೀಸ್ ಅಧಿಕಾರಿಯ ವೃತ್ತಿ ಬದುಕಿನ ಸುತ್ತ ಸಾಗುವ “ನಿಮ್ಮೆಲ್ಲರ ಆಶೀರ್ವಾದ” ಚಿತ್ರ ಈ ಹಿಂದೆ ʼಆಸರೆʼ ಎನ್ನುವ ಹಾಡನ್ನು ರಿಲೀಸ್‌ ಮಾಡಿತ್ತು. ರೊಮ್ಯಾಂಟಿಕ್‌ ಸಾಹಿತ್ಯವುಳ್ಳ ಈಗಾಗಲೇ ಕೇಳುಗರ ಮನಗೆದ್ದಿದೆ. ಇದೀಗ ʼರಕ್ಷಕʼ ಎನ್ನುವ ಆರಕ್ಷಕ ಇಲಾಖೆಗೆ ಗೌರವ ಸಲ್ಲಿಸುವ ಸ್ಪೂರ್ತಿದಾಯಕ ಸಾಲನ್ನು ಸಾರುವ ಹಾಡನ್ನು ರಿಲೀಸ್‌ ಮಾಡಿದೆ.

ಖ್ಯಾತ ಗಾಯಕ ರಘು ದೀಕ್ಷಿತ್‌ ಅವರ ಧ್ವನಿಯಲ್ಲಿ ,ಉಮೇಶ್‌ ಗೌತಮ್‌ ನಾಯಕ್‌ ಅವರ ಸ್ಪೂರ್ತಿದಾಯಕ ಸಾಹಿತ್ಯದಲ್ಲಿ ಸುನಾದ್‌ ಗೌತಮ್ ಅವರ ಮ್ಯೂಸಿಕ್‌ ನಲ್ಲಿ ಈ ಹಾಡು ಮೂಡಿಬಂದಿದೆ.

“ಜೈಹಿಂದ್‌” ಎಂದು ಶುರುವಾಗುವ ಹಾಡು “ತನ್ನಸೆಯ ಬಿಟ್ಟು ದೇಶಕ್ಕೆ ಎದೆಕೊಟ್ಟು…” ಎನ್ನುವ ಸಾಲಿನೊಂದಿಗೆ ಸಾಗುತ್ತದೆ. ಹಾಡು ಕೇಳುವಾಗ ಪೊಲೀಸರ ಕಾರ್ಯವೈಖ್ಯರಿ ಬಗ್ಗೆ ಹೆಮ್ಮೆಯಾಗುತ್ತದೆ.

ಈ ಹಾಡು ಎ2 ಮ್ಯೂಸಿಕ್‌ ನಲ್ಲಿ ರಿಲೀಸ್‌ ಆಗಿದ್ದು, ರಘು ದೀಕ್ಷಿತ್‌ ಅವರ ಮ್ಯಾಜಿಕಲ್‌ ವಾಯ್ಸ್‌ ವುಳ್ಳ ಹಾಡು ಮೋಡಿ ಮಾಡುತ್ತದೆ.

ವರುಣ್‌ ಸಿನಿ ಕ್ರಿಯೇಶನ್ಸ್‌ನಡಿ ವರುಣ್‌ ಹೆಗ್ಡೆ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ರವಿಕಿರಣ್‌ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಪ್ರತೀಕ್ ಶೆಟ್ಟಿ ಮತ್ತು ಪಾಯಲ್ ರಾಧಾಕೃಷ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇವರೊಂದಿಗೆ ಎಂ. ಎನ್‌.ಲಕ್ಷ್ಮೀದೇವಿ, ಅರವಿಂದ ಬೋಳಾರ್‌, ಗೋವಿಂದೇಗೌಡ, ಸ್ವಾತಿ ಗುರುದತ್‌, ದಿನೇಶ್‌ ಮಂಗಳೂರು ಸೇರಿ ಹಲವರಿದ್ದಾರೆ.

ಚಿತ್ರಕ್ಕೆ ಸರವಣನ್‌ ಜಿ.ಎನ್‌ ಛಾಯಾಗ್ರಹಣ, ರಘು ನಿಡುವಳ್ಳಿ ಸಂಭಾಷಣೆ, ರೂಪೇಂದ್ರ ಆಚಾರ್‌ ಕಲಾ ನಿರ್ದೇಶನ, ಸುನಾದ್‌ ಗೌತಮ್‌ ಸಂಗೀತ ಮತ್ತು ವಿವೇಕ್‌ ಚಕ್ರವರ್ತಿ ಹಿನ್ನೆಲೆ ಸಂಗೀತ, ಸುರೇಶ್‌ ಆರುಮುಗಂ ಸಂಕಲನವಿದೆ.

ಇದೇ ಜು.21 ರಂದು ರಾಜ್ಯಾದ್ಯಂತ ಸಿನಿಮಾ ತೆರೆಗೆ ಬರಲಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.