Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?


Team Udayavani, Apr 27, 2024, 1:19 PM IST

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

ಬೆಂಗಳೂರು: ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ ಸದ್ಯ ‘ಸಪ್ತ ಸಾಗರದಾಚೆ ಎಲ್ಲೋʼ(ಪಾರ್ಟ್​ ‘ಎ’ʼʼಬಿʼ)  ಸಿನಿಮಾ ಸಕ್ಸಸ್‌ ಆದ ಖುಷಿಯಲ್ಲಿದ್ದಾರೆ. ಈ ಸಿನಿಮಾದ ಬಳಿಕ ಅವರೀಗ  ʼ ‘ರಿಚರ್ಡ್​ ಆಂಟನಿʼ ತಯಾರಿಗೆ ಸಿದ್ದರಾಗುತ್ತಿದ್ದಾರೆ.

ʼಉಳಿದವರು ಕಂಡಂತೆʼ ಸಿನಿಮಾದ ಬಳಿಕ ರಕ್ಷಿತ್‌ ಶೆಟ್ಟಿ ಮತ್ತೆ ನಿರ್ದೇಶನಕ್ಕಿಳಿಯಲಿದ್ದಾರೆ. ಆ ಸಿನಿಮಾದಲ್ಲಿ ʼರಿಚ್ಚಿʼ ಎನ್ನುವ ಪಾತ್ರದ ಸುತ್ತ ಸಾಗುವ ಕಥೆಯನ್ನು ರಕ್ಷಿತ್‌ ʼರಿಚರ್ಡ್‌ ಆಂಟನಿʼ ಯಲ್ಲಿ ಹೇಳಲಿದ್ದಾರೆ. ಅನೌನ್ಸ್‌ ಆದ ದಿನದಿಂದ ದೊಡ್ಡಮಟ್ಟದಲ್ಲಿ ಹೈಪ್‌ ಹೆಚ್ಚಿಸಿರುವ ಈ ಸಿನಿಮಾ ಯಾವಾಗ ಸೆಟ್ಟೇರುತ್ತದೆ ಎನ್ನುವುದು ಇಷ್ಟು ದಿನ ಸಸ್ಪೆನ್ಸ್‌ ಆಗಿಯೇ ಉಳಿದಿತ್ತು. ಇದೀಗ ರಕ್ಷಿತ್‌ ಈ ಬಗ್ಗೆ ಮಾತನಾಡಿದ್ದಾರೆ.

ಲೋಕಸಭಾ ಚುನಾವಣೆಗೆ ಮತ ಚಲಾಯಿಸಲು ಉಡುಪಿಗೆ ಬಂದಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು ʼರಿಚರ್ಡ್‌ ಆಂಟನಿʼ ಬಗ್ಗೆ ಅಪ್ಡೇಟ್‌ ನೀಡಿದ್ದಾರೆ.

“ರಿಚರ್ಡ್‌ ಆಂಟನಿʼʼ ಸಿನಿಮಾದ ಪ್ರೀ ಪ್ರೊಡಕ್ಷನ್‌ ಕೆಲಸ ಶುರುವಾಗಿದೆ. ನಾನು ಮತ ಹಾಕೋಕೆ ಇಲ್ಲಿಗೆ ಬಂದಿದ್ದೆ. ಪೂರ್ತಿ ತಂಡ ಇಲ್ಲಿಗೆ ಶಿಫ್ಟ್‌ ಆಗ್ತಾ ಇದೆ. ಮೇ 1 ರಿಂದ ಕೆಲಸ ಶುರುವಾಗಲಿದೆ. ಒಂದು ಡ್ರಾಫ್ಟ್‌ ಸ್ಕ್ರಿಪ್ಟ್‌ ಕೆಲಸ ಆಗಿದೆ. ಇನ್ನು ಸ್ವಲ್ಪ ಕೆಲಸ ಬಾಕಿಯಿದೆ.  ಶೇ. 50-60ರಷ್ಟು ಶೂಟಿಂಗ್ ಕರಾವಳಿ ಭಾಗದಲ್ಲೇ ನಡೆಯಲಿದೆ. 60-70 -80 ರ ಉಡುಪಿಯನ್ನು ನಾನು ರೀ ಕ್ರಿಯೇಟ್‌ ಮಾಡಬೇಕು ಅದು ಸಾಧ್ಯವಿಲ್ಲ. 10 ವರ್ಷದ ಹಿಂದೆ ಇದ್ದ ಉಡುಪಿಯ ಲೋಕೇಶನ್‌ ನ್ನು ಈಗ ಹುಡುಕುವುದು ಅಷ್ಟು ಸುಲಭವಲ್ಲ. ಕೆಲವು ಲೋಕೇಶನ್‌ ಹುಡುಕಲು ಕೇರಳಕ್ಕೆ ಹೋಗಬಹುದು ಅಥವಾ ಗೋಕರ್ಣಕ್ಕೆ ಹೋಗಬೇಕಾಗಿ ಬರಬಹುದು. ಸಿನಿಮಾದಲ್ಲಿ ನಟಿಸೋಕೆ ಬೆಂಗಳೂರಿನ ಕಲಾವಿದರು ಕೇಳ್ತಾ ಇದ್ದಾರೆ. ಆದರೆ ಸ್ಥಳೀಯ ಕಲಾವಿದರೇ ಸಿನಿಮಾದಲ್ಲಿ ಹೆಚ್ಚಾಗಿ ಇರಲಿದ್ದಾರೆ. ಏಕೆಂದರೆ ಸಿನಿಮಾದಲ್ಲಿ ಉಡುಪಿಯ ಭಾಷೆ, ಶೈಲಿಯನ್ನು ಅರಿತವರು ಬೇಕು. ಇಲ್ಲಿನ ಭಾಷೆಯನ್ನು ಬೇರೆಯವರು ಬಂದು ಪ್ರಯತ್ನಿಸಿದರೆ ಅದು ಆಗಲ್ಲ. ಪ್ರತಿಯೊಬ್ಬ ಕಲಾವಿದರು ಉಡುಪಿಯವರೇ ಆಗಿರುತ್ತಾರೆ” ಎಂದು ಹೇಳಿದ್ದಾರೆ.

ಕರಾವಳಿ ಮೂಲದ ಈ ನಟಿಯರಿಗೆ ಒಲಿಯಬಹುದೇ ಅದೃಷ್ಟ?: ರಕಿತ್‌ ಶೆಟ್ಟಿ ಅವರ ʼರಿಚರ್ಡ್‌ ಆಂಟನಿʼಯಲ್ಲಿ ಕರಾವಳಿ ಬೇರಿನ ಕಲಾವಿದರೇ ಇರಲಿದ್ದಾರೆ ಎಂದು ಸಿಂಪಲ್‌ ಸ್ಟಾರ್‌ ಹೇಳಿದ್ದಾರೆ. ಆ ನಿಟ್ಟಿನಲ್ಲಿ ಸಿನಿಮಾದಲ್ಲಿ ನಾಯಕಿ ಯಾರಾಗಿರಬಹುದು ಎನ್ನುವ ಪ್ರಶ್ನೆಗಳು ಮೂಡಿವೆ.

ಶ್ರೀನಿಧಿ ಶೆಟ್ಟಿ: ʼಕೆಜಿಎಫ್‌ʼ ಮೂಲಕ ಕನ್ನಡಿಗರ ಮನಗೆದ್ದಿರುವ ಕರಾವಳಿ ಬೆಡಗಿ ಶ್ರೀನಿಧಿ ಶೆಟ್ಟಿ ಇಂದು ಸೌತ್‌ ಸಿನಿಮಾದಲ್ಲಿ ಭರವಸೆ ಮೂಡಿಸಿರುವ ನಟಿಯರ ಸಾಲಿನಲ್ಲಿ ಗುರುತಿಸಿಕೊಂಡಿದ್ದಾರೆ. ಕನ್ನಡ ಮಾತ್ರವಲ್ಲದೆ ತಮಿಳು ಸಿನಿಮಾದಲ್ಲೂ ತನ್ನ ನಟನೆಯ ಮೂಲಕ ಮೋಡಿ ಶ್ರೀನಿಧಿ ಮೂಲತಃ ದಕ್ಷಿಣ ಕನ್ನಡದ ಮೂಲ್ಕಿಯವರು. ರಕ್ಷಿತ್‌ ಶೆಟ್ಟಿ ಅವರ ʼರಿಚರ್ಡ್‌ ಆಂಟನಿʼ ಯಲ್ಲಿ ಕಾಣಿಸಿಕೊಳ್ಳುವವರ ಸಾಲಿನಲ್ಲಿ ಸೇರಿದ್ದಾರೆ.

ಸಿನಿ ಶೆಟ್ಟಿ: 2022ರ ಫೇಮಿನಾ ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡಿರುವ ಸಿನಿ ಶೆಟ್ಟಿ ಮೂಲತಃ ಉಡುಪಿ ಜಿಲ್ಲೆಯ ಇನ್ನಂಜೆ ಮೂಲದವರು. ಮುಂಬಯಿಯಲ್ಲಿ ಬೆಳೆದರೂ ಅವರ ಮೂಲ ಕರಾವಳಿ ಆಗಿರುವುದರಿಂದ ಅವರು ಕೂಡ ʼರಿಚರ್ಡ್‌ ಆಂಟನಿʼಯ ಭಾಗವಾಗಬಹುದು ಎನ್ನಲಾಗುತ್ತಿದೆ.

ಯಶಾ ಶಿವಕುಮಾರ್:‌ ಈಗಾಗಲೇ ಸ್ಯಾಂಡಲ್‌ ವುಡ್‌ ನಲ್ಲಿ ಹರಿಪ್ರಸಾದ್ ಜಯಣ್ಣ ನಿರ್ದೇಶನದಲ್ಲಿ ಯೋಗರಾಜ್ ಭಟ್ ಮತ್ತು  ರವಿ ಶಾಮನೂರ್ ಅವರು ಜಂಟಿಯಾಗಿ ನಿರ್ಮಿಸಿರುವ “ಪದವಿಪೂರ್ವ” ಚಿತ್ರದ ಮೂಲಕ ಮಿಂಚಿರುವ ಕರಾವಳಿ ಮೂಲದ ಯಶಾ ಶಿವಕುಮಾರ್ ʼರಿಚರ್ಡ್‌ ಆಂಟನಿʼಯಲ್ಲಿ ಅವಕಾಶ ಪಡೆದರೆ ಅಚ್ಚರಿ ಪಡಬೇಕಿಲ್ಲ. ಈಗಾಗಲೇ ಯಶಾ ʼರಾಜ್‌ ಸೌಂಡ್ಸ್‌ & ಲೈಟ್ಸ್‌ʼ ಎನ್ನುವ ತುಳು ಸಿನಿಮಾದಲ್ಲಿ ನಟಿಸಿ ಗಮನ ಸೆಳೆದಿದ್ದಾರೆ.

ರಚನಾ ರೈ: ಕೋಸ್ಟಲ್‌ ವುಡ್‌ ಸಿನಿಮಾದಲ್ಲಿ ಮಿಂಚಿ ಚಂದನವನಕ್ಕೆ ಕಾಲಿಟ್ಟಿರುವ ರಚನಾ ರೈ ಕರಾವಳಿಯ ಭಾಷೆ, ಶೈಲಿ, ಆಚರಣೆಯನ್ನು ಮರೆತಿಲ್ಲ. ಪುತ್ತೂರು ಮೂಲದ ರಚನಾ ರೈ ʼವಾಮನʼ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಡಿಬಾಸ್‌ ದರ್ಶನ್‌ ಅವರ ʼಡೆವಿಲ್‌ʼ ಸಿನಿಮಾ ರಚನಾ ರೈ ನಾಯಕಿಯಾಗಿ ನಟಿಸಲಿದ್ದಾರೆ ಎನ್ನುವ ಸುದ್ದಿ ಕಳೆದ ಕೆಲ ಸಮಯದಿಂದ ಹರಿದಾಡುತ್ತಿದೆ. ರಚನಾ ರೈ ʼರಿಚರ್ಡ್‌ ಆಂಟನಿʼಯಲ್ಲಿ ನಾಯಕಿಯಾಗಿ ಆಯ್ಕೆ ಆದರೆ ಅಚ್ಚರಿಯೇನಿಲ್ಲ.

ಸೋನಲ್‌ ಮೊಂಥೆರೋ: ಚಂದನವನಕ್ಕೆ ಇತ್ತೀಚಿನ ದಿನದಲ್ಲಿ ಸಖತ್‌ ಬ್ಯುಸಿಯಾಗಿರುವ ತುಳುನಾಡಿನ ಮತ್ತೊಂದು ನಟಿಯೆಂದರೆ ಅದು ಸೋನಲ್‌ ಅವರು. ʼಬನಾರಸ್‌ʼ, ʼಪಂಚತಂತ್ರʼ, ʼಗರಡಿʼ ಸೇರಿದಂತೆ ಅನೇಕ ಸಿನಿಮಾದಲ್ಲಿ ನಟಿಸಿರುವ ಸೋನಲ್‌ ಅವರಿಗೆ ಕೋಸ್ಟಲ್‌ ಭಾಷಾ ಸೊಗಡು ಸರಾಗವಾಗಿ ಬರುತ್ತದೆ. ಆ ನಿಟ್ಟಿನಲ್ಲಿ ಅವರು ಕೂಡ ʼರಿಚರ್ಡ್‌ ಆಂಟನಿʼ ಭಾಗವಾಗಬಹುದು ಎನ್ನುವುದು ಸದ್ಯದ ಲೆಕ್ಕಚಾರ.

ಇನ್ನು ಈ ಸಾಲಿನಲ್ಲಿ ನಿಮಿಕಾ ರತ್ನಾಕರ್, ನಟಿ ಹಾಗೂ ನಿರೂಪಕಿ ಅನುಶ್ರೀ ಅವರ ಹೆಸರು ಕೂಡ ಕೇಳಿ ಬರುತ್ತಿದೆ. ಇವೆಲ್ಲ ಆಯ್ಕೆ ಬಿಟ್ಟು ಹೊಸ ಮುಖವನ್ನು ರಕ್ಷಿತ್‌ ಪರಿಚಯಿಸಿದರೆ ಅಚ್ಚರಿ ಪಡಬೇಕಿಲ್ಲ.

ಮುಂದಿನ ದಿನಗಳಲ್ಲಿ ಈ ಬಗ್ಗೆ ಸ್ಪಷ್ಟನೆ ಸಿಗಲಿದೆ.

ಟಾಪ್ ನ್ಯೂಸ್

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

How much did ‘Kalki 2898 AD’ earn at the box office on the first day?

ಬಾಕ್ಸಾಫೀಸ್ ಗೆ ಕಿಚ್ಚು ಹತ್ತಿಸಿದ ‘Kalki 2898 AD’ ಮೊದಲ ದಿನ ಗಳಿಸಿದ್ದೆಷ್ಟು?

Kochi: ಉಸಿರಾಟ ಸಮಸ್ಯೆ; 37ನೇ ವಯಸ್ಸಿನಲ್ಲಿ ಖ್ಯಾತ ನಟನ ಮಗ ನಿಧನ

Kochi: ಉಸಿರಾಟ ಸಮಸ್ಯೆ; 37ನೇ ವಯಸ್ಸಿನಲ್ಲಿ ಖ್ಯಾತ ನಟನ ಮಗ ನಿಧನ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.