ಹಳೆಯದನ್ನು ಬಿಟ್ಟು ಬಿಡೋಣ… ಮುಗಿದ ಅಧ್ಯಾಯ ಕೆದಕಬೇಡಿ: ರಕ್ಷಿತ್‌ ಮನವಿ


Team Udayavani, Jun 9, 2021, 11:51 AM IST

rakshith

ಬೆಂಗಳೂರು: ಕೋವಿಡ್‌ ಲಾಕ್‌ಡೌನ್‌ ನಿಂದಾಗಿ ನಟ ರಕ್ಷಿತ್‌ ಶೆಟ್ಟಿ ಈ ಬಾರಿ ಸರಳವಾಗಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಇನ್ನು ಬರ್ತ್‌ಡೇಯನ್ನು ಅಭಿಮಾನಿಗಳ ಜೊತೆ ಸಂಭ್ರಮಿಸಲು ಸಾಧ್ಯವಾಗದಿದ್ದರಿಂದ, ಮತ್ತು “777 ಚಾರ್ಲಿ’ ಸಿನಿಮಾದ ಬಗ್ಗೆ ಮಾತನಾಡುವುದಕ್ಕಾಗಿ ರಕ್ಷಿತ್‌ ಶೆಟ್ಟಿ ಇನ್ಸ್ಟಾಗ್ರಾಮ್‌ ಲೈವ್‌ ಮೂಲಕ ತಮ್ಮ ಅಭಿಮಾನಿಗಳ ಮುಂದೆ ಬರುವುದಾಗಿ ತಿಳಿಸಿದ್ದರು.

ಅದರಂತೆ ಬರ್ತ್‌ಡೇ ಮರುದಿನ ರಕ್ಷಿತ್‌ ಶೆಟ್ಟಿ ಇನ್ಸ್ಟಾಗ್ರಾಮ್‌ ಲೈವ್‌ ಮೂಲಕ ಫ್ಯಾನ್ಸ್‌ಗೆ ದರ್ಶನ ಕೊಟ್ಟಿದ್ದರು. ಇನ್ನು ತಮ್ಮ ನೆಚ್ಚಿನ ನಟ ಸೋಶಿಯಲ್‌ ಮಿಡಿಯಾದಲ್ಲಿ ಲೈವ್‌ ಬರುವುದನ್ನೆ ಕಾಯುತ್ತಿದ್ದ ಅಭಿಮಾನಿಗಳು ಕೂಡ, ಲೈವ್‌ನಲ್ಲಿ ತಮ್ಮ ಪ್ರಶ್ನೆಗಳನ್ನು ರಕ್ಷಿತ್‌ ಶೆಟ್ಟಿಗೆ ಕೇಳಿದ್ದಾರೆ. ಅಷ್ಟೇ ಆಗಿದ್ದರೆ ಪರವಾಗಿಲ್ಲ. ಈ ಲೈವ್‌ನಲ್ಲಿ ಕೆಲವರು ರಕ್ಷಿತ್‌ ಶೆಟ್ಟಿ ಅವರ ಸಿನಿಮಾ ವಿಚಾರಗಳ ಹೊರತಾಗಿ ಮದುವೆ, ರಶ್ಮಿಕಾ ಮೊದಲಾದ ತೀರಾ ವೈಯಕ್ತಿಕ ವಿಷಯಗಳ ಕುರಿತಾದ ಪ್ರಶ್ನೆಯನ್ನು ಪದೇ ಪದೇ ಕೇಳಲು ಮುಂದಾಗಿದ್ದಾರೆ. ಅದರಲ್ಲೂ ರಕ್ಷಿತ್‌ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ಅವರ ಮದುವೆ ಮತ್ತಿತರ ಖಾಸಗಿ ವಿಚಾರಗಳ ಪ್ರಶ್ನೆಗಳನ್ನು ಕೇಳಿದ್ದರು.

ಇಂಥ ಪ್ರಶ್ನೆಗಳು ಲೈವ್‌ನಲ್ಲಿ ಬರುತ್ತಿರುವುದನ್ನು ಸೂಕ್ಷ್ಮವಾಗಿ ಗಮನಿಸಿದ ರಕ್ಷಿತ್‌ ಶೆಟ್ಟಿ, “ಇಲ್ಲಿ ಕೆಲವು ಕಾಮೆಂಟ್ಸ್‌ ಓದೋಕೆ ಬಹಳ ಬೇಜಾರಾಗುತ್ತೆ. ಆ ಕಾಮೆಂಟ್ಸ್‌ ನನ್ನ ಬಗ್ಗೆ ಅಲ್ಲ ಬೇರೊಬ್ಬರ ಬಗ್ಗೆ. ಆದರೆ ನನ್ನ ಮನವಿ ಏನೆಂದರೆ, ಹಳೆಯದನ್ನು ಬಿಟ್ಟು ಬಿಡೋಣ. ಹಿಂದೆ ಮುಗಿದಿದೆಲ್ಲ ಮುಗಿದು ಹೋಯಿತು. ಈಗ ಅದರ ಬಗ್ಗೆ ಮಾತನಾಡಿ ಪ್ರಯೋಜನವಿಲ್ಲ. ಯಾವುದೇ ವ್ಯಕ್ತಿಗೆ ಅಗೌರವ ಮಾಡುವುದು ಬೇಡ. ನಾವು ನಮ್ಮ ಬಗ್ಗೆಯೇ ಅಸಹ್ಯ ಪಟ್ಟುಕೊಳ್ಳುವಂಥಹಾ ಕಾಮೆಂಟ್ಸ್‌ ಅನ್ನು ಬೇರೆಯವರ ಬಗ್ಗೆ ಸಹ ಮಾಡಬಾರದು. ಎಲ್ಲರ ಬಳಿ ಮನವಿ ಮಾಡಿಕೊಳ್ಳುವುದೇನೆಂದರೆ ಮೊದಲು ಮಾನವರಾಗೋಣ’ ಎಂದರು.

ಆದರೆ ರಕ್ಷಿತ್‌ ಶೆಟ್ಟಿ ಬೇಡವೆಂದರೂ ಕೆಲವು ಕಾಮೆಂಟ್ಸ್‌ ಮತ್ತೆ ಮತ್ತೆ ಪುನರಾರ್ವತೆ ಆಗಿದ್ದರಿಂದ, ಬೇಸರಗೊಂಡ ರಕ್ಷಿತ್‌ ಶೆಟ್ಟಿ “ಎಲ್ಲರಿಗೂ ಗೌರವ ಕೊಡೋಣ. ಎಲ್ಲರಿಗೂ ಅವರದ್ದೇ ಆದ ಜೀವನ ಇದೆ. ಇಲ್ಲಿ ಕಾಮೆಂಟ್ಸ್‌ ಸೆಕ್ಷನ್‌ನಲ್ಲಿ ನಾನು ಒಳ್ಳೆಯ ಕಾಮೆಂಟ್ಸ್‌ ನೋಡಲು ಇಷ್ಟಪಡುತ್ತೀನಿ. ನಮ್ಮ ಸಿನಿಮಾ ಬಗ್ಗೆ ಕಾಮೆಂಟ್ಸ್‌ ನೋಡಲು ಇಷ್ಟಪಡ್ತೀನಿ’ ಎಂದರು ರಕ್ಷಿತ್‌ ಶೆಟ್ಟಿ. ಅಷ್ಟೇ ಅಲ್ಲದೆ ರಶ್ಮಿಕಾ ಬಗ್ಗೆ ಮಾಡಿದ್ದ ಕೆಲವು ಕಾಮೆಂಟ್ಸ್‌ ಅನ್ನು ಡಿಲೀಟ್‌ ಸಹ ಮಾಡಿದ್ದಾರೆ ರಕ್ಷಿತ್‌ ಶೆಟ್ಟಿ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.