‌ಅನುಮತಿಯಿಲ್ಲದೆ ದೃಶ್ಯ ಬಳಕೆ: “ಹಾಸ್ಟೆಲ್‌ ಹುಡುಗರಿ”ಗೆ ಲೀಗಲ್‌ ನೋಟಿಸ್ ಕೊಟ್ಟ ರಮ್ಯಾ


Team Udayavani, Jul 19, 2023, 2:45 PM IST

tdy-8

ಬೆಂಗಳೂರು: ಸ್ಯಾಂಡಲ್‌ ವುಡ್‌ ನಲ್ಲಿ ಬಿರುಸಿನ ಪ್ರಚಾರದಿಂದ ಸದ್ದು ಮಾಡಿರುವ ʼ’ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ” ಸಿನಿಮಾ ಇದೇ ವಾರ ತೆರೆಗೆ ಬರಲಿದೆ. ಇನ್ನೇನು ತೆರೆಗೆ ಬರಬೇಕು ಎನ್ನುವಾಗಲೇ ಸಿನಿಮಾಕ್ಕೆ ಕಾನೂನು ತೊಡಕು ಅಡ್ಡಿಯಾಗಿದೆ.

ಸ್ಯಾಂಡಲ್‌ ವುಡ್‌ ಕ್ವೀನ್‌, ನಟಿ ರಮ್ಯಾ ಅವರು ʼಹಾಸ್ಟೆಲ್‌ ಹುಡುಗರಿʼಗೆ ಲೀಗಲ್‌ ನೋಟಿಸ್‌ ಜಾರಿ ಮಾಡಿದ್ದಾರೆ.

ʼʼಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ” ಸಿನಿಮಾ ಸಟ್ಟೇರಿದ ದಿನದಿಂದ ಸಿಕ್ಕಾಪಟ್ಟೆ ಹೈಪ್‌ ಕ್ರಿಯೇಟ್‌ ಮಾಡಿದೆ. ಸಿನಿಮಾವನ್ನು ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ ಅವರ ಪರಂವಃ ಪಿಕ್ಚರ್ಸ್‌ ಪ್ರಸ್ತುತಪಡಿಸುತ್ತಿದೆ.

ವಿಭಿನ್ನ ರೀತಿಯಲ್ಲಿ ಸಿನಿಮಾವನ್ನು ಪ್ರಮೋಟ್‌ ಮಾಡಿ, ಟೀಸರ್‌, ಟ್ರೇಲರ್‌ ನಿಂದ ಗಮನ ಸೆಳೆದ ಸಿನಿಮಾ ತಂಡಕ್ಕೆ ಈಗ ಕಾನೂನು ತೊಡಕು ಉಂಟಾಗಿದೆ.

ನಟಿ ರಮ್ಯಾ ಬಹು ಸಮಯದ ಬಳಿಕ ಶೂಟ್‌ ನಲ್ಲಿ ಭಾಗಿಯಾಗಿದ್ದರು. ಅದು ʼʼಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ” ಸಿನಿಮಾದ ಪ್ರೋಮೋ ಶೂಟ್‌  ಮೂಲಕ. ಇತ್ತೀಚೆಗೆ ಸಿನಿಮಾದ ಟ್ರೇಲರ್‌ ರಿಲೀಸ್‌ ಆಗಿದೆ. ಈ ಟ್ರೇಲರ್‌ ನಲ್ಲಿ ನಟ ದಿಗಂತ್‌, ರಿಷಬ್‌,ಶೈನ್‌ ಶೆಟ್ಟಿ, ಪವನ್‌ ಕುಮಾರ್‌ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ನಟಿ ರಮ್ಯಾ ಅವರನ್ನು ತೋರಿಸಲಾಗಿದೆ. ಇದೇ ಈಗ “ಹಾಸ್ಟೆಲ್‌ ಹುಡುಗರಿ”ಗೆ ಸಮಸ್ಯೆಯಾಗಿ ಪರಿಣಮಿಸಿದೆ.

ಪ್ರೋಮೋ ಶೂಟ್‌ ನಲ್ಲಿ ಮಾತ್ರ ನನ್ನ ದೃಶ್ಯ ಬಳಸಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಟ್ರೇಲರ್‌ ನಲ್ಲಿ ನನ್ನ ದೃಶ್ಯವನ್ನು ಅನುಮತಿಯಿಲ್ಲದೆ ಬಳಸಲಾಗಿದೆ. ಸಿನಿಮಾದಲ್ಲಿ ನನ್ನ ದೃಶ್ಯವನ್ನು ಬಳಸಬಾರದು. ಯೂಟ್ಯೂಬ್‌ ಸೇರಿದಂತೆ ಇತರ ಮಾಧ್ಯಮಗಳಲ್ಲಿ ಈಗಾಗಲೇ ಪ್ರಸಾರವಾಗಿರುವ ವಿಡಿಯೋವನ್ನು ತೆಗೆದುಹಾಕಬೇಕು. ನನಗೆ ಇದರಿಂದ ನಷ್ಟವಾಗಿದೆ ಇದರಿಂದ 1 ಕೋಟಿ ರೂ. ಪರಿಹಾರವನ್ನು ನೀಡುವಂತೆ ನೋಟಿಸ್‌ ನಲ್ಲಿ ಒತ್ತಾಯಿಸಿದ್ದು, ತನ್ನ ದೃಶ್ಯವನ್ನು ಸಿನಿಮಾದಲ್ಲಿ ಬಳಸಬಾರದೆಂದು ರಮ್ಯಾ ಕೋರ್ಟಿನಿಂದ ತಡೆಯಾಜ್ಞೆ ತಂದಿರುವುದಾಗಿ ಹೇಳಲಾಗಿದೆ.

ಚಿತ್ರತಂಡದೊಂದಿಗೆ ರಮ್ಯಾ ಒಳ್ಳೆಯ ರೀತಿಯಲ್ಲಿದ್ದರು. ಚಿತ್ರದಲ್ಲೂ ನಟಿಸಿರುವ ಅವರು ಏಕಾಏಕಿ ಲೀಗಲ್ ನೋಟಿಸ್‌ ಜಾರಿ ಮಾಡಿರುವುದು “ಹಾಸ್ಟೆಲ್‌ ಹುಡುಗರಿಗೆ” ಹಿನ್ನೆಡೆಯಾಗುವ ಸಾಧ್ಯತೆಯಿದೆ.

ನಿತಿನ್‌ ಕೃಷ್ಣಮೂರ್ತಿ ನಿರ್ದೇಶನ ಮಾಡಿರುವ “ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ” ಸಿನಿಮಾವನ್ನು ಪ್ರಜ್ವಲ್‌ ಬಿಪಿ, ವರುಣ್‌ ಕುಮಾರ್‌ ಗೌಡ, ಅರವಿಂದ್‌ ಕಶ್ಯಪ್‌ ಹಾಗೂ ಇತರು ಸೇರಿ ಸಿನಿಮಾವನ್ನು ನಿರ್ಮಿಸಿದ್ದಾರೆ. ಇದೇ ವಾರ ಸಿನಿಮಾ ತೆರೆಗೆ ಬರಲಿದೆ.

ಟಾಪ್ ನ್ಯೂಸ್

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತ್ನಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bagheera movie song out

Bagheera ರುಧಿರ ಗಾನ…; ಶ್ರೀಮುರಳಿ ಸಿನಿಮಾದ ಹಾಡು ಬಂತು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

bigg

BBK11 ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ 5 ಕೋಟಿ ಲಂಚ, ರೋಲ್ ಕಾಲ್ ಲಾಯರ್..

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

6-hunsur

Hunsur: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಹಲ್ಲೆ, ಆರೋಪಿ ಬಂಧನ

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bagheera movie song out

Bagheera ರುಧಿರ ಗಾನ…; ಶ್ರೀಮುರಳಿ ಸಿನಿಮಾದ ಹಾಡು ಬಂತು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.