![police crime](https://www.udayavani.com/wp-content/uploads/2024/07/police-crime-2-415x256.jpg)
Sandalwood: ಫ್ಯಾಮಿಲಿ ಡ್ರಾಮಾದಲ್ಲಿ ರಣಹದ್ದು!
Team Udayavani, May 12, 2024, 12:08 PM IST
![10](https://www.udayavani.com/wp-content/uploads/2024/05/10-10-620x372.jpg)
ಕಳೆದ ನಲವತ್ತು ವರ್ಷಗಳಿಂದ ಪೋಷಕ ಕಲಾವಿದನಾಗಿ ಪ್ರಸನ್ನ ಕುಮಾರ್(ಜಂಗ್ಲಿ ಪ್ರಸನ್ನ) ಕನ್ನಡ ಚಿತ್ರರಂಗಕ್ಕೆ ಚಿರಪರಿಚಿತ. ನೂರಾರು ಚಿತ್ರಗಳಲ್ಲಿ ನಟಿಸಿ ನಟನಾಗಿ ಜನಪ್ರಿಯರಾಗಿರುವ ಪ್ರಸನ್ನ ಕುಮಾರ್ “ರಣಹದ್ದು’ ಚಿತ್ರದ ಮೂಲಕ ನಿರ್ದೇಶಕರಾಗಿದ್ದಾರೆ.
ಇವರೇ ಚಿತ್ರದ ನಿರ್ಮಾಪಕರು ಕೂಡ. ಪ್ರಸನ್ನ ಕುಮಾರ್ ಅವರ ಮಕ್ಕಳಾದ ಶಶಾಂಕ್ ಹಾಗೂ ಸೂರಜ್ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಒಬ್ಬ ಮಗ ನಾಯಕನಾಗಿ, ಮತ್ತೂಬ್ಬ ಮಗ ಖಳನಾಯಕನಾಗಿ ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದಾರೆ. ಇತ್ತೀಚಿಗೆ ಈ ಚಿತ್ರದ ಹಾಡುಗಳು ಹಾಗು ಟೀಸರ್ ಬಿಡುಗಡೆಯಾಯಿತು.
ನಿರ್ಮಾಪಕ, ನಿರ್ದೇಶಕ ಪ್ರಸನ್ನ ಕುಮಾರ್ ಮಾತನಾಡಿ, ಕಳೆದ ನಲವತ್ತು ವರ್ಷಗಳಿಂದ ಕನ್ನಡ ಚಿತ್ರರಂಗ ನನಗೆ ಅನ್ನ ಹಾಕುತ್ತಿದೆ. ಅದಕ್ಕೆ ನಾನು ಹಾಗೂ ನನ್ನ ಕುಟುಂಬ ಚಿರಋಣಿ. ಕೆಲವು ವರ್ಷಗಳ ಹಿಂದೆ ಅಪಘಾತದಲ್ಲಿ ನನ್ನ ಕಾಲಿಗೆ ತೀವ್ರ ಪೆಟ್ಟಾಗಿತ್ತು. ಆ ಸಮಯದಲ್ಲಿ ತುಂಬಾ ಯೋಚನೆ ಮಾಡುತ್ತಿದೆ. ಸ್ವಲ್ಪ ದಿನಗಳ ನಂತರ ಚಿತ್ರವೊಂದನ್ನು ನಿರ್ಮಾಣದ ಜೊತೆಗೆ ನಿರ್ದೇಶನ ಕೂಡ ಮಾಡಬೇಕೆಂದು ಆಸೆಯಾಯಿತು. ಆ ಆಸೆಯನ್ನು ಮಕ್ಕಳ ಬಳಿ ಹೇಳಿಕೊಂಡೆ. ನನ್ನ ಆಸೆಗೆ ಮಕ್ಕಳು ಆಸರೆಯಾದರು. ಈ ಚಿತ್ರದಲ್ಲಿ ನಟಿಸುವ ಮೂಲಕ ನನ್ನ ಇಬ್ಬರು ಮಕ್ಕಳು ಚಿತ್ರರಂಗ ಪ್ರವೇಶಿಸಿದ್ದಾರೆ. ಅನೇಕ ಜನ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಹಣವಿಲ್ಲದ ಮನುಷ್ಯನನ್ನು ಸಮಾಜ ಹೇಗೆ ನೋಡುತ್ತದೆ ಎಂಬುದೇ ಚಿತ್ರದ ಕಥಾ ಸಾರಾಂಶ. ಅಷ್ಟೇ ಅಲ್ಲದೆ ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ಚಿತ್ರೀಕರಣ ಮುಕ್ತಾಯವಾಗಿ ಬಿಡುಗಡೆ ಹಂತದಲ್ಲಿದೆ’ ಎಂದರು.
ಟಾಪ್ ನ್ಯೂಸ್
![police crime](https://www.udayavani.com/wp-content/uploads/2024/07/police-crime-2-415x256.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಶೀಘ್ರದಲ್ಲೇ ಕಿಚ್ಚ ಸುದೀಪ್ ʼಹುಚ್ಚʼ, ಶಿವರಾಜ್ ಕುಮಾರ್ ʼಜೋಗಿʼ ಸಿನಿಮಾ ರೀ-ರಿಲೀಸ್](https://www.udayavani.com/wp-content/uploads/2024/07/15-2-150x90.jpg)
ಶೀಘ್ರದಲ್ಲೇ ಕಿಚ್ಚ ಸುದೀಪ್ ʼಹುಚ್ಚʼ, ಶಿವರಾಜ್ ಕುಮಾರ್ ʼಜೋಗಿʼ ಸಿನಿಮಾ ರೀ-ರಿಲೀಸ್
![“ದರ್ಶನ್ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್](https://www.udayavani.com/wp-content/uploads/2024/07/13-2-150x90.jpg)
“ದರ್ಶನ್ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್
![Renukaswamy Case: ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ](https://www.udayavani.com/wp-content/uploads/2024/07/12-3-150x90.jpg)
Renukaswamy Case: ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ
![ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್ ಮದುವೆ ಕುರಿತು ತಾಯಿ ಮಾಲತಿ ಮಾತು](https://www.udayavani.com/wp-content/uploads/2024/07/tharun-150x83.jpg)
ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್ ಮದುವೆ ಕುರಿತು ತಾಯಿ ಮಾಲತಿ ಮಾತು
![Divorce Case: ಯುವ ರಾಜ್ಕುಮಾರ್ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ](https://www.udayavani.com/wp-content/uploads/2024/07/9-3-150x90.jpg)
Divorce Case: ಯುವ ರಾಜ್ಕುಮಾರ್ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
![police crime](https://www.udayavani.com/wp-content/uploads/2024/07/police-crime-2-150x92.jpg)
Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ
![1-dssd](https://www.udayavani.com/wp-content/uploads/2024/07/1-dssd-150x101.jpg)
Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ
![1-wewqewqe](https://www.udayavani.com/wp-content/uploads/2024/07/1-wewqewqe-150x101.jpg)
Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ
![1-sa-dsadsa](https://www.udayavani.com/wp-content/uploads/2024/07/1-sa-dsadsa-150x84.jpg)
Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ
![Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು](https://www.udayavani.com/wp-content/uploads/2024/07/kollur-150x93.jpg)
Kollur: ಸೊಸೈಟಿಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.