![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-415x255.jpg)
Kannada Cinema; ‘ಶಾಖಾಹಾರಿ’ಯಲ್ಲಿ ರಂಗಾಯಣ ರಘು
Team Udayavani, Dec 23, 2023, 6:13 PM IST
![rangayana raghu in shakahari movie](https://www.udayavani.com/wp-content/uploads/2023/12/raghu-620x342.jpg)
ಈಗಾಗಲೇ ಕನ್ನಡದಲ್ಲಿ ನೂರಾರು ವಿಭಿನ್ನ ಪಾತ್ರಗಳಲ್ಲಿ ಪ್ರೇಕ್ಷಕರನ್ನು ರಂಜಿಸಿರುವ ನಟ ರಂಗಾಯಣ ರಘು, ಸದ್ಯ “ಶಾಖಾಹಾರಿ’ ಆಗಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ!
ಹೌದು, ರಂಗಾಯಣ ರಘು ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ “ಶಾಖಾಹಾರಿ’ ಸಿನಿಮಾ ಹೊಸ ವರ್ಷದಲ್ಲಿ ತೆರೆಗೆ ಬರುತ್ತಿದೆ. ಈಗಾಗಲೇ ಸದ್ದಿಲ್ಲದೆ “ಶಾಖಾಹಾರಿ’ಯ ಕೆಲಸಗಳು ಪೂರ್ಣಗೊಂಡಿದ್ದು, ಸದ್ಯ ಈ ಸಿನಿಮಾದ ಟೈಟಲ್, ಫಸ್ಟ್ಲುಕ್ ಪೋಸ್ಟರ್, ಟೀಸರ್ ಸಿನಿಪ್ರಿಯರ ಗಮನ ಸೆಳೆಯುತ್ತಿದೆ. “ಶಾಖಾಹಾರಿ’ ಸಸ್ಪೆನ್ಸ್ ಕಂ ಕ್ರೈಂ-ಥ್ರಿಲ್ಲರ್ ಶೈಲಿಯ ಸಿನಿಮಾ. ಒಂದು ಮರ್ಡರ್ ಮಿಸ್ಟರಿ, ಅದರ ಹಿಂದಿನ ನಿಗೂಢ ಹುಡುಕಾಟದ ಸುತ್ತ ಇಡೀ ಸಿನಿಮಾದ ಕಥಾ ಹಂದರ ಸಾಗುತ್ತದೆ. ಆಕಸ್ಮಿಕ ಘಟನೆಗಳು ಹೇಗೆ ಮುಗ್ಧನೊಬ್ಬನನ್ನು ಅಪರಾಧಿಯನ್ನಾಗಿ ಮಾಡುತ್ತದೆ. ತನ್ನ ಅಸ್ವಿತ್ವಕ್ಕಾಗಿ ಆತ ಹೇಗೆ ಹೋರಾಡುತ್ತಾನೆ ಎಂಬುದೇ ಸಿನಿಮಾದ ಎಳೆ. ಪ್ರತಿಯೊಂದು ಪಾತ್ರಗಳಿಗೂ ಅದರದ್ದೇ ಆದ ಮಹತ್ವವಿದ್ದು, ಇಡೀ ಸಿನಿಮಾದ ಕಥೆ ಮಲೆನಾಡು ಹಿನ್ನೆಲೆಯಲ್ಲಿ ಸಾಗಲಿದೆ. ತೀರ್ಥಹಳ್ಳಿ ಸುತ್ತಮುತ್ತ “ಶಾಖಾಹಾರಿ’ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ.
ಹಾಸ್ಯ ನಟನಾಗಿ, ಖಳನಟನಾಗಿ, ಪೋಷಕ ನಟನಾಗಿ ನೂರಾರು ಪಾತ್ರಗಳನ್ನು ಲೀಲಾಜಾಲವಾಗಿ ನಿಭಾಯಿಸಿರುವ ನಟ ರಂಗಾಯಣ ರಘು, “ಶಾಖಾಹಾರಿ’ ಸಿನಿಮಾದಲ್ಲಿ ಮುಖ್ಯಪಾತ್ರದಲ್ಲಿ ಹೋಟೆಲ್ನ ಅಡುಗೆ ಭಟ್ಟನಾಗಿ ತುಂಬ ಗಂಭೀರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಶಿವಮೊಗ್ಗ ಮೂಲದ ಸಂದೀಪ್ ಸುಂಕದ್ ಮೊದಲ ಬಾರಿಗೆ “ಶಾಖಾಹಾರಿ’ ಸಿನಿಮಾಕ್ಕೆ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. “ಕೀಳಂಬಿ ಮೀಡಿಯಾ ಲ್ಯಾಬ್ (ಪ್ರೈ) ಲಿ’ ಬ್ಯಾನರ್ನಲ್ಲಿ ಮಲೆನಾಡು ಮೂಲದ ಉದ್ಯಮಿ ರಾಜೇಶ್ ಕೀಳಂಬಿ ಹಾಗೂ ರಂಜಿನಿ ಪ್ರಸನ್ನ ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-415x255.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್ ಲಾಂಚ್](https://www.udayavani.com/wp-content/uploads/2024/07/9-2-150x90.jpg)
Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್ ಲಾಂಚ್
![18](https://www.udayavani.com/wp-content/uploads/2024/07/18-150x90.jpg)
Actress Akshita Bopaiah: ತಮಿಳಿನತ್ತ ನವನಟಿ ಅಕ್ಷಿತಾ ಸಿನಿಯಾನ
![Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ](https://www.udayavani.com/wp-content/uploads/2024/07/17-150x90.jpg)
Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ
![ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್](https://www.udayavani.com/wp-content/uploads/2024/07/15-150x90.jpg)
ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್
![Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?](https://www.udayavani.com/wp-content/uploads/2024/07/14-150x90.jpg)
Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?
MUST WATCH
ಹೊಸ ಸೇರ್ಪಡೆ
![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-150x92.jpg)
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
![1-honnavara](https://www.udayavani.com/wp-content/uploads/2024/07/1-honnavara-150x90.jpg)
Honnavara: ಪಟ್ಟಣ ಪಂಚಾಯತ್ ನಲ್ಲಿ ಲೋಕಾಯುಕ್ತ ದಾಳಿ
![1-vijayendra](https://www.udayavani.com/wp-content/uploads/2024/07/1-vijayendra-150x100.jpg)
CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ
![vijayapura](https://www.udayavani.com/wp-content/uploads/2024/07/vijayapura-2-150x90.jpg)
Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ
![1-raju](https://www.udayavani.com/wp-content/uploads/2024/07/1-raju-150x85.jpg)
Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.