![8-ptr-bus-campaign](https://www.udayavani.com/wp-content/uploads/2024/06/8-ptr-bus-campaign-415x249.jpg)
First look poster; ರಂಗಾಯಣ ರಘು ಈಗ ‘ಶಾಖಾಹಾರಿ’
Team Udayavani, Oct 22, 2023, 3:38 PM IST
![rangayana raghu in shakhahari movie](https://www.udayavani.com/wp-content/uploads/2023/10/ragh-620x342.jpg)
ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ರಂಗಾಯಣ ರಘು ಮುಖ್ಯಭೂಮಿಕೆಯಲ್ಲಿ ನಟಿಸುರುತ್ತಿರುವ “ಶಾಖಾಹಾರಿ’ ಸಿನಿಮಾದ ಫಸ್ಟಲುಕ್ ರಿಲೀಸ್ ಆಗಿದೆ. ಈ ಹಿಂದೆ ಯೋಗರಾಜ್ ಭಟ್ ಟೈಟಲ್ ಪೋಸ್ಟರ್ ಅನಾವರಣ ಮಾಡಿದ್ದರು. ಇದೀಗ ಶಾಖಾಹಾರಿ ಸಿನಿಮಾದ ರಂಗಾಯಣ ರಘು ಅವರ ಲುಕ್ ಬಿಡುಗಡೆ ಮಾಡಿದ್ದಾರೆ.
ಸಂದೀಪ್ ಸುಂಕದ್ ಶಾಖಾಹಾರಿ ಸಿನಿಮಾದ ಸೂತ್ರಧಾರ. ಈಗಾಗಲೇ ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿರುವ ಅವರಿಗೆ ಇದು ಚೊಚ್ಚಲ ಸಿನಿಮಾ. ಸಹ-ನಿರ್ದೇಶಕನಾಗಿ, ಬರಹಗಾರರಾಗಿ ಅನುಭವ ಪಡೆದಿರುವ ಸಂದೀಪ್, “ಶಾಖಾಹಾರಿ’ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
ಮಲೆನಾಡಿನ ತೀರ್ಥಹಳ್ಳಿಯ ಒಂದು ಊರಿನಲ್ಲಿ ನಡೆಯುವ ಒಂದಷ್ಟು ನಿಗೂಢ ಘಟನೆಗಳ ಸುತ್ತಮುತ್ತ ಈ ಸಿನಿಮಾದ ಕಥೆ ಸಾಗುತ್ತದೆ. ಹೋಟೆಲ್ನಲ್ಲಿ ಅಡುಗೆ ಮಾಡುವ ಭಟ್ಟನಾಗಿ ರಂಗಾಯಣ ರಘು ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ ನಟಿಸಿದ್ದಾರೆ. ಸುಜಯ್ ಶಾಸ್ತ್ರಿ ಕೂಡ ಈ ಸಿನಿಮಾದ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಪ್ರತಿಮಾ ನಾಯಕ್, ಹರಿಣಿ, ವಿನಯ್ ಯು.ಜೆ., ನಿಧಿ ಹೆಗ್ಡೆ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿದ್ದಾರೆ.
ರಾಜೇಶ್ ಕೀಳಂಬಿ ಮತ್ತು ರಂಜಿನಿಪ್ರಸನ್ನ ಅವರು ಜೊತೆಗೂಡಿ ಕೀಳಂಬಿ ಮೀಡಿಯಾ ಲ್ಯಾಬ್ ಸಂಸ್ಥೆಯ ಮೂಲಕ “ಶಾಖಾಹಾರಿ’ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ವಿಶ್ವಜಿತ್ ರಾವ್ ಛಾಯಾಗ್ರಹಣ, ಶಶಾಂಕ್ ನಾರಾಯಣ ಸಂಕಲನ, ಮಯೂರ್ ಅಂಬೆಕಲ್ಲು ಸಂಗೀತ ಚಿತ್ರಕ್ಕಿದೆ. ಆಶಿಕ್ ಕುಸುಗೊಳ್ಳಿ ಅವರು ಗ್ರೇಡಿಂಗ್ ಮಾಡುತ್ತಿದ್ದಾರೆ.
ಈ ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಸದ್ಯಕ್ಕೆ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಪೂರ್ತಿ ಮಲೆನಾಡಿನಲ್ಲೇ ಚಿತ್ರೀಕರಣ ಆಗಿರುವ “ಶಾಖಾ ಹಾರಿ’ ಸಿನಿಮಾದಲ್ಲಿ ಮಲೆನಾಡಿನ ಅನೇಕರು ಕೆಲಸ ಮಾಡಿದ್ದಾರೆ ಎಂಬುದು ವಿಶೇಷ.
ಟಾಪ್ ನ್ಯೂಸ್
![8-ptr-bus-campaign](https://www.udayavani.com/wp-content/uploads/2024/06/8-ptr-bus-campaign-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![8-ptr-bus-campaign](https://www.udayavani.com/wp-content/uploads/2024/06/8-ptr-bus-campaign-150x90.jpg)
Udayavani Campaign: 14 ಹೊಸ ಬಸ್ ಓಡಾಟಕ್ಕೆ ಕೆಎಸ್ಆರ್ಟಿಸಿ ಸಿದ್ಧ
![NEET Paper Leak case: ಸಿಬಿಐನಿಂದ ಜಾರ್ಖಂಡ್ ಕಾಲೇಜಿನ ಪ್ರಾಂಶುಪಾಲರ ಬಂಧನ](https://www.udayavani.com/wp-content/uploads/2024/06/CBI-3-150x84.jpg)
NEET Paper Leak case: ಸಿಬಿಐನಿಂದ ಜಾರ್ಖಂಡ್ ಕಾಲೇಜಿನ ಪ್ರಾಂಶುಪಾಲರ ಬಂಧನ
![ವಿಜಯೇಂದ್ರ](https://www.udayavani.com/wp-content/uploads/2024/06/vijayendra-1-1-150x83.jpg)
Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ
![Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?](https://www.udayavani.com/wp-content/uploads/2024/06/2-19-150x90.jpg)
Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?
![Postponed UGC NET, CSIR NET exam date announced](https://www.udayavani.com/wp-content/uploads/2024/06/net-150x83.jpg)
NTA; ಮುಂದೂಡಲಾಗಿದ್ದ UGC NET, CSIR NET ಪರೀಕ್ಷಾ ದಿನಾಂಕ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.