Rani Movie: ದೊಡ್ಡವರು ಬರದಿದ್ದರೆ ಏನಂತೆ, ಜನ ಬಂದ್ರೆ ಸಾಕು!


Team Udayavani, Sep 10, 2024, 4:10 PM IST

Rani Movie: ದೊಡ್ಡವರು ಬರದಿದ್ದರೆ ಏನಂತೆ, ಜನ ಬಂದ್ರೆ ಸಾಕು!

ಯಾವುದೇ ಕ್ಷೇತ್ರವಾದರೂ ಅಲ್ಲಿ ನೀವು ಗೆದ್ದು ತೋರಿಸುವವರೆಗೆ ನಿಮ್ಮ “ಕಥೆ’ಗಳಿಗೆ ಬೆಲೆ ಇರುವುದಿಲ್ಲ. ಒಮ್ಮೆ ನೀವು ಗೆದ್ದುಬಿಟ್ಟರೆ ನೀವು ಹೇಳುವ “ಯಾವುದೇ’ ಕಥೆಗಳನ್ನಾದರೂ ಕಣ್ಣಿಗೊತ್ತಿಕೊಂಡು ಕೇಳುತ್ತಾರೆ. ಸಿನಿಮಾ ರಂಗದಲ್ಲಂತೂ ಇದು ಸ್ವಲ್ಪ ಹೆಚ್ಚೇ. ಅದರಲ್ಲೂ ಹೊಸಬರ ಅಥವಾ ಒಂದು ಗೆಲುವಿಗಾಗಿ ಹಂಬಲಿಸುವ ತಂಡವಾದರೆ ಅವರನ್ನು ಬೆಂಬಲಿಸುವವರ ಸಂಖ್ಯೆ ತೀರಾ ಕಡಿಮೆ.

ಈ ಅನುಭವ “ರಾನಿ’ ತಂಡಕ್ಕೆ ಆಗಿದೆ. ಈಗಾಗಲೇ ಟೀಸರ್‌, ಟ್ರೇಲರ್‌ ಮೂಲಕ ಸದ್ದು ಮಾಡುತ್ತಿರುವ “ರಾನಿ’ ಚಿತ್ರ ಸೆ.12ಕ್ಕೆ ತೆರೆಕಾಣುತ್ತಿದೆ. ಈ ಚಿತ್ರದಲ್ಲಿ ಕಿರಣ್‌ ರಾಜ್‌ ಹೀರೋ ಆಗಿ ನಟಿಸಿದ್ದು, ಗುರುತೇಜ್‌ ಶೆಟ್ಟಿ ನಿರ್ದೇಶನವಿದೆ. ನಿರ್ಮಾಪಕರು ಕೂಡಾ ಹೊಸಬರು. ಈ ತಂಡ ಚಿತ್ರದ ಟ್ರೇಲರ್‌ ರಿಲೀಸ್‌ ಅಥವಾ ಯಾವುದಾದರೂ ಒಂದು ಇವೆಂಟ್‌ ಅನ್ನು ಚಿತ್ರರಂಗದ ಸ್ಟಾರ್‌ ನಟ ಅಥವಾ ಖ್ಯಾತನಾಮರನ್ನು ಕರೆಸಿ ಮಾಡಬೇಕೆಂದು ಕನಸು ಕಂಡಿತ್ತಂತೆ. ಅದರಂತೆ ಅನೇಕರನ್ನು ಸಂಪರ್ಕಿಸಿದೆ. ಆದರೆ, ಹೊಸಬರ ತಂಡ ಎಂಬ ಕಾರಣಕ್ಕೋ ಏನೋ ಯಾರು ಕೂಡಾ ಈ ತಂಡದ ಬೆಂಬಲಕ್ಕೆ ನಿಂತಿಲ್ಲ. ಇದು ತಂಡಕ್ಕೆ ತುಂಬಾ ಬೇಸರ ತಂದಿದೆ.

ಇತ್ತೀಚೆಗೆ ನಡೆದ ಚಿತ್ರದ ಟೈಟಲ್‌ ಟ್ರ್ಯಾಕ್‌ ರಿಲೀಸ್‌ ಇವೆಂಟ್‌ನಲ್ಲಿ ನಿರ್ದೇಶಕ ಗುರುತೇಜ್‌ ಶೆಟ್ಟಿ ಈ ಕುರಿತ ತಮ್ಮ ಬೇಸರವನ್ನು ಹೊರ ಹಾಕಿದರು. ಚಿತ್ರದ ಟ್ರೇಲರ್‌ ಬಿಡುಗಡೆಯನ್ನು ದೊಡ್ಡದಾಗಿ ಮಾಡಬೇಕು, ದೊಡ್ಡವರನ್ನು ಕರೆಸಬೇಕೆಂಬ ಆಸೆ ಇತ್ತು. ಈ ಸಂಬಂಧ ಹಲವು ದೊಡ್ಡ ನಟರನ್ನು ಕೇಳಿದ್ದೇವೆ. ಒಬ್ಬೊಬ್ಬರು ಒಂದೊಂದು ಕಾರಣ ಹೇಳಿದರು.

ಬಹುಶಃ ಅವರೆಲ್ಲರೂ ಬಿಝಿ ಇರಬಹುದು. ನಿರ್ಮಾಪಕರು ಹೊಸಬರು. ಯಾರೂ ಬರದಿದ್ದಾಗ ಅವರಿಗೆ ಸಹಜವಾಗಿಯೇ ಆತಂಕ ಕಾಡುತ್ತದೆ. ಮಾಧ್ಯಮದವರು ಬಿಟ್ಟರೆ ನಮ್ಮ ಜೊತೆಗೆ ಯಾರೂ ಇಲ್ಲ. ಹಾಗಂತ ಯಾರಿಗೂ ಬಕೆಟ್‌ ಹಿಡಿಯುವುದಕ್ಕೆ ನನಗೆ ಸಾಧ್ಯವಿಲ್ಲ. ನಾನು ಸ್ವಾಭಿಮಾನಿ. ಹಾಗಾಗಿ, ನಿರ್ಮಾಪಕರಿಗೆ ಈ ಮೂಲಕ ಕ್ಷಮೆ ಕೇಳುತ್ತೇನೆ. ಯಾರೂ ಬರದಿದ್ದರೇನು? ಜನ ಬರುತ್ತಾರೆ, ನಮ್ಮ ಕೈ ಹಿಡಿಯುತ್ತಾರೆ ಎಂಬ ನಂಬಿಕೆ ಇದೆ’ ಎಂದರು. ಚಿತ್ರದಲ್ಲಿ ನಟಿಸಿರುವ ರವಿಶಂಕರ್‌, ಮಠ ಗುರುಪ್ರಸಾದ್‌ ಕೂಡಾ ಈ ಸಿನಿಮಾದ ಕಾರ್ಯಕ್ರಮಗಳಿಂದ ದೂರವೇ ಉಳಿದಿದ್ದಾರೆ. “ನಾವು ಸಿನಿಮಾವನ್ನು ಕಾಟಾಚಾರಕ್ಕೆ ಮಾಡಿಲ್ಲ. ತುಂಬಾ ಇಷ್ಟಪಟ್ಟು ಮಾಡಿದ್ದೇವೆ’ ಎನ್ನುವುದು ಗುರುತೇಜ್‌ ಶೆಟ್ಟಿ ಮಾತು.

“ರಾನಿ’ ಚಿತ್ರದ ಶೀರ್ಷಿಕೆ ಗೀತೆಯನ್ನು ಹಿರಿಯ ಚಿತ್ರಸಾಹಿತಿ ಜೆ.ಕೆ. ಭಾರವಿ ಚಿತ್ರದ ಹಾಡು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. ಈ ಹಾಡನ್ನು ಪ್ರಮೋದ್‌ ಮರವಂತೆ ಬರೆದರೆ, ಸಚಿನ್‌ ಬಸ್ರೂರು ಸಂಗೀತ ಸಂಯೋಜಿಸುವುದರ ಜೊತೆಗೆ ಹಾಡಿದ್ದಾರೆ. ಚಂದ್ರಕಾಂತ ಪೂಜಾರಿ ಮತ್ತು ಉಮೇಶ್‌ ಹೆಗ್ಡೆ ಈ ಚಿತ್ರದ ನಿರ್ಮಾಪಕರು.

ಟಾಪ್ ನ್ಯೂಸ್

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

7-uv-fusion

UV Fusion: ಇಳೆಗೆ ಮಳೆಯ ಸುಮಪಾತದ ಸೊಗಸು

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

5-uv-fusion

UV Fusion: ರಕ್ಷಕರೇ ಭಕ್ಷಕರಾಗುತ್ತಿದ್ದಾರೆ ಎಚ್ಚರಿಕೆ

ಕೆಕೆಆರ್ ಡಿಬಿ ಗೆ ಕೇಂದ್ರದ ಅನುದಾನ ಕೋರಿ ನಿಯೋಗ: ಡಾ. ಅಜಯಸಿಂಗ್

Kalyana Karnataka; ಕೆಕೆಆರ್ ಡಿಬಿ ಗೆ ಕೇಂದ್ರದ ಅನುದಾನ ಕೋರಿ ನಿಯೋಗ: ಡಾ. ಅಜಯಸಿಂಗ್

Renukaswamy Case: ಸೆ.30ರವರೆಗೆ ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Renukaswamy Case: ಸೆ.30ರವರೆಗೆ ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Yadgir: ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ

Yadgir: ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy Case: ಸೆ.30ರವರೆಗೆ ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Renukaswamy Case: ಸೆ.30ರವರೆಗೆ ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

11

Kannada Short Movie: ದುಡ್ಡಿನ ಸುತ್ತ ಜೋಕರ್‌ ಆಲ್ಬಮ್‌

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Ranaksha

Ranaksha: ಫ್ಯಾಮಿಲಿ ಡ್ರಾಮಾದಲ್ಲಿ ಸೀರುಂಡೆ ರಘು

Sarvasva Kannada video song

Sarvasva: ಹಾಡಲ್ಲಿ ʼಸರ್ವಸ್ವʼ ಕನಸು; ನವತಂಡದ ಪ್ರಯತ್ನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

8-uv-fusion

Rain: ಇಳೆ ತಂಪೆರೆವ ಮಳೆರಾಯ

7-uv-fusion

UV Fusion: ಇಳೆಗೆ ಮಳೆಯ ಸುಮಪಾತದ ಸೊಗಸು

6-uv-fusion

WhatsApp Status: ಬಳಕೆಯ ಅರಿವು ಮುಖ್ಯ

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.