ಹೊಸ ಲುಕ್‌ನಲ್ಲಿ ರವಿಚಂದ್ರನ್‌

ಕೋಟಿಗೊಬ್ಬ 3 ಸೆಟ್‌ನಲ್ಲಿ ಸುದೀಪ್‌ ಜೊತೆ ಭೇಟಿ

Team Udayavani, Jul 25, 2019, 3:02 AM IST

Sudeep–Ravichandran

ಅನುಮಾನ ಬೇಡ ಸುದೀಪ್‌ ಜೊತೆ ಈ ಫೋಟೋದಲ್ಲಿರುವುದು ಕ್ರೇಜಿಸ್ಟಾರ್‌ ರವಿಚಂದ್ರನ್‌. ಅರೇ, ಉದ್ದನೆಯ ಬಿಳಿ ಗಡ್ಡ ಬಿಟ್ಟು ಹೊಸ ಅವತಾರದಲ್ಲಿರುವ ರವಿಚಂದ್ರನ್‌, ಸುದೀಪ್‌ ಜೊತೆಗೆ ಹೊಸ ಚಿತ್ರದಲ್ಲೇನಾದರೂ ಕಾಣಿಸಿಕೊಳ್ಳುತ್ತಿದ್ದಾರಾ? ಇಂಥದ್ದೊಂದು ಪ್ರಶ್ನೆ ಸಹಜವಾಗಿಯೇ ಎದುರಾಗುತ್ತದೆ. ಈ ಪ್ರಶ್ನೆಗೆ ಕಾರಣ, ಈಗಾಗಲೇ ರವಿಚಂದ್ರನ್‌ ಅವರು ಸುದೀಪ್‌ ಅಭಿನಯದ “ಮಾಣಿಕ್ಯ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

ಅದಾದ ಬಳಿಕ “ಹೆಬ್ಬುಲಿ ‘ ಚಿತ್ರದಲ್ಲೂ ನಟಿಸಿದ್ದರು. ಈಗ ಇನ್ನೊಂದು ಚಿತ್ರದಲ್ಲಿ ನಟಿಸಲಿದ್ದಾರೆಯೇ? ನಟಿಸಿದರೂ ಅಚ್ಚರಿ ಇಲ್ಲ. ಅಷ್ಟಕ್ಕೂ ಈ ಅಪರೂಪದ ಭೇಟಿಯಾಗಿದ್ದು, ಹೈದರಾಬಾದ್‌ನ ರಾಮೋಜಿರಾವ್‌ ಫಿಲ್ಮ್ಸಿಟಿಯಲ್ಲಿ. ಹೌದು, ಸುದೀಪ್‌ ಅಭಿನಯದ “ಪೈಲ್ವಾನ್‌ ‘ ಬಿಡುಗಡೆಯ ತಯಾರಿಯಲ್ಲಿದೆ. ಅದರ ಜೊತೆಯಲ್ಲೇ ಸುದೀಪ್‌ “ಕೋಟಿಗೊಬ್ಬ 3 ‘ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ರಾಮೋಜಿ ಫಿಲ್ಮ್ಸಿಟಿಯಲ್ಲಿ ನಡೆಯುತ್ತಿರುವ “ಕೋಟಿಗೊಬ್ಬ 3 ‘ ಚಿತ್ರದ ಚಿತ್ರೀಕರಣದ ಸೆಟ್‌ಗೆ ರವಿಚಂದ್ರನ್‌ ಭೇಟಿ ನೀಡಿದ್ದಾರೆ.

ಅಷ್ಟಕ್ಕೂ ರವಿಚಂದ್ರನ್‌ ಅವರು ಸುದೀಪ್‌ ಚಿತ್ರದ ಸೆಟ್‌ಗೆ ಭೇಟಿಯಾಗಲು ಕಾರಣ, ರವಿಚಂದ್ರನ್‌ ಅಭಿನಯಿಸುತ್ತಿರುವ ಚಿತ್ರದ ಚಿತ್ರೀಕರಣ ಕೂಡ ರಾಮೋಜಿ ಫಿಲ್ಮ್ಸಿಟಿಯಲ್ಲೇ ನಡೆಯುತ್ತಿದೆ. ಬಿಡುವಿನ ಸಮಯದಲ್ಲಿ ರವಿಚಂದ್ರನ್‌ ಅವರು, “ಕೋಟಿಗೊಬ್ಬ 3 ‘ ಸೆಟ್‌ಗೆ ಸಡನ್‌ ಭೇಟಿ ಕೊಟ್ಟು, ಸುದೀಪ್‌ಗೆ ಅಚ್ಚರಿ ಮೂಡಿಸಿದ್ದಾರೆ. ಈ ಅಪರೂಪದ ಕ್ಷಣದ ಬಗ್ಗೆ ಸ್ವತಃ ಸುದೀಪ್‌ ಅವರೇ, ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ರವಿಚಂದ್ರನ್‌ ಜೊತೆಗಿರುವ ಸೆಲ್ಫಿ ಫೋಟೋವೊಂದನ್ನು ಹಾಕಿ ವಿಷಯ ಹಂಚಿಕೊಂಡಿದ್ದು, ಸಾಮಾಜಿಕ ತಾಣದಲ್ಲಿ ಇಬ್ಬರ ಭೇಟಿ ಕುರಿತು ಸಾಕಷ್ಟು ಮೆಚ್ಚುಗೆ ಹಾಗು ಪ್ರತಿಕ್ರಿಯೆಗಳು ಸಿಗುತ್ತಿವೆ.

ಅಂದಹಾಗೆ, ರವಿಚಂದ್ರನ್‌ ಅವರು ಈ ಫೋಟೋದಲ್ಲಿ ಸಖತ್‌ ಲುಕ್‌ನಲ್ಲಿ ಮಿಂಚುತ್ತಿದ್ದಾರೆ. ಅವರ ಹೊಸ ಶೈಲಿಯ ದಾಡಿ ನೋಡಿದರೆ, ಅವರು ಹೊಸ ಚಿತ್ರದಲ್ಲೊಂದು ವಿಶೇಷ ಪಾತ್ರ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಒಂದು ಮೂಲದ ಪ್ರಕಾರ, ರವಿಚಂದ್ರನ್‌ ಅವರೇ, ಸದ್ದಿಲ್ಲದೆಯೇ ಒಂದು ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ, ಅದಕ್ಕೆ ಹೀರೋ ಯಾರು, ಯಾರೆಲ್ಲಾ ಇದ್ದಾರೆ, ಆ ಸಿನಿಮಾದ ಹೆಸರೇನು ಇತ್ಯಾದಿ ಕುರಿತು ಮಾಹಿತಿ ಇಲ್ಲ.

ಆದರೆ, ಅವರ ಚಿತ್ರವೊಂದು ರಾಮೋಜಿ ಫಿಲ್ಮ್ಸಿಟಿಯಲ್ಲಿ ಚಿತ್ರೀಕರಣ ನಡೆಯುತ್ತಿರುವುದಂತೂ ಸತ್ಯ. ಇನ್ನು, ಇತ್ತೀಚೆಗೆ ಹೈದರಾಬಾದ್‌ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಖಳನಟ ರವಿಶಂಕರ್‌ ಕೂಡ ಸುದೀಪ್‌ ಅವರನ್ನು ಭೇಟಿಯಾಗಿದ್ದರು. ಅ ಸಮಯದಲ್ಲಿ ಸುದೀಪ್‌ ತೆಗೆದ ಸೆಲ್ಫಿ ಫೋಟೋ ಕೂಡ ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿದೆ. ಅತ್ತ, ರಾಘವೇಂದ್ರ ರಾಜಕುಮಾರ್‌ ಅವರು ಕೂಡ ಸುದೀಪ್‌ ಅವರನ್ನು ಭೇಟಿ ಮಾಡಿದ್ದ ಫೋಟೋವೊಂದು ಸೋಶಿಯಲ್‌ ಮೀಡಿಯಾದಲ್ಲಿ ಓಡಾಡುತ್ತಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.