![India W vs Sa W: ಗೆಲ್ಲಬೇಕಾದ ಒತ್ತಡದಲ್ಲಿ ಕೌರ್ ಬಳಗ](https://www.udayavani.com/wp-content/uploads/2024/07/18-1-415x249.jpg)
Renukaswamy Case: ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ
Team Udayavani, Jul 4, 2024, 3:21 PM IST
![Renukaswamy Case: ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ](https://www.udayavani.com/wp-content/uploads/2024/07/12-3-620x372.jpg)
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy case) ನ್ಯಾಯಾಂಗ ಬಂಧನದಲ್ಲಿರುವ ದರ್ಶನ್,(Actor Darshan) ಪವಿತ್ರಾ ಗೌಡ (Pavithra Gowda) ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಗುರುವಾರ(ಜು.4ರಂದು) ಮುಕ್ತಾಯವಾದ ಹಿನ್ನೆಲೆಯಲ್ಲಿ ಆನ್ ಲೈನ್ ಮೂಲಕ ಆರೋಪಿಗಳನ್ನು ಕೋರ್ಟಿಗೆ ಹಾಜರುಪಡಿಸಲಾಗಿದೆ.
ಆನ್ಲೈನ್ ಮೂಲಕ ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿದ್ದು, ಜು.18ವರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ.
ವಿಡಿಯೋ ಕಾನ್ಫೆರೆನ್ಸ್ ಮೂಲಕ ತುಮಕೂರು ಹಾಗೂ ಪರಪ್ಪನ ಅಗ್ರಹಾರ ಜೈಲಿನಿಂದ ಆರೋಪಿಗಳು ಆರ್ಥಿಕ ಅಪರಾಧಗಳ ಕೋರ್ಟ್ ಗೆ ಹಾಜರಾಗಿದ್ದರು. ಈ ವೇಳೆ ಎಸ್ ಪಿಪಿ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡುವಂತೆ ಎಸ್ ಪಿಪಿ ರಿಮ್ಯಾಂಡ್ ಅರ್ಜಿಯನ್ನು ಸಲ್ಲಿಸಿದ್ದು, ಅದರಂತೆ ಕೋರ್ಟ್ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜು.18ರವರೆಗೆ ವಿಸ್ತರಿಸಿದೆ.
ಪವಿತ್ರಾ ಗೌಡ ಅವರಿಗೆ ಆಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕಾಗಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ಅಪಹರಿಸಿ ಶೆಡ್ ವೊಂದರಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಮೊದಲಿಗೆ 18 ಮಂದಿಯನ್ನು ಬಂಧಿಸಲಾಗಿತ್ತು.
ಪ್ರಕರಣ ನಡೆದು ಕೆಲ ದಿನಗಳೇ ಕಳೆದಿದ್ದು, ಇದೀಗ ನಟ ದರ್ಶನ್ ಪರ ಕನ್ನಡ ಚಿತ್ರರಂಗದ ಹಿರಿಯ ನಟಿ ಭಾವನಾ ರಾಮಣ್ಣ, ಹಂಸಲೇಖ, ಕೆ.ಮಂಜು ಸೇರಿದಂತೆ ಹಲವರು ಧ್ವನಿ ಎತ್ತಿ ಶೀಘ್ರದಲ್ಲಿ ಅವರು ಜೈಲಿನಿಂದ ಹೊರಬರಲಿ ಎಂದು ಆಶಿಸಿದ್ದಾರೆ.
ಟಾಪ್ ನ್ಯೂಸ್
![India W vs Sa W: ಗೆಲ್ಲಬೇಕಾದ ಒತ್ತಡದಲ್ಲಿ ಕೌರ್ ಬಳಗ](https://www.udayavani.com/wp-content/uploads/2024/07/18-1-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![HD-Kumaraswamy](https://www.udayavani.com/wp-content/uploads/2024/07/HD-Kumaraswamy-2-150x90.jpg)
MUDA Scam: ಹೆಲಿಕಾಪ್ಟರ್ನಲ್ಲಿ ಮುಡಾ ಕಡತ ರವಾನೆ: ಎಚ್ಡಿಕೆ
![Ramalinga-reddy](https://www.udayavani.com/wp-content/uploads/2024/07/Ramalinga-reddy-150x90.jpg)
Transport: ತತ್ಕ್ಷಣಕ್ಕೆ ಬಸ್ ಯಾನ ದರ ಹೆಚ್ಚಳವಿಲ್ಲ: ಸಚಿವ ರಾಮಲಿಂಗಾರೆಡ್ಡಿ
![CN-Manjunath](https://www.udayavani.com/wp-content/uploads/2024/07/CN-Manjunath-150x90.jpg)
Dengue ತುರ್ತುಸ್ಥಿತಿ: ಸಂಸದ ಡಾ.ಸಿ.ಎನ್. ಮಂಜುನಾಥ್ ಸಲಹೆ
![Renukaswamy case: ದರ್ಶನ್ ಗ್ಯಾಂಗ್ ವಿರುದ್ಧ 200 ಸಾಕ್ಷಿಗಳ ಸಂಗ್ರಹ](https://www.udayavani.com/wp-content/uploads/2024/07/21-150x90.jpg)
Renukaswamy case: ದರ್ಶನ್ ಗ್ಯಾಂಗ್ ವಿರುದ್ಧ 200 ಸಾಕ್ಷಿಗಳ ಸಂಗ್ರಹ
![Laxmi](https://www.udayavani.com/wp-content/uploads/2024/07/Laxmi-150x90.jpg)
Gurantee Scheme: “ಗೃಹಲಕ್ಷ್ಮೀ’ ಜೂನ್ ಹಣ 2 ದಿನದಲ್ಲಿ ಜಮೆ: ಸಚಿವೆ ಹೆಬ್ಬಾಳ್ಕರ್
MUST WATCH
ಹೊಸ ಸೇರ್ಪಡೆ
![India W vs Sa W: ಗೆಲ್ಲಬೇಕಾದ ಒತ್ತಡದಲ್ಲಿ ಕೌರ್ ಬಳಗ](https://www.udayavani.com/wp-content/uploads/2024/07/18-1-150x90.jpg)
India W vs Sa W: ಗೆಲ್ಲಬೇಕಾದ ಒತ್ತಡದಲ್ಲಿ ಕೌರ್ ಬಳಗ
![HD-Kumaraswamy](https://www.udayavani.com/wp-content/uploads/2024/07/HD-Kumaraswamy-2-150x90.jpg)
MUDA Scam: ಹೆಲಿಕಾಪ್ಟರ್ನಲ್ಲಿ ಮುಡಾ ಕಡತ ರವಾನೆ: ಎಚ್ಡಿಕೆ
![1-24-sunday](https://www.udayavani.com/wp-content/uploads/2024/07/1-24-sunday-150x90.jpg)
Daily Horoscope: ಉತ್ತರದ ಕಡೆಗೆ ಸಣ್ಣ ಪ್ರಯಾಣ ಸಂಭವ, ಭವಿಷ್ಯದ ಯೋಜನೆಗಳ ಕುರಿತು ಚಿಂತನೆ
![Thane: ಬೆಕ್ಕು ಕೊಂದ ಆರೋಪ… ಅಪರಿಚಿತ ಮಹಿಳೆ ವಿರುದ್ಧ ಕೇಸು](https://www.udayavani.com/wp-content/uploads/2024/07/cat-150x81.jpg)
Thane: ಬೆಕ್ಕು ಕೊಂದ ಆರೋಪ… ಅಪರಿಚಿತ ಮಹಿಳೆ ವಿರುದ್ಧ ಕೇಸು
![Ramalinga-reddy](https://www.udayavani.com/wp-content/uploads/2024/07/Ramalinga-reddy-150x90.jpg)
Transport: ತತ್ಕ್ಷಣಕ್ಕೆ ಬಸ್ ಯಾನ ದರ ಹೆಚ್ಚಳವಿಲ್ಲ: ಸಚಿವ ರಾಮಲಿಂಗಾರೆಡ್ಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.