ಪವಿತ್ರಾ ಬಳಿಕ ರೇಣುಕಾಸ್ವಾಮಿ ಪ್ರಕರಣದಲ್ಲಿ ಕೇಳಿ ಬರ್ತಿದೆ ಮತ್ತೊಬ್ಬ ಮಹಿಳೆ ಹೆಸರು ಯಾರೀಕೆ?


Team Udayavani, Jun 12, 2024, 6:15 PM IST

ಪವಿತ್ರಾ ಬಳಿಕ ರೇಣುಕಾಸ್ವಾಮಿ ಪ್ರಕರಣದಲ್ಲಿ ಕೇಳಿ ಬರ್ತಿದೆ ಮತ್ತೊಬ್ಬ ಮಹಿಳೆ ಹೆಸರು ಯಾರೀಕೆ?

ಬೆಂಗಳೂರು: ಕನ್ನಡದ ಖ್ಯಾತ ನಟ ದರ್ಶನ್‌ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎನ್ನುವವನ ಹತ್ಯೆ ಪ್ರಕರಣದಲ್ಲಿ ಪೊಲೀಸರ ಅತಿಥಿಯಾಗಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 13 ಮಂದಿಯನ್ನು ಬಂಧಿಸಲಾಗಿದ್ದು, 17 ಮಂದಿಯ ವಿರುದ್ಧ ಎಫ್‌ ಐಆರ್‌ ದಾಖಲಾಗಿದೆ.

ಘಟನೆ ನಡೆದ ಬಳಿಕ ವಿಚಾರಣೆಯಲ್ಲಿ ಒಂದೊಂದೇ ಆಘಾತಕಾರಿ ವಿಚಾರಗಳು ಬೆಳಕಿಗೆ ಬರುತ್ತಿದೆ. ಪವಿತ್ರಾ ಗೌಡ ಅವರಿಗೆ ಆಶ್ಲೀಲ ಮೆಸೇಜ್‌ ಹಾಗೂ ಕಾಮೆಂಟ್‌ ಮಾಡುತ್ತಿದ್ದ ಕಾರಣ ರೇಣುಕಾಸ್ವಾಮಿ ಅವರನ್ನು ಅಪಹರಿಸಿ, ಬೆಂಗಳೂರಿನ ಶೆಡ್‌ ವೊಂದರಲ್ಲಿ ಇರಿಸಿ ಹಲ್ಲೆ ಮಾಡಿ, ಹತ್ಯೆಗೈದು ಮೃತದೇಹವನ್ನು ಮೋರಿಗೆ ಎಸೆದಿದ್ದಾರೆ ಎನ್ನಲಾಗಿದೆ.

ಈ ಪ್ರಕರಣದಲ್ಲಿ ದರ್ಶನ್‌ ಅವರು ನೇರವಾಗಿ ಭಾಗಿಯಾಗಿದ್ದು, ರೇಣುಕಾಸ್ವಾಮಿ ಅವರಿಗೆ ಹಲ್ಲೆ ಮಾಡಿದ ಗ್ಯಾಂಗ್‌ ನಲ್ಲಿ ದರ್ಶನ್‌ ಕೂಡ ಇದ್ದರು ಎನ್ನಲಾಗುತ್ತಿದೆ. ಸದ್ಯ ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಯುತ್ತಿರುವ ಬೆನ್ನಲ್ಲೇ ಪ್ರಕರಣ ಸಂಬಂಧ ಮತ್ತೊಬ್ಬ ಮಹಿಳೆಯ ಹೆಸರು ಕೂಡ ಕೇಳಿ ಬರುತ್ತಿದೆ.

ಆಶ್ಲೀಲ ಮೆಸೇಜ್‌ ಮಾಡಿದ್ದನ್ನು ಪವಿತ್ರಾಗೆ ತಿಳಿಸಿದ್ದು ಯಾರು?: ದರ್ಶನ್‌ ಅಭಿಮಾನಿ ಎನ್ನಲಾದ ರೇಣುಕಾಸ್ವಾಮಿ ಕಳೆದ ಕೆಲ ತಿಂಗಳಿನಿಂದ ದರ್ಶನ್‌ ಹಾಗೂ ವಿಜಯಲಕ್ಷ್ಮೀ ಅವರ ಸಂಬಂಧಕ್ಕೆ ಯಾರು ಕೂಡ ಅಡ್ಡಿಯಾಗಬಾರದೆನ್ನುವ ನಿಟ್ಟಿನಲ್ಲಿ ದರ್ಶನ್‌ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಆಶ್ಲೀಲವಾಗಿ ಸಂದೇಶ ಕಳುಹಿಸುತ್ತಿದ್ದ. ನೀನು ನಮ್ಮ ಬಾಸ್‌ ಸಂಸಾರದಲ್ಲಿ ಬರುವುದು ಸರಿಯಲ್ಲ ಎಂದು ಪವಿತ್ರಾ ಗೌಡಗೆ ಆಶ್ಲೀಲವಾದ ಕಾಮೆಂಟ್‌ ಗಳನ್ನು ಮಾಡುತ್ತಿದ್ದ. ಇದಲ್ಲದೆ ಕೆಲ ದಿನಗಳ ಹಿಂದಷ್ಟೇ ರೇಣುಕಾಸ್ವಾಮಿ ಮರ್ಮಾಂಗದ ಫೋಟೋ ಕಳುಹಿಸಿ ಕೆಟ್ಟದಾಗಿ ಮೆಸೇಜ್‌ ಮಾಡಿದ್ದ.

ಪೊಲೀಸ್‌ ಕಸ್ಟಡಿಯಲ್ಲಿರುವ ನಟಿ ಪವಿತ್ರಾ ಗೌಡ, ಪ್ರಕರಣದಲ್ಲಿ ಎ1 ಆಗಿದ್ದಾರೆ. ಪೊಲೀಸರು ಅವರನ್ನು ಕಳೆದ ಕೆಲ ಗಂಟೆಗಳಿಂದ ತೀವ್ರವಾಗಿ ವಿಚಾರಣೆ ನಡೆಸುತ್ತಿದ್ದಾರೆ.

ಪೊಲೀಸರ ವಿಚಾರಣೆಯಲ್ಲಿ ಪವಿತ್ರಾ ಗೌಡ ರಜಿನಿ ಎನ್ನುವಾಕೆಯ ಹೆಸರನ್ನು ಹೇಳಿರುವುದಾಗಿ ʼಬಿಟಿವಿʼ ವಾಹಿನಿ ವರದಿ ಮಾಡಿದೆ.

ರೇಣುಕಾಸ್ವಾಮಿ ಕೆಟ್ಟದಾಗಿ ಕಾಮೆಂಟ್‌ ಮಾಡುತ್ತಿದ್ದ ಬಗ್ಗೆ ಪವಿತ್ರಾ ಗೌಡಗೆ ರಜಿನಿ ಹೇಳಿರುವುದಾಗಿ  ವರದಿ ತಿಳಿಸಿದೆ.

ಯಾರು ಈ ರಜಿನಿ?: ʼರಜಿನಿ ಎಕ್ಸ್‌ ಪ್ರೆಸ್‌ʼ ಎನ್ನುವ ಯೂಟ್ಯೂಬ್‌ ಚಾನೆಲ್‌ ನಡೆಸುತ್ತಿರುವ ರಜಿನಿ, ಅವರ ಚಾನೆಲ್‌ ನಲ್ಲಿ ದರ್ಶನ್‌ ಗೆ ಸಂಬಂಧಿಸಿದ ವಿಡಿಯೋಗಳನ್ನು ಹೆಚ್ಚಾಗಿ ಅಪ್ಲೋಡ್‌ ಮಾಡುತ್ತಿದ್ದರು. ಇದರಿಂದ ದರ್ಶನ್‌ ಹಾಗೂ ಪವಿತ್ರಾ ವಿಶ್ವಾಸವನ್ನು ರಜಿನಿ ಗಳಿಸಿದ್ದರು. ಪವಿತ್ರಾ ಅವರನ್ನು ಸೋಶಿಯಲ್‌ ಮೀಡಿಯಾದಲ್ಲಿ ಫಾಲೋ ಮಾಡುತ್ತಿದ್ದ ರಜಿನಿ ಕೆಟ್ಟ ಕಾಮೆಂಟ್‌ ಮಾಡುತ್ತಿದ್ದವರ ಬಗ್ಗೆ ಪವಿತ್ರಾ ಅವರ ಗಮನಕ್ಕೆ ತರುತ್ತಿದ್ದರು. ಇದರಲ್ಲಿ ರೇಣುಕಾಸ್ವಾಮಿ ಕಾಮೆಂಟ್‌ ಕೂಡ ಇತ್ತು ಎನ್ನಲಾಗಿದೆ.

ಈ ವಿಚಾರ ಪವಿತ್ರಾಗೆ ಗೊತ್ತಾಗಿ ಪವಿತ್ರಾ ದರ್ಶನ್‌ ಅವರಿಗೆ ಹೇಳಿರುವುದಾಗಿ ವರದಿ ತಿಳಿಸಿದೆ.

ಪ್ರಕರಣ ಸಂಬಂಧ ದರ್ಶನ್‌, ಪವಿತ್ರಾ ಗೌಡ, ವಿನಯ್‌ , ನಿಖಿಲ್‌ ಸೇರಿದಂತೆ 13 ಮಂದಿಯನ್ನು ಬಂಧಿಸಿ, ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಆರೋಪಿಗಳನ್ನು 6 ದಿನಗಳ ಪೊಲೀಸ್‌ ಕಸ್ಟಡಿಗೆ ನೀಡಿದೆ.

ಟಾಪ್ ನ್ಯೂಸ್

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

Ramesh Aravind spoke about bhairadevi movie

Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್‌ ಅರವಿಂದ್‌

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

upendra

Upendra Movie: ರೀ ರಿಲೀಸ್‌ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ

night road kannada movie

Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್‌ ರೋಡ್‌ʼ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.