Actresses: ರೇಣುಕಾಸ್ವಾಮಿಯಿಂದ ಅಶ್ಲೀಲ ಮೆಸೇಜ್: ರಾಗಿಣಿ, ಶುಭಾ ಕೊಟ್ಟ ಸ್ಪಷ್ಟನೆ ಏನು?
Team Udayavani, Sep 10, 2024, 12:45 PM IST
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ (Renukaswamy case) ಪ್ರಕರಣ ಸಂಬಂಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ ಬಳಿಕ ಒಂದೊಂದೇ ಅಂಶಗಳು ಬೆಳಕಿಗೆ ಬರುತ್ತಿದೆ.
ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಅಪಹರಿಸಿ ಶೆಡ್ನಲ್ಲಿಟ್ಟು ಚಿತ್ರಹಿಂಸೆ ನೀಡಿ ಹತ್ಯೆ ಮಾಡಲಾಗಿತ್ತು. ಅಶ್ಲೀಲ ಮೆಸೇಜ್ ಮಾಡಿದ್ದೇ ಕೊಲೆಗೆ ಪ್ರಮುಖ ಕಾರಣವಾಗಿತ್ತು ಎನ್ನಲಾಗಿದೆ.
ಆದರೆ ರೇಣುಕಾಸ್ವಾಮಿ ಪವಿತ್ರಾ ಗೌಡಗೆ ಮಾತ್ರವಲ್ಲದೆ ಬೇರೆ ಅವರಿಗೂ ಅಶ್ಲೀಲವಾಗಿ ಮೆಸೇಜ್ ಮಾಡಿದ್ದ ಎಂದು ಪ್ರಕರಣದ ಎ14 ಆರೋಪಿ ಪ್ರದೂಶ್ ಸ್ವ ಇಚ್ಛಾ ಹೇಳಿಕೆ ನೀಡಿದ್ದಾನೆ.
ನಟಿಯರಾದ ರಾಗಿಣಿ ದ್ವಿವೇದಿ (Ragini Dwivedi) ಹಾಗೂ ಶುಭಾ ಪೂಂಜಾ (Shubha Poonja) ಅವರಿಗೆ ರೇಣುಕಾಸ್ವಾಮಿ ಅಶ್ಲೀಲವಾಗಿ ಮಸೇಜ್ ಮಾಡಿದ್ದಾನೆ ಎಂದು ಪ್ರದೋಶ್ ಹೇಳಿಕೆ ನೀಡಿದ್ದ.
ಈ ಕುರಿತು ಸುದ್ದಿ ಪ್ರಸಾರವಾಗುತ್ತಿದ್ದಂತೆ ಇಬ್ಬರು ನಟಿಯರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ನಟಿ ರಾಗಿಣಿ, “ನಕಲಿ ಖಾತೆ ಇಂತಹ ಮೆಸೇಜ್ ಗಳು ಬರುತ್ತಲೇ ಇರುತ್ತವೆ. ಈ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲ್ಲ. ನನಗೆ ಗೌತಮ್ ಎನ್ನುವ ಖಾತೆಯಿಂದ ಮೆಸೇಜ್ ಬಂದಿರುವ ಬಗ್ಗೆ ಮಾಹಿತಿಯಿಲ್ಲ. ನಾನು ಸೋಶಿಯಲ್ ಮೀಡಿಯಾ ಹ್ಯಾಂಡಲ್ ನೋಡಿಕೊಳ್ಳುವ ಜಬಾಬ್ದಾರಿಯನ್ನು ಸಿಂಗಾಪುರ ಮೂಲದ ಏಜೆನ್ಸಿಗೆ ನೀಡಿದ್ದೇನೆ. ಏನೇ ಮೆಸೇಜ್ ಬಂದರೂ ಅವರು ಹ್ಯಾಂಡಲ್ ಮಾಡುತ್ತಾರೆ” ಎಂದು ಮಾಧ್ಯಮವೊಂದಕ್ಕ ಅವರು ಹೇಳಿದ್ದಾರೆ.
ಇನ್ನು ನಟಿ ಶುಭಾ ಪೂಂಜಾ ಈ ಬಗ್ಗೆ ಇನ್ಸಾಗ್ರಾಮ್ನಲ್ಲಿ ಸ್ಟೋರಿ ಹಾಕಿಕೊಂಡಿದ್ದಾರೆ. “ರೇಣುಕಾಸ್ವಾಮಿ ವಿಚಾರದಲ್ಲಿ ಬೆಳಗ್ಗೆಯಿಂದ ನನಗೆ ಕರೆ ಮಾಡುತ್ತಿರುವ ನನ್ನ ಮಾಧ್ಯಮ ಮಿತ್ರರೇ ನಾನು ಆ ರೀತಿಯ ಯಾವುದೇ ಮೆಸೇಜ್ಗಳನ್ನು ನನ್ನ ವೈಯಕ್ತಿಕ ಖಾತೆಗೆ ಸ್ವೀಕರಿಸಿಲ್ಲ ಎಂದು ಈ ಮೂಲಕ ಸ್ಪಷ್ಟನೆ ನೀಡುತ್ತೇನೆ” ಎಂದು ಅವರು ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ಸೆ.30ರವರೆಗೆ ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
Yadgir: ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ
Shivamogga : ಬೀಡಿಗಾಗಿ ಖೈದಿಗಳಿಂದ ಕಲ್ಲು ತೂರಾಟ, ಸಿಬ್ಬಂದಿಗೆ ಜೀವ ಬೆದರಿಕೆ
Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ
Nagamangala Incident: ತನಿಖೆ ಬಳಿಕ ಇನ್ನಷ್ಟು ಕ್ರಮ… ಗೃಹ ಸಚಿವ ಪರಮೇಶ್ವರ್ ಹೇಳಿಕೆ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.