ಚಿತ್ರರಂಗದ ಚಟುವಟಿಕೆಗಳಿಗೆ ಅನುಮತಿ ನೀಡುವಂತೆ ಮನವಿ


Team Udayavani, May 7, 2020, 11:33 AM IST

ಚಿತ್ರರಂಗದ ಚಟುವಟಿಕೆಗಳಿಗೆ ಅನುಮತಿ ನೀಡುವಂತೆ ಮನವಿ

ಸಾಂದರ್ಭಿಕ ಚಿತ್ರ

ಕೋವಿಡ್ 19 ಲಾಕ್‌ ಡೌನ್‌ ನಿಂದಾಗಿ ಚಿತ್ರರಂಗದ ಬಹುತೇಕ ಚಟುವಟಿಕೆಗಳು ಸಂಪೂರ್ಣ ಸ್ತಬ್ಧವಾಗಿದ್ದು, ಕಳೆದ ಒಂದೂವರೆ ತಿಂಗಳಿನಿಂದ ಚಿತ್ರದ ಚಿತ್ರೀಕರಣ, ಪ್ರಚಾರ, ಪ್ರದರ್ಶನ ಸೇರಿದಂತೆ ಎಲ್ಲ ಚಟುವಟಿಗೆಗಳು ಸಂಪೂರ್ಣ ಬಂದ್‌ ಆಗಿದೆ. ಇದರಿಂದಾಗಿ ಚಿತ್ರರಂಗವನ್ನೆ ಆಶ್ರಯಿಸಿಕೊಂಡು ಬದುಕು ಕಟ್ಟಿಕೊಂಡಿರುವ ನಿರ್ಮಾಪಕರು, ನಿರ್ದೇಶಕರು, ಕಲಾವಿದರು, ತಂತ್ರಜ್ಞರು, ಕಾರ್ಮಿಕರು ಸೇರಿದಂತೆ ಸಾವಿರಾರು ಕುಟುಂಬಗಳಲ್ಲಿ ಆತಂಕದ ಛಾಯೆ ಮನೆ ಮಾಡಿದೆ.

ಸದ್ಯ ಸರ್ಕಾರ ಲಾಕ್‌ ಡೌನ್‌ ನಿಯಮಗಳನ್ನು ಸಡಿಲಿಸದ್ದು ಮುಂದಾಗಿದ್ದು, ಧಾರಾವಾಹಿಗಳ ಚಿತ್ರೀಕರಣಕ್ಕೆ ಷರತ್ತುಬದ್ದ ಅನುಮತಿ ನೀಡಿದೆ. ಇದೇ ವೇಳೆ ಸಿನಿಮಾಗಳ ಶೂಟಿಂಗ್‌ಗಳಿಗೂ ಅನುಮತಿ ನೀಡುವಂತೆ ಚಿತ್ರರಂಗ ಸರ್ಕಾರದ ಮುಂದೆ

ಮನವಿಯನ್ನಿಟ್ಟಿದೆ. ಈ ಸಂಬಂಧ ಬುಧವಾರ ಸಚಿವ ಆರ್‌. ಅಶೋಕ್‌ ಅವರನ್ನು ಭೇಟಿ ಮಾಡಿದ ಚಿತ್ರರಂಗದ ಪ್ರಮುಖರು ಧಾರಾವಾಹಿಗಳ ಚಿತ್ರೀಕರಣಕ್ಕೆ ಅನುಮತಿ ನೀಡಿರುವಂತೆಯೇ, ಚಲನಚಿತ್ರಗಳ ಚಿತ್ರೀಕರಣಕ್ಕೂ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ.

ಇದೇ ವೇಳೆ ಮಾತನಾಡಿದ ಸಚಿವ ಆರ್‌. ಅಶೋಕ್‌, ಈ ವಿಷಯವನ್ನು ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳ ಗಮನಕ್ಕೆ ತಂದು, ಸಾಧ್ಯಸಾಧ್ಯತೆಗಳನ್ನು ಗಮನದಲ್ಲಿ ಇಟ್ಟುಕೊಂಡು, ಚಿತ್ರೀಕರಣಕ್ಕೆ ಅವಕಾಶ ನೀಡಲು ಪ್ರಯತ್ನಿಸಲಾಗುವುದು. ಶೀಘ್ರದಲ್ಲಿಯೇ ಈ ಬಗ್ಗೆ ನಿರ್ಧರಿಸಲಾಗುವುದು ಎಂದು ತಮ್ಮನ್ನು ಭೇಟಿ ಮಾಡಿದ ಚಿತ್ರರಂಗದ ಪ್ರಮುಖರಿಗೆ ಭರವಸೆಯನ್ನು ನೀಡಿದ್ದಾರೆ.

ಇನ್ನು, ಚಿತ್ರರಂಗದ ಮೇಲೂ ಕೋವಿಡ್ 19 ಎಫೆಕ್ಟ್ ಜೋರಾಗಿಯೇ ತಟ್ಟುತ್ತಿದೆ. ಯಾವಾಗಲೂ ಮುಹೂರ್ತ, ಶೂಟಿಂಗ್‌, ಪಬ್ಲಿಸಿಟಿ, ಪ್ರಮೋಶನ್‌, ರಿಲೀಸ್‌, ಸಕ್ಸಸ್‌ ಸೆಲೆಬ್ರೇಶನ್‌ ಅಂಥ ರಂಗುರಂಗಾಗಿ ಕಳೆಕಟ್ಟಿರುತ್ತಿದ್ದ ಚಿತ್ರರಂಗ, ಸದ್ಯಕ್ಕೆ ಅದ್ಯಾವುದೂ ಇಲ್ಲದೆ ಕಂಪ್ಲೀಟ್‌ ಲಾಕ್‌ ಡೌನ್‌ ಆಗಿ ಬಣಗುಡುತ್ತಿದೆ. ಮತ್ತೂಂದೆಡೆ, ಈಗಾಗಲೇ ಅಧಂಬರ್ಧ ಶೂಟಿಂಗ್‌ ಮಾಡಿರುವ ಚಿತ್ರತಂಡಗಳು ಇನ್ನುಳಿದ ಚಿತ್ರೀಕರಣ ಹೇಗೆ ಮಾಡೋದು, ಯಾವಾಗ ಮಾಡೋದು ಅನ್ನೋ ಚಿಂತೆಯಲ್ಲಿವೆ. ಹಾಗಾಗಿ ಸಿನಿಮಾ ನಿಯೋಗ ಚಿತ್ರೀಕರಣಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದೆ.

ಇನ್ನು ಆರ್‌. ಅಶೋಕ್‌ ಅವರನ್ನು ಭೇಟಿ ಮಾಡಿದ ನಿಯೋಗದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್‌, ಉಪಾಧ್ಯಕ್ಷ ಉಮೇಶ್‌ ಬಣಕಾರ್‌, ಮಾಜಿ ಅಧ್ಯಕ್ಷ ಸಾ.ರಾ ಗೋವಿಂದು, ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್‌ ಕುಮಾರ್‌, ನಿರ್ಮಾಪಕ ಕೆ. ಮಂಜು, ಚಲನಚಿತ್ರ ಕಾರ್ಮಿಕ ಒಕ್ಕೂಟದ ಕಾರ್ಯದರ್ಶಿ ರವೀಂದ್ರನಾಥ್‌ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಹಾಜರಿದ್ದರು.

ಟಾಪ್ ನ್ಯೂಸ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

pejawara

Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ

Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.