ಕಾನ್ಫಿಡಾ ಪ್ರಶಸ್ತಿಗೆ ಮರುಜೀವ


Team Udayavani, Dec 20, 2017, 12:08 PM IST

KANFIDA_(129).jpg

ಕಳೆದ ಎಂಟು ವರ್ಷಗಳಿಂದ ತಟಸ್ಥವಾಗಿದ್ದ ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಕಾನ್ಫಿಡಾ ಪ್ರಶಸ್ತಿಗೆ ಇದೀಗ ಮರುಚಾಲನೆ ಸಿಗುತ್ತಿದೆ. ಹೌದು, ಈ ಹಿಂದೆ ಕೊಡಮಾಡುತ್ತಿದ್ದ ಕಾನ್ಫಿಡಾ ಅವಾರ್ಡ್‌, ಕಾರಣಾಂತರಗಳಿಂದ ಸ್ಥಗಿತಗೊಂಡಿತ್ತು. ಈಗ ಸಂಘದ ಅಧ್ಯಕ್ಷ ನಾಗೇಂದ್ರ ಪ್ರಸಾದ್‌ ನೇತೃತ್ವದಲ್ಲಿ ಪ್ರಶಸ್ತಿ ವಿತರಣೆ ಕಾರ್ಯಕ್ರಮ ನಡೆಸಲು ಸಂಘ ಹಲವು ರೂಪುರೇಷೆಗಳು ಸಿದ್ಧಗೊಳ್ಳುತ್ತಿವೆ. 

ಈ ಕುರಿತು ವಿವರಣೆ ಕೊಟ್ಟ ಅಧ್ಯಕ್ಷ ನಾಗೇಂದ್ರ ಪ್ರಸಾದ್‌, “ಫೆಬ್ರವರಿಯಲ್ಲಿ ಚಿತ್ರೋತ್ಸವ ನಡೆಯುತ್ತಿದ್ದು, ಅದಾದ ಬಳಿಕ ಸಂಘವು ಕಾನ್ಫಿಡಾ ಅವಾರ್ಡ್‌ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಎಂದಿನಂತೆ ಪರಭಾಷೆಯ ಇಬ್ಬರು ಚಿತ್ರ ನಿರ್ದೇಶಕರನ್ನು ಗುರುತಿಸಿ, ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿ, ಸನ್ಮಾನಿಸುವ ಕಾರ್ಯವು ನಡೆಯಲಿದೆ. ಉಳಿದಂತೆ 20 ವಿಭಾಗದಲ್ಲಿ ಕಾನ್ಫಿಡಾ ಪ್ರಶಸ್ತಿಯನ್ನು ವಿತರಣೆ ಮಾಡಲಾಗುತ್ತದೆ.

ಕನ್ನಡದ ಯಶಸ್ಸು ಪಡೆದ ಮತ್ತು ಜನ ಮೆಚ್ಚುಗೆ ಪಡೆದ ಚಿತ್ರಗಳ ನಿರ್ದೇಶಕರೊಂದಿಗೆ ಸಂವಾದ ಕಾರ್ಯಕ್ರಮವನ್ನು ನಡೆಸಲು ನಿರ್ಧರಿಸಲಾಗಿದೆ. ಈಗಾಗಲೇ ಕಾನ್ಫಿಡಾ ಫಿಲ್ಮ್ ಕೋರ್ಸ್‌ನಲ್ಲಿ 35 ಬ್ಯಾಚ್‌ಗಳು ಪೂರ್ಣಗೊಂಡಿವೆ. ಜನವರಿಯಲ್ಲಿ 36ನೇ ಬ್ಯಾಚ್‌ ಶುರುವಾಗಲಿದೆ. ಒಂದು ಬ್ಯಾಚ್‌ನಲ್ಲಿ 25 ವಿದ್ಯಾರ್ಥಿಗಳಿದ್ದು, ಮೂರು ತಿಂಗಳ ಕೋರ್ಸ್‌ ಇದಾಗಲಿದೆ.

ನುರಿತ ನಿರ್ದೇಶಕರು, ಛಾಯಾಗ್ರಾಹಕರು ವಿದ್ಯಾರ್ಥಿಗಳಿಗೆ ಬೋಧನೆ ಮಾಡಲಿದ್ದಾರೆ’ ಎಂದು ವಿವರ ಕೊಡುತ್ತಾರೆ ಅವರು. ಈ ಕಾನ್ಫಿಡಾ ಅವಾರ್ಡ್‌ ಕಾರ್ಯಕ್ರಮಕ್ಕೆ ಚಿತ್ರರಂಗದ ಎಲ್ಲಾ ಸಂಘಟನೆಗಳು ಕೈ ಜೋಡಿಸಲಿವೆ ಎನ್ನುವ ಅವರು, “ಈ ಬಾರಿ ಸಂಘದಿಂದ ಕಿರುಚಿತ್ರ ಪ್ರಶಸ್ತಿಯನ್ನೂ ನೀಡಲು ಉದ್ದೇಶಿಸಲಾಗಿದೆ. ಆ ಮೂಲಕ ಪ್ರತಿಭಾವಂತರನ್ನು ಪ್ರೋತ್ಸಾಹಿಸುವ ಕೆಲಸ ಮಾಡಲಿದೆ ಎಂದು ವಿವರಿಸಿದ ನಾಗೇಂದ್ರ ಪ್ರಸಾದ್‌, ಈ ಬಾರಿ ಚಿತ್ರೋತ್ಸವದಲ್ಲಿ ಸಂಘವು ಪಾಲ್ಗೊಳ್ಳಲಿದೆ.

ಆಯೋಜಕರು ಕೂಡ ಒಂದಷ್ಟು ಜವಾಬ್ದಾರಿ ವಹಿಸಲಿದ್ದಾರೆ. ಅದನ್ನು ನಿರ್ವಹಿಸಲು ಸಂಘ ಸಿದ್ಧವಿದೆ’ ಎಂದರು ಅವರು. ಈ ಪತ್ರಿಕಾಗೋಷ್ಠಿಯಲ್ಲಿ ಯೋಗರಾಜ್‌ಭಟ್‌, ಸುನೀಲ್‌ ಪುರಾಣಿಕ್‌, ವೈದ್ಯನಾಥ್‌, ಮಂಜುನಾಥ್‌, ಬೂದಾಳ್‌ ಕೃಷ್ಣಮೂರ್ತಿ, ಮಳವಳ್ಳಿ ಸಾಯಿಕೃಷ್ಣ, ಶಿವಕುಮಾರ್‌, ಶಾಂತಕುಮಾರ್‌, ಅನಂತ್‌ರಾಜು ಸೇರಿದಂತೆ ಸಂಘದ ಅನೇಕ ಪದಾಧಿಕಾರಿಗಳು ಈ ವೇಳೆ ಹಾಜರಿದ್ದರು.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

Ramesh Aravind spoke about bhairadevi movie

Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್‌ ಅರವಿಂದ್‌

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

upendra

Upendra Movie: ರೀ ರಿಲೀಸ್‌ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ

night road kannada movie

Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್‌ ರೋಡ್‌ʼ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.