ಇಂದು ರಾಕಿಂಗ್ ಸ್ಟಾರ್ ಯಶ್‌ ಬರ್ತ್‌ಡೇ: ಮುಂದಿನ ಸಿನಿಮಾ ಬಗ್ಗೆ ಹೆಚ್ಚಿದ ಕುತೂಹಲ


Team Udayavani, Jan 8, 2022, 8:46 AM IST

ಇಂದು ರಾಕಿಂಗ್ ಸ್ಟಾರ್ ಯಶ್‌ ಬರ್ತ್‌ಡೇ: ಮುಂದಿನ ಸಿನಿಮಾ ಬಗ್ಗೆ ಹೆಚ್ಚಿದ ಕುತೂಹಲ

ನಟ ಯಶ್‌ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಆದರೆ, ಈ ವರ್ಷವೂ ಯಶ್‌ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿಕೊಳ್ಳುತ್ತಿಲ್ಲ. ಅದಕ್ಕೆ ಕಾರಣ ಗೊತ್ತೇ ಇದೆ. ಒಂದು ಕಡೆ ಕೋವಿಡ್‌ ಹೆಚ್ಚಾಗುತ್ತಿದ್ದರೆ ಮತ್ತೂಂದು ಕಡೆ ವೀಕೆಂಡ್‌ ಲಾಕ್‌ಡೌನ್‌. ಸರ್ಕಾರ ವೀಕೆಂಡ್‌ ಲಾಕ್‌ಡೌನ್‌ ಘೋಷಿಸುವ ಮುನ್ನವೇ ಯಶ್‌, ಈ ವರ್ಷವೂ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸುತ್ತಿಲ್ಲ. ಅವರು ಎಲ್ಲಿರುತ್ತಾರೋ, ಅಲ್ಲಿಂದಲೇ ಶುಭಕೋರಿದರೆ ಸಾಕು, ಎಲ್ಲವೂ ಸರಿ ಹೋದ ನಂತರ ಅದ್ಧೂರಿಯಾಗಿ ಆಚರಿಸೋಣ ಎಂದಿದ್ದರು. ಹಾಗಾಗಿ, ಈ ವರ್ಷವೂ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ದೂರದಿಂದಲೇ ಶುಭಕೋರಲಿದ್ದಾರೆ.

ಇನ್ನು, ಯಶ್‌ ಬರ್ತ್‌ಡೇಗೆ ಬಹುನಿರೀಕ್ಷಿತ “ಕೆಜಿಎಫ್-2′ ಚಿತ್ರದ ಟ್ರೇಲರ್‌ ಬಿಡುಗಡೆಯಾಗಬಹುದೆಂಬ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದರು. ಆದರೆ, ಚಿತ್ರದ ಟ್ರೇಲರ್‌ ಬಿಡುಗಡೆಯಾಗುತ್ತಿಲ್ಲ. ಈ ಬಗ್ಗೆ ಮಾತನಾಡಿರುವ ಯಶ್‌, “ಈಗಲೇ ಟ್ರೇಲರ್‌ ಬಿಡುಗಡೆ ಮಾಡಿದರೆ ತುಂಬಾನೇ ಬೇಗ ಬಿಡುಗಡೆ ಮಾಡಿದಂತಾಗುತ್ತದೆ. ಏಕೆಂದರೆ ಚಿತ್ರ ಏಪ್ರಿಲ್‌ 14ಕ್ಕೆ ಬಿಡುಗಡೆ ಇರುವುದರಿಂದ ದೊಡ್ಡ ಗ್ಯಾಪ್‌ ಆಗುತ್ತದೆ’ ಎಂದಿದ್ದಾರೆ.

ಇದನ್ನೂ ಓದಿ:ಉದ್ಯಮಿ ಜುಂಜನ್‌ವಾಲಾಗೆ ಶೀಘ್ರ ಸಿಗಲಿದೆ 14 ಅಂತಸ್ತಿನ ಮನೆ!

ಯಶ್‌ “ಕೆಜಿಎಫ್-2′ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದೆ. ಆ ಸಿನಿಮಾದಲ್ಲಿ ಕೆಲಸ ಮಾಡಿದವರೆಲ್ಲರೂ ಈಗ ಬೇರೆ ಬೇರೆ ಸಿನಿಮಾಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ, ಯಶ್‌ ಮಾತ್ರ ಯಾವ ಸಿನಿಮಾವನ್ನು ಒಪ್ಪಿಕೊಂಡಿಲ್ಲ. ಹಾಗಾದರೆ, ಯಶ್‌ ಯಾಕೆ ಯಾವ ಸಿನಿಮಾವನ್ನು ಒಪ್ಪಿಲ್ಲ, ಸಿನಿಮಾದಲ್ಲಿ ನಟಿಸುತ್ತಿಲ್ಲ ಎಂಬ ಪ್ರಶ್ನೆ ಸಹಜ. ಇದಕ್ಕೆ ಯಶ್‌ ಉತ್ತರಿಸೋದು ಹೀಗೆ

“ಒಂದು ಸಿನಿಮಾ ಪೂರ್ಣವಾದ ಮೇಲೆಯೇ ನಾನು ಇನ್ನೊಂದು ಸಿನಿಮಾ ಒಪ್ಪೋದು. ಅದಕ್ಕಿಂತ ಹೆಚ್ಚಾಗಿ ನನಗೆ ಮನೆಯಲ್ಲೂ ಸಿನಿಮಾ ಮಾಡಲೇಬೇಕು ಎಂಬ ಪ್ರಶರ್‌ ಇಲ್ಲ. ದುಡಿಲೇಬೇಕು ಅಥವಾ ದುಡ್ಡಿಗೋಸ್ಕರನೇ ಕೆಲಸ ಮಾಡ್ತೀನಿ ಅಂತೇನೂ ಇಲ್ಲ. ಒಳ್ಳೆಯ ಕೆಲಸ ಮಾಡಬೇಕು. ಈ ಸ್ಥಾನ ಜನಗಳು ಕೊಟ್ಟಿರೋದು ಅದನ್ನು ಉಳಿಸಿಕೊಂಡು ಹೋಗಬೇಕು. ಇವತ್ತು ಯಾವುದೇ ಭಾಷೆಯ ಯಾವುದೇ ಸಿನಿಮಾ ಬಂದ್ರು ನಾವೆಲ್ಲ ಹೆಮ್ಮೆಯಿಂದ ಹೇಳಿಕೊಳ್ಳುವಂತಹ ಒಂದು ಕೆಲಸ ಆಗಿದೆ. ಮುಂದಿನ ಹೆಜ್ಜೆಯೂ ಹಾಗೇ ಇರಬೇಕೆಂಬುದು ನನ್ನ ಆಸೆ. ಕೆಜಿಎಫ್ 1 ಎಲ್ಲರೂ ನೋಡಿದ್ದಾರೆ. ಕೆಜಿಎಫ್ 2 ಹೇಗಿದೆ ಎಂಬುದು ನನಗೆ ಗೊತ್ತು .ನಾವು ಏನು ಸೃಷ್ಟಿ ಮಾಡ್ತಿವೋ, ಅದೇ ನಮಗೆ ದೊಡ್ಡ ಕಾಂಪಿಟೇಶನ್‌. ಮುಂದೆ ಏನು ಮಾಡಬೇಕೆಂಬ ಚರ್ಚೆ ನಡೆಯುತ್ತಿದೆ. ಅದಕ್ಕೆ ಸ್ವಲ್ಪ ಸಮಯಬೇಕಾಗುತ್ತದೆ’ ಎನ್ನುವ ಮೂಲಕ ತಮ್ಮ ಮುಂದಿನ ಸಿನಿಮಾ ಕೂಡಾ ದೊಡ್ಡ ಹೆಜ್ಜೆಯಾಗಿರುತ್ತದೆ ಎಂಬ ಸುಳಿವು ನೀಡುತ್ತಾರೆ ಯಶ್‌.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.