Roshan; ಆಟೋ ಡ್ರೈವರ್‌ ಮಗನ ‘ತೂಫಾನ್‌’ ಕನಸು


Team Udayavani, Apr 8, 2024, 12:35 PM IST

ಆಟೋ ಡ್ರೈವರ್‌ ಮಗನ ‘ತೂಫಾನ್‌’ ಕನಸು

ಚಿತ್ರರಂಗದಲ್ಲಿ ಏನಾದರೂ ಸಾಧನೆ ಮಾಡಬೇಕು, ಒಳ್ಳೆಯ ನಟ, ಸ್ಟಾರ್‌ ಆಗಬೇಕು ಎಂಬ ಕನಸಿನೊಂದಿಗೆ ಕನ್ನಡ ಚಿತ್ರರಂಗಕ್ಕೆ ಬರುವ ಮಂದಿಗೆ ಕೊರತೆ ಇಲ್ಲ. ಹೀಗೆ ಬಂದ ಅನೇಕರು ತಮ್ಮ ಕನಸು ಈಡೇರಿಸಿಕೊಂಡಿದ್ದಾರೆ. ಈಗ ಈ ಸಾಲಿಗೆ ರೋಶನ್‌ ಕೂಡಾ ಸೇರುತ್ತಿದ್ದಾರೆ.

ಯಾವ ರೋಶನ್‌ ಎಂದರೆ “ತೂಫಾನ್‌’ ಸಿನಿಮಾ ಬಗ್ಗೆ ಹೇಳಬೇಕು. ಆರಂಭದಲ್ಲಿ “ಭೈರ್ಯ ಕೆಎ-07′ ಎಂಬ ಟೈಟಲ್‌ನಲ್ಲಿ ಶುರುವಾದ ಸಿನಿಮಾ ಈಗ ಟೈಟಲ್‌ ಬದಲಿಸಿದ್ದು, “ತೂಫಾನ್‌’ ಎಂದಿಟ್ಟಿದೆ. ಆಟೋ ಡ್ರೈವರ್‌ ಮಗನಾಗಿರುವ ರೋಶನ್‌ ಈ ಸಿನಿಮಾ ಮೂಲಕ ಪ್ಯಾನ್‌ ಇಂಡಿಯಾ ಕನಸು ಕಂಡಿದ್ದಾರೆ. ಈಗಾಗಲೇ ಭರ್ಜರಿಯಾಗಿ ಚಿತ್ರೀಕರಣವಾಗುತ್ತಿರುವ ಈ ಚಿತ್ರಕ್ಕೆ ಬಿಟೌನ್‌ನಿಂದಲೂ ಬೇಡಿಕೆ ಬರುತ್ತಿದೆ. ಈ ಮೂಲಕ ಹೊಸಬರ ತಂಡ ಖುಷಿಯಾಗಿದೆ. ಚಿತ್ರತಂಡ ಕೂಡಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಅದ್ಧೂರಿಯಾಗಿ ಸಿನಿಮಾ ಕಟ್ಟಿಕೊಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ.

ಇನ್ನು, ರೋಷನ್‌ ಈ ಹಿಂದೆ “ತಲ್ವಾರ್‌’ ಎಂಬ ಕಿರುಚಿತ್ರದಲ್ಲೂ ಅಭಿನಯಿಸಿದ್ದರು. ಬಾಗಲಕೋಟೆಯ ಶರೀಫ‌ ಬೇಗಂ ನದಾಫ್, ಈ ಸಿನಿಮಾವನ್ನು ನಿರ್ಮಿಸುತ್ತಿದ್ದು, ಆರ್‌. ಚಂದ್ರಕಾಂತ್‌ ಈ ಸಿನಿಮಾದ ನಿರ್ದೇಶಕರು. ಚಿತ್ರದಲ್ಲಿ ಅನುಷಾ ರೈ ನಾಯಕಿಯಾಗಿ ನಟಿಸುತ್ತಿದ್ದಾರೆ.

“ಬೆಂಗಳೂರಿನ ಭೂಗತ ಲೋಕ ಇಲ್ಲಿನ ಡಾನ್‌ಗಳ ಕುರಿತಂತೆ ಸಾಕಷ್ಟು ಸಿನಿಮಾಗಳು ಬಂದಿವೆ. ಆದರೆ ಚಿಕ್ಕಬಳ್ಳಾಪುರ, ಕೋಲಾರ, ಕೆಜಿಎಫ್, ಚಿಂತಾಮಣಿ, ಶಿಡ್ಲಘಟ್ಟವನ್ನು ಜನರು ಮರೆತು ಹೋಗಿರುವ ಭೂಗತ ಲೋಕದ ವಿಷಯ ಈ ಸಿನಿಮಾದಲ್ಲಿದೆ. ಸಾಕಷ್ಟು ವಿಷಯ ಗಳನ್ನು ಸಂಶೋಧನೆ ನಡೆಸಿ, ಅಧ್ಯಯನ ಮಾಡಿ ಚಿತ್ರಕಥೆ ಸಿದ್ದಪಡಿಸಲಾಗಿದೆ. 1970 ರಿಂದ 1985ರ ಕಾಲಘಟ್ಟದಲ್ಲಿ ಸಿನಿಮಾ ಸಾಗುತ್ತದೆ’ ಎನ್ನುವುದು ಚಿತ್ರತಂಡದ ಚಿತ್ರದ ಬಗ್ಗೆ ನೀಡುವ ವಿವರ.

“ಒಂದು ಗುಣಮಟ್ಟದ ಸಿನಿಮಾ ಕಟ್ಟಿಕೊಡಲು ನಾವೆಲ್ಲರೂ ಶ್ರಮಿಸುತ್ತಿದ್ದೇವೆ. ಅದಕ್ಕೆ ಒಳ್ಳೆಯ ಪ್ರತಿಫ‌ಲ ಸಿಗುತ್ತದೆ ಎಂಬ ನಂಬಿಕೆಯೂ ಇದೆ’ ಎನ್ನುವುದು ನಾಯಕ ರೋಶನ್‌ ಮಾತು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.