Rukmini Vasanth: ಬ್ಯಾಕ್ ಟು ಬ್ಯಾಕ್ ರುಕ್ಮಿಣಿ ವಸಂತ್
Team Udayavani, Oct 1, 2024, 3:11 PM IST
ಒಂದೊಂದು ಸಿನಿಮಾ ಬಿಡುಗಡೆಯಾದಂತೆ ಆ ಚಿತ್ರಗಳು ಕಲಾವಿದರಿಗೆ ಹೆಸರು ತಂದುಕೊಡುತ್ತವೆ. ಅದರಲ್ಲೂ ನಾಯಕಿ ನಟಿಯರಿಗೆ ಸ್ವಲ್ಪ ಹೆಚ್ಚೇ ಎಂದು ಹೇಳಬಹುದು. ಅದು ನಟನೆ, ಗ್ಲಾಮರ್ ಎರಡರಲ್ಲೂ. ಈಗ ರುಕ್ಮಿಣಿ ವಸಂತ್ ನಿರೀಕ್ಷೆ ಕಂಗಳೊಂದಿಗೆ ಎದುರು ನೋಡುತ್ತಿದ್ದಾರೆ. ಅದಕ್ಕೆ ಕಾರಣ “ಬಘೀರ’ ಹಾಗು “ಭೈರತಿ ರಣಗಲ್’.
ಈ ಎರಡೂ ಚಿತ್ರಗಳಲ್ಲೂ ರುಕ್ಮಿಣಿ ವಸಂತ್ ನಾಯಕಿ. ವಿಶೇಷವೆಂದರೆ ಎರಡು ಅಂತರದಲ್ಲಿ ಈ ಎರಡೂ ಚಿತ್ರಗಳು ಬಿಡುಗಡೆಯಾಗುತ್ತಿವೆ. ಅಲ್ಲಿಗೆ ಬ್ಯಾಕ್ ಟು ಬ್ಯಾಕ್ ಚಿತ್ರಗಳ ಮೂಲಕ ರುಕ್ಮಿಣಿ ತೆರೆಮೇಲೆ ಬಂದಂತಾಗುತ್ತದೆ. ಶ್ರೀಮುರಳಿ ನಾಯಕರಾಗಿರುವ “ಬಘೀರ’ ಚಿತ್ರ ಅಕ್ಟೋಬರ್ 31ರಂದು ತೆರೆಕಂಡರೆ ಶಿವರಾಜ್ಕುಮಾರ್ ನಟನೆಯ “ಭೈರತಿ ರಣಗಲ್’ ಚಿತ್ರ ನವೆಂಬರ್ 15ರಂದು ತೆರೆಕಾಣುತ್ತಿದೆ.
ಎರಡೂ ಸ್ಟಾರ್ ಸಿನಿಮಾಗಳಾಗಿದ್ದು, ಈ ಚಿತ್ರಗಳ ಮೇಲೆ ನಿರೀಕ್ಷೆ ಹೆಚ್ಚಿದೆ. ಶ್ರೀನಿ ನಿರ್ದೇಶನದ “ಬೀರ್ಬಲ್’ ಸಿನಿಮಾ ಮೂಲಕ ನಾಯಕಿಯಾಗಿ ಎಂಟ್ರಿಕೊಟ್ಟ ರುಕ್ಮಿಣಿ ಈಗಾಗಲೇ “ಬಾನದಾರಿಯಲಿ’, “ಬಘೀರ’, “ಸಪ್ತಸಾಗರ ದಾಚೆ ಎಲ್ಲೋ 1-2′ ನಟಿಸಿದ್ದು, ಕನ್ನಡ ಜೊತೆಗೆ ತಮಿಳಿನ ವಿಜಯ್ ಸೇತುಪತಿ ಹಾಗೂ ಶಿವ ಕಾರ್ತಿಕ್ ನಾಯಕರಾಗಿರುವ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.
“ಸಪ್ತಸಾಗರದಾಚೆ ಎಲ್ಲೋ 1-2′ ಚಿತ್ರದ ಪ್ರಿಯಾ ಪಾತ್ರದಲ್ಲಿನ ಇವರ ನಟನೆಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಈ ಹಿಂದೆ “ಮಫ್ತಿ’ ಸಿನಿಮಾ ನಿರ್ದೇಶಿಸಿದ್ದ ನರ್ತನ್ ಈಗ “ಭೈರತಿ ರಣಗಲ್’ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲೂ ರುಕ್ಮಿಣಿಗೆ ವಿಭಿನ್ನ ಪಾತ್ರ ಸಿಕ್ಕಿದೆಯಂತೆ. ಈ ಸಿನಿಮಾವನ್ನು ಶಿವರಾಜ್ ಕುಮಾರ್ ಅವರೇ ನಿರ್ಮಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranav Kshirsagr: ಪಾಸಿಟಿವ್ ಹುಡುಗನ ನೆಗೆಟಿವ್ ಕನಸು
Kantara: Chapter 1: ʼಕಾಂತಾರ-1ʼನಲ್ಲಿ ರಿಷಬ್ ತಂದೆ ಪಾತ್ರದಲ್ಲಿ ಮೋಹನ್ ಲಾಲ್?
Martin Movie: ಮಾರ್ಟಿನ್ ಇಂಟ್ರೊಡಕ್ಷನ್ ಸಾಂಗ್ ಬಜೆಟ್ 6 ಕೋಟಿ!
BBK11: ಬಿಗ್ ಬಾಸ್ ಮನೆಯಲ್ಲಿ ಚೈತ್ರಾ – ಯಮುನಾ ಟಾಕ್ ಫೈಟ್: ನಾಮಿನೇಟ್ ಅದವರು ಯಾರು
Heartfelt gesture; ಪಾಕಿಸ್ಥಾನ ಮೂಲದ ಅಭಿಮಾನಿಗೆ ಶೂ ಗಿಫ್ಟ್ ನೀಡಿದ ಭಾರತದ ಖ್ಯಾತ ಗಾಯಕ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Unstable: ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗಿಳಿಸಲು ಕೇಂದ್ರ ಸರಕಾರ ಯತ್ನ: ಶಾಸಕ ಬೇಳೂರು
Thirthahalli: ವಾಗ್ದೇವಿ ಶಾಲೆಯ 4 ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ
Legislative Council Bye Election: ಕಿಶೋರ್ ಕುಮಾರ್ ಬೊಟ್ಯಾಡಿಗೆ ಒಲಿದ ಬಿಜೆಪಿ ಟಿಕೆಟ್
Koteshwara: ಟಿಪ್ಪರ್ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು
Politics: ಸಿದ್ದರಾಮಯ್ಯ ಮಾಡಿರುವ ತಪ್ಪಿಗೆ ಕನಿಷ್ಠ ಶಿಕ್ಷೆ ಎಂದರೆ ರಾಜೀನಾಮೆ ಕೊಡುವುದು:ಆರಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.