ಕನ್ನಡ ಮನಸ್ಸುಗಳ ‘ಪಂಪ’ ಸೆ.16ಕ್ಕೆ ರಿಲೀಸ್


Team Udayavani, Sep 9, 2022, 4:40 PM IST

ಕನ್ನಡ ಮನಸ್ಸುಗಳ ‘ಪಂಪ’ ಸೆ.16ಕ್ಕೆ ರಿಲೀಸ್

“ಕನ್ನಡ ಸಾಹಿತ್ಯದಲ್ಲಿ ಆದಿಪಂಪನಿಗೆ ಒಂದು ವಿಶೇಷ ಸ್ಥಾನಮಾನವಿದೆ. ಪಂಪ ನದ್ದು ಎಲ್ಲಾ ಕಾಲಕ್ಕೂ ಸಲ್ಲುವಂಥ ವ್ಯಕ್ತಿತ್ವ. ಅದರಂತೆ, ಅದೇ ಹೆಸರನ್ನು ಇಟ್ಟುಕೊಂಡು ಬರುತ್ತಿರುವ “ಪಂಪ’ ಚಿತ್ರ ಕೂಡ ಇಂದಿನ ಕಾಲಘಟ್ಟಕ್ಕೆ, ಕನ್ನಡದ ವಿಚಾರಗಳಿಗೆ ಸಲ್ಲುವಂಥದ್ದು. ಕನ್ನಡದ ಬಗ್ಗೆ ತುಡಿತವಿರುವ, ಕನ್ನಡಕ್ಕಾಗಿ ಹೊಸದೇ ನಾದ್ರೂ ಮಾಡಬೇಕು ಎಂಬ ಹಂಬಲ ವಿರುವ ಮನಸ್ಸುಗಳು ಸೇರಿ ಮಾಡಿದ “ಪಂಪ’ ಚಿತ್ರ, ವಿಭಿನ್ನವಾಗಿ ನಿಲ್ಲುತ್ತದೆ’ ಇದು ಬಿಡುಗಡೆಗೆ ತಯಾರಾಗಿರುವ “ಪಂಪ’ ಸಿನಿಮಾದ ಬಗ್ಗೆ ನಾದಬ್ರಹ್ಮ ಹಂಸಲೇಖ ಅವರ ಮಾತು.

ಹಿರಿಯ ನಿರ್ದೇಶಕ ಎಸ್‌. ಮಹೇಂದರ್‌ ನಿರ್ದೇಶನದಲ್ಲಿ ಮೂಡಿಬಂದಿರುವ “ಪಂಪ’ ಸಿನಿಮಾ, ಇದೇ ಸೆ. 16ಕ್ಕೆ ಸಿನಿಮಾ ತೆರೆಗೆ ಬರುತ್ತಿದೆ. “ಪಂಪ’ ಸಿನಿಮಾದ ಹಾಡುಗಳಿಗೆ ಹಂಸಲೇಖ ಸಾಹಿತ್ಯ-ಸಂಗೀತವಿದ್ದು, ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳು ಕೇಳುಗರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿವೆ. ಇದೇ ವೇಳೆ “ಪಂಪ’ನ ಬಗ್ಗೆ ಮಾತನಾಡಿದ ಸಂಗೀತ ನಿರ್ದೇಶಕ ಹಂಸಲೇಖ “ಪಂಪ’ನ ಗುಣಗಾನ ಮಾಡಿದ್ದಾರೆ.

“ಇತ್ತೀಚಿನ ದಿನಗಳಲ್ಲಿ ಕನ್ನಡದ ವಿಷಯವನ್ನು ಇಟ್ಟುಕೊಂಡು ಚಿತ್ರ ಮಾಡುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ. ಆದರೆ ವಾಸ್ತವದಲ್ಲಿ, ಹಿಂದೆಂದಿಗಿಂತಲೂ ಕನ್ನಡದ ವಿಷಯ ಇಂದಿಗೆ ಹೆಚ್ಚು ಪ್ರಸ್ತುತ. ಕನ್ನಡದ ಬಗ್ಗೆ ಹೆಚ್ಚು ಚರ್ಚೆಯಾಗಬೇಕಾಗಿದೆ. ಕನ್ನಡಕ್ಕೆ ಕೆಲಸ ಮಾಡುವ ಮನಸ್ಸುಗಳು, ಕೃತಿಗಳು, ಚಿತ್ರಗಳು ಹೆಚ್ಚಾಗಿ ಹೊರಬರಬೇಕಿದೆ. “ಪಂಪ’ ಅಂಥದ್ದೇ ಒಂದು ಚಿತ್ರ. “ಪಂಪ’ನ ಕಥೆ, ಚಿತ್ರದ ಆಶಯ ಎಲ್ಲವೂ ನೋಡುಗರಿಗೆ ಮುಟ್ಟುವಂತಿದೆ. ಬಹುದಿನಗಳ ನಂತರ ಅಪ್ಪಟ ಕನ್ನಡ ಚಿತ್ರವೊಂದಕ್ಕೆ ಸಂಗೀತ ನೀಡಿರುವುದಕ್ಕೆ ತುಂಬ ಖುಷಿಯಿದೆ’ ಎನ್ನುತ್ತಾರೆ ಹಂಸಲೇಖ.

ಇನ್ನು ಕಳೆದ ಕೆಲ ದಶಕಗಳಿಂದ “ಟೋಟಲ್‌ ಕನ್ನಡ’ ಹೆಸರಿನಲ್ಲಿ ಕನ್ನಡ ಕೈಂಕರ್ಯ ಮಾಡುತ್ತಿರುವ ವಿ. ಲಕ್ಷ್ಮೀಕಾಂತ್‌ “ಕೀ ಕ್ರಿಯೇ ಷನ್ಸ್‌’ ಬ್ಯಾನರ್‌ನಲ್ಲಿ “ಪಂಪ’ ಚಿತ್ರವನ್ನು ನಿರ್ಮಿಸಿದ್ದಾರೆ. ಸಸ್ಪೆನ್ಸ್‌ ಕಂ ಕ್ರೈಂ-ಥ್ರಿಲ್ಲರ್‌ ಕಥಾಹಂದರ ಹೊಂದಿರುವ “ಪಂಪ’ ಚಿತ್ರದಲ್ಲಿ ಕೀರ್ತಿ ಭಾನು, ಸಂಗೀತಾ ಶೃಂಗೇರಿ, ರಾಘವ್‌ ನಾಯಕ್‌, ಕೃಷ್ಣ ಭಟ್‌ ಮತ್ತಿತರರು ಅಭಿನಯಿಸಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.