ಲವ್‌ ಮಾಕ್ಟೇಲ್‌ ಹುಡುಗಿ ಸಿಕ್ಕಾಪಟ್ಟೆ ಬಿಝಿ


Team Udayavani, Aug 5, 2023, 10:36 AM IST

tdy-7

“ಲವ್‌ ಮಾಕ್ಟೇಲ್‌’ ಚಿತ್ರದಲ್ಲಿ ಸಖತ್‌ ಎನರ್ಜಿಟಿಕ್‌ ಆಗಿ ಪಟ್‌ ಪಟ್‌ ಅಂತಾ ಮಾತನಾಡುತ್ತಾ, ಪ್ರತಿ ಮಾತಿಗೂ “ಹೆಂಗೆ ನಾವೂ’ ಅಂತಾ ಹೇಳುತ್ತಲೇ ಕೋಟಿ ಕನ್ನಡಿಗರ ಹೃದಯ ಗೆದ್ದೆ ಚೆಲುವೆ ರಚನಾ ಇಂದರ್‌. ಲವ್‌ ಮಾಕ್ಟೇಲ್‌ ಚಿತ್ರದಲ್ಲಿನ ತಮ್ಮ  ಅಭಿನಯಕ್ಕೆ ಸಾಕಷ್ಟು ಪ್ರಶಂಸೆಯನ್ನು ಪಡೆದ ರಚನಾ, ಈಗ ಸಖತ್‌ ಬ್ಯುಸಿಯಾಗಿದ್ದಾರೆ. ಒಂದರ ಮೇಲೊಂದು ಚಿತ್ರಗಳಲ್ಲಿ  ಅಭಿನಯಿಸುತ್ತಿರುವ ರಚನಾ ಕೈಯಲ್ಲಿ ಮೂರ್‍ನಾಲ್ಕು ಸಿನಿಮಾಗಳಿವೆ. ಅದರಲ್ಲಿ “4ಎನ್‌6′ ಹಾಗೂ “ನಾನು ಮತ್ತು ಗುಂಡ-2′ ಚಿತ್ರಗಳು ಕೂಡಾ ಸೇರಿವೆ.

ಡಿಟೆಕ್ಟಿವ್‌ ರಚನಾ:

ನಟಿ ರಚನಾ ಇಂದರ್‌ “4 ಎನ್‌ 6′ ಎಂಬ ಸಿನಿಮಾದಲ್ಲಿ  ನಟಿಸಿದ್ದು, ಸದ್ದಿಲ್ಲದೇ ಚಿತ್ರೀಕರಣ ಪೂರೈಸಿದೆ ಚಿತ್ರತಂಡ. ಮರ್ಡರ್‌ ಮಿಸ್ಟರಿ ಜೊತೆಗೆ ಥ್ರಿಲ್ಲರ್‌ ಕಥಾಹಂದರದ ಈ ಚಿತ್ರವನ್ನು ಸಾಯಿಪ್ರೀತಿ ಅವರು ನಿರ್ಮಾಣ ಮಾಡುತ್ತಿದ್ದಾರೆ. ನವೀನ್‌ ಕುಮಾರ್‌ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಈ ಚಿತ್ರಕ್ಕೆ  ದರ್ಶನ್‌ ಶ್ರೀನಿವಾಸ್‌ ಅವರು  ನಿರ್ದೇಶನವಿದೆ. ಕೊಲೆಯೊಂದರ ತನಿಖೆಯ ಸುತ್ತ ನಡೆಯುವ ಕಥಾಹಂದರ ಒಳಗೊಂಡ ಚಿತ್ರ ಇದಾಗಿದ್ದು, ನಟಿ ರಚನಾ ಇಂದರ್‌ ಅವರು ಮೊದಲ ಬಾರಿಗೆ ಫಾರೆನ್ಸಿಕ್‌ ಡಿಟೆಕ್ಟಿವ್‌ ಪಾತ್ರದಲ್ಲಿ ನಟಿಸಿದ್ದಾರೆ.

ಸದ್ಯ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಲ್ಲಿ ಬಿಝಿಯಾಗಿರುವ ಚಿತ್ರತಂಡ ಶೀಘ್ರದಲ್ಲಿ ಚಿತ್ರದ ಟೀಸರ್‌  ರಿಲೀಸ್‌ ಮಾಡಲಿದೆ. ಚರಣ್‌ ತೇಜ್‌ ಅವರ ಛಾಯಾಗ್ರಹಣ, ಸತ್ಯಕಹಿ ಅವರ ಸಂಭಾಷಣೆ ಹಾಗೂ ಸಾಯಿ ಸೋಮೇಶ್‌ ಅವರ ಸಂಗೀತ ಚಿತ್ರಕ್ಕಿದೆ. ಭವಾನಿ ಪ್ರಕಾಶ್‌, ಮೇಘನಾ, ಸಂಜಯ್‌ ನಾಯಕ್‌, ಸೌರವ್‌, ಸತ್ಯ ಹಾಗೂ ರೇಣುಕಾ ಹಾಗೂ ಇತರರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಮಾಡಲಿಂಗ್‌ ಬಯಸಿದ್ದ ರಚನಾ:

ಸಾಮಾನ್ಯವಾಗಿ ಸಿನಿಮಾ ಕ್ಷೇತ್ರಕ್ಕೆ ಎಂಟ್ರಿಕೊಡಬೇಕು ಅಂದರೆ ಒಂದು ಬ್ಯಾಗ್ರೌಂಡ್‌, ಮಾಡಲಿಂಗ್‌ ಅನುಭವ ಇರಬೇಕು. ಇಲ್ಲ ಅಂದರೆ ತುಸು ಕಷ್ಟ ಇಲ್ಲಿ ಉಳಿಯಲು ಅನ್ನೋ ಭಾವನೆಯಿದೆ. ಮಾಡೆಲಿಂಗ್‌ ಕ್ಷೇತ್ರದಲ್ಲಿ ಮಿಂಚಿ ಬಳಿಕ ನಟಿಯಾದವರ ಸಂಖ್ಯೆ ಬಹಳಷ್ಟಿದೆ. ಈ ನಿಟ್ಟಿನಲ್ಲಿ ತಾನು ಮಾಡೆಲಿಂಗ್‌ ಪ್ರವೇಶಿದರೆ ಸಿನಿರಂಗಕ್ಕೆ ಪ್ರವೇಶ ಪಡೆಯಬಹುದು ಎಂಬ ಆಸೆ ರಚನಾಗೆ. ಬಾಲ್ಯದ ದಿನಗಳಿಂದ ಅಭಿನಯ, ಸಿನಿಮಾ ಕ್ಷೇತ್ರದಲ್ಲಿ  ಆಸಕ್ತಿ ಇದ್ದ  ರಚನಾಗೆ ಮಾಡೆಲಿಂಗ್‌ ಮೂಲಕ ಸಿನಿರಂಗ ಪ್ರವೇಶಿಸಬಹುದು ಎಂದು ಮೊದಲು ಅದರ ತಯಾರಿ ಆರಂಭಿಸದರಂತೆ. ಮಾಡೆಲ್‌ಗ‌ಳಂತೆ ಫೋಟೋ ಶೂಟ್‌ ಕೂಡಾ ಮಾಡಿಸಿದ್ದರಂತೆ. ಅದರ ಪರಿಣಾಮ ಈಗ ಚಿತ್ರರಂಗದಲ್ಲಿ ಅವಕಾಶ ಸಿಕ್ಕಿ, ಬಿಝಿಯಾಗುತ್ತಿದ್ದಾರೆ.  ಇಂಥದ್ದೇ ಪಾತ್ರ ಮಾಡಬೇಕು ಎಂದು ಗೆರೆ ಹಾಕಿಕೊಂಡಿಲ್ಲವಂತೆ ರಚನಾ. “ನಾನು ಪಾತ್ರ ಎಂಥದ್ದೇ ಆದರು ನನಗೆ ಅಭಿನಯದ ಅವಕಾಶ ವಿರಬೇಕು. ಆದರೆ ಆ್ಯಕ್ಷನ್‌ ಪಾತ್ರಗಳು, ಚಿತ್ರದ ಕಥೆಯನ್ನು ಪ್ರಭಾವಿಸುವ ಪಾತ್ರಗಳು ಮಾಡಬೇಕು. ತೆರೆ ಮೇಲೆ ಕೇವಲ ಬಂದು ಹೋಗುವ ಬದಲು  ಅಭಿನಯನಕ್ಕೆ ಒತ್ತು ಇರುವ ಪಾತ್ರ ನನಗಿಷ್ಟ’ ಎನ್ನುವುದು ರಚನಾ ಅವರ ಆಶಯ.

ಬಯಸದೇ ಬಂದ ಭಾಗ್ಯ :

ತರಬೇತಿ ಕೇಂದ್ರದಲ್ಲಿ ಅಭಿನಯದ ಕುರಿತು ಪಳಗುವ ಮುನ್ನವೇ ಬಂದ ಮೊದಲ ಸಿನಿಮಾದ ಅವಕಾಶ ಅಭಿನಯದ ಕುರಿತು ಸಾಕಷ್ಟು ಕಲಿಯುವಂತೆ ಮಾಡಿತ್ತು. ಚಿತ್ರತಂಡ ಅಭಿನಯದ ಮತ್ತಷ್ಟು ಮಜಲುಗಳನ್ನು  ರಚನಾಗೆ ತಿಳಿಸಿತ್ತು. “ಆಗ ತಾನೆ ನಟನಾ ತರಬೇತಿಗೆ ಸೇರಿದವಳು ನಾನು , ಈ ಚಿತ್ರಕ್ಕೆ ಆಯ್ಕೆ ಆದೆ. ಹಾಗಾಗಿ, ಅಭಿನಯದ ಕುರಿತು ಅಷ್ಟು  ತಿಳಿದಿರಲಿಲ್ಲ . ಆದರೆ ಲವ್‌ ಮಾಕ್ಟೇಲ್‌ನಲ್ಲಿ ಅದರ ಅನುಭವ ಪಡೆದೆ. ಮೊದಲ ಚಿತ್ರದ ಮೂಲಕ ಕಲಿತೆ’ ಎನ್ನುವುದು ರಚನಾ ಮಾತು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.