ಮೊದಲ ಹಾಡಲ್ಲಿ ನಮ್ಮ ಹುಡುಗರು ಎಂಟ್ರಿ…
Team Udayavani, Oct 13, 2021, 12:22 PM IST
ರಿಯಲ್ಸ್ಟಾರ್ ಉಪೇಂದ್ರ ಅಣ್ಣನ ಮಗ ನಿರಂಜನ್ ಸುಧೀಂದ್ರ ನಾಯಕನಾಗಿ ಅಭಿನಯಿಸುತ್ತಿರುವ ಚೊಚ್ಚಲ ಚಿತ್ರ “ನಮ್ಮ ಹುಡುಗರು’ ತೆರೆಗೆ ಬರೋದಕ್ಕೆ ಸಿದ್ಧವಾಗುತ್ತಿದೆ. ಈಗಾಗಲೇ “ನಮ್ಮ ಹುಡುಗರು’ ಚಿತ್ರದ ಪ್ರಚಾರ ಕಾರ್ಯದಲ್ಲಿ ನಿರತವಾಗಿರುವ ಚಿತ್ರತಂಡ, ದಸರಾ ಹಬ್ಬದ ಸಂದರ್ಭದಲ್ಲಿ ಚಿತ್ರದ ಮೊದಲ ವಿಡಿಯೋ ಹಾಡನ್ನು ಬಿಡುಗಡೆಗೊಳಿಸಿದೆ.
ಪವರ್ಸ್ಟಾರ್ ಪುನೀತ್ ರಾಜಕುಮಾರ್ ಧ್ವನಿಯಾಗಿರುವ ಈ ಹಾಡಿಗೆ ಅಭಿಮಾನ್ ರಾಯ್ ಸಂಗೀತ ಸಂಯೋಜಿಸಿದ್ದಾರೆ. ಬಹದ್ದೂರ್ ಚೇತನ್ ಹಾಡಿಗೆ ಸಾಹಿತ್ಯ ಒದಗಿಸಿದ್ದಾರೆ. ಇದೇ ವೇಳೆ ಚಿತ್ರದ ಬಗ್ಗೆ ಮಾತನಾಡಿದ ನಾಯಕ ನಟ ನಿರಂಜನ್ ಸುಧೀಂದ್ರ, “ಕೆಲವು ಸಿನಿಮಾಗಳಲ್ಲಿ ಸಣ್ಣ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ನನಗೆ “ನಮ್ಮ ಹುಡುಗರು’ ಹೀರೋ ಆಗಿ ಮೊದಲ ಸಿನಿಮಾ.
ಈ ಸಿನಿಮಾದಲ್ಲಿ ನಾನು ಮಂಡ್ಯದ ಕಡೆಯು ಮುಗ್ಧ ಹುಡುಗನಾಗಿ ಕಾಣಿಸಿಕೊಂಡಿದ್ದೇನೆ. ಭರಮ ಅನ್ನೋದು ನನ್ನ ಪಾತ್ರದ ಹೆಸರು. ಪಾತ್ರದ ಪೋಷಣೆ ಚೆನ್ನಾಗಿದೆ. ಇದೊಂದು ಇನೋಸೆಂಟ್ ಲವ್ ಸ್ಟೋರಿ, ಫ್ಯಾಮಿಲಿ ಡ್ರಾಮಾ ಇರುವಂತಹ ಸಿನಿಮಾ. ಸುಮಾರು ಮೂರು ವರ್ಷದ ಹಿಂದೆ ಶುರುವಾದ ಸಿನಿಮಾ ಈಗ ರಿಲೀಸ್ ಹಂತಕ್ಕೆ ಬಂದಿದೆ. ಈಗಾಗಲೇ ಸಿನಿಮಾಕ್ಕೆ ಒಳ್ಳೆಯ ರೆಸ್ಪಾನ್ಸ್ ಸಿಗುತ್ತಿದೆ. ರಿಲೀಸ್ಗೆ ಬೇಕಾದ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ.
ಇದನ್ನೂ ಓದಿ;- ಕಸದ ತೊಟ್ಟಿಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ
ಪ್ರಮೋಶನ್ ಭಾಗವಾಗಿ “ಐ ಲವ್ ಯು…’ ಎಂಬ ವಿಡಿಯೋ ಸಾಂಗ್ ರಿಲೀಸ್ ಮಾಡಿದ್ದೇವೆ’ ಎಂದರು. ನವ ನಿರ್ದೇಶಕ ಹೆಚ್. ಬಿ ಸಿದ್ಧು “ನಮ್ಮ ಹುಡುಗರು’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಮೊದಲ ಬಾರಿಗೆ ನಿರ್ದೇಶನ ಮಾಡಿದ್ದಾರೆ. ಚಿತ್ರದ ಬಗ್ಗೆ ಮಾತನಾಡಿದ ಸಿದ್ಧು, “ಸಿನಿಮಾದ ಹೆಸರೇ ಹೇಳುವಂತೆ ಇದು ನಮ್ಮ ಹುಡುಗರ ಕಥೆ. ಪ್ರತಿಯೊಬ್ಬರ ಜೀವನದಲ್ಲೂ ನಡೆದ, ನೋಡಿದ ಘಟನೆಗಳನ್ನೇ ಇಟ್ಟುಕೊಂಡು ಈ ಸಿನಿಮಾ ಮಾಡಿದ್ದೇವೆ.
ಒಂದು ಸುಳ್ಳಿನಿಂದ ಆಗುವ ಅನಾಹುತದ ಬಗ್ಗೆ ಸಿನಿಮಾವಿದೆ. ಹಾಗಾಗಿ ಎಲ್ಲರಿಗೂ ಈ ಸಿನಿಮಾ ಕನೆಕ್ಟ್ ಆಗುತ್ತದೆ. “ನಮ್ಮ ಹುಡುಗರು’ ಅನ್ನೋದೆ ಏನೋ ಒಂದು ಆಶಾವಾದ, ಆತ್ಮೀಯತೆ, ಭರವಸೆ, ಬೆಂಬಲ ಎಲ್ಲವನ್ನೂ ಕೊಡುತ್ತದೆ. ಹಾಗಾಗಿ ಸಿನಿಮಾದ ಟೈಟಲ್ನ “ನಮ್ಮ ಹುಡುಗರು’ ಅಂಥ ಇಟ್ಟಿದ್ದೇವೆ. ಸದ್ಯ ಸಿನಿಮಾದ ಪ್ರಮೋಶ್ ನಡೆಯುತ್ತಿದ್ದು, ಇದೇ ನವೆಂಬರ್ ವೇಳೆಗೆ ರಿಲೀಸ್ ಮಾಡುವ ಯೋಚನೆ ಇದೆ’ ಎಂದರು.
ಚಿತ್ರದ ನಾಯಕಿ ರಾಧ್ಯಾ, ನಿರ್ಮಾಪಕ ಕೆ.ಕೆ ಅಶ್ರಫ್ ಚಿತ್ರದ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು. ಇನ್ನು “ನಮ್ಮ ಹುಡುಗರು’ ಚಿತ್ರದಲ್ಲಿ ಶರತ್ ಲೋಹಿತಾಶ್ವ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಪ್ರವೀಣ್, ಆಲ…ಓಕೆ ಅಲೋಕ್ ಮುಂತಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಸದ್ಯ ಪ್ರಮೋಶನ್ ಕೆಲಸದಲ್ಲಿ ಬಿಝಿಯಾಗಿರುವ “ನಮ್ಮ ಹುಡುಗರು’ ತೆರೆಮೇಲೆ ಎಷ್ಟರ ಮಟ್ಟಿಗೆ ಮನರಂಜಿಸುತ್ತಾರೆ ಅನ್ನೋದು ಇದೇ ನವೆಂಬರ್ ವೇಳೆಗೆ ಗೊತ್ತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.