ತಾರೆಯರ ನವರಾತ್ರಿ ವೈಭವ: ಹಬ್ಬದ ಮೂಡ್‌ನ‌ಲ್ಲಿ ನಟಿಯರು


Team Udayavani, Oct 7, 2021, 10:51 AM IST

ತಾರೆಯರ ನವರಾತ್ರಿ ವೈಭವ: ಹಬ್ಬದ ಮೂಡ್‌ನ‌ಲ್ಲಿ ನಟಿಯರು

ಇಂದಿನಿಂದ ದಸರಾ ಹಬ್ಬದ ಸಂಭ್ರಮ. ನಾಡಿನ ಜನ-ಮನ ದಸರಾ ಹಬ್ಬಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇನ್ನು ಚಿತ್ರರಂಗದ ತಾರೆಯರೂ ಕೂಡ ದಸರಾ ಹಬ್ಬದ ಸಂಭ್ರಮಕ್ಕೆ ಜೋರಾಗಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಹಬ್ಬದ ಸಂಭ್ರಮದಲ್ಲಿರುವ ಸ್ಯಾಂಡಲ್‌ ವುಡ್‌ ತಾರೆಯರು ದಸರಾಕ್ಕಾಗಿ ಏನೇನು ತಯಾರಿ ಮಾಡಿಕೊಂಡಿದ್ದಾರೆ ಅನ್ನೋದನ್ನ “ಉದಯವಾಣಿ’ ಜೊತೆ ಹಂಚಿಕೊಂಡಿದ್ದಾರೆ.

ದಸರಾ ಅಂದ್ರೆ ಇಡೀ ತಿಂಗಳು ಹಬ್ಬದ ಸಂಭ್ರಮದ ವಾತಾವರಣವಿರುತ್ತದೆ. ನಮ್ಮ ಮನೆಯಲ್ಲೆ ದಸರಾವನ್ನು ವಿಶೇಷವಾಗಿ ಆಚರಿಸುತ್ತಾರೆ. ನಾನು ಕೂಡ ಈ ಸೆಲೆಬ್ರೇಶನ್‌ನಲ್ಲಿ ಭಾಗಿಯಾಗುತ್ತೇನೆ. ಕೋವಿಡ್‌ ಭಯ ನಿಧಾನವಾಗಿ ಕಡಿಮೆಯಾಗುತ್ತಿರುವುದರಿಂದ, ಕಳೆದ ಬಾರಿಗಿಂತ ಈ ವರ್ಷ ಹಬ್ಬದ ರಂಗು ಹೆಚ್ಚಾಗುತ್ತಿದೆ. ಇನ್ನು ದಸರಾ ಹಬ್ಬದ ಸಂದರ್ಭದಲ್ಲೇ ನಾನು ಅಭಿನಯಿಸಿರುವ ಮೊದಲ ತೆಲುಗು ಸಿನಿಮಾ “ಪೆಲ್ಲಸಂದಡಿ’ ರಿಲೀಸ್‌ ಆಗುತ್ತಿದೆ. ದಸರಾ ಹಬ್ಬದ ಸಂದರ್ಭದಲ್ಲಿ ಆ ಸಿನಿಮಾದ ಪ್ರಮೋಶನ್‌ ಕೂಡ ನಡೆಯುತ್ತಿದೆ. ಎಲ್ಲರಿಗೂ ದಸರಾ ಹಬ್ಬ ಖುಷಿಯನ್ನು ತಂದುಕೊಡಲಿ.

– ಶ್ರೀಲೀಲಾ, ನಟಿ

ನವರಾತ್ರಿ ಸಂದರ್ಭದಲ್ಲಿ ಮನೆಯಲ್ಲಿ ಪ್ರತಿನಿತ್ಯ ಪೂಜೆಯಂತೂ ಇರುತ್ತದೆ. ಆದ್ರೆ ನಾನು ಮಾತ್ರ ಮನೆಯಲ್ಲಿ ಇರೋದಕ್ಕೆ ಸಾಧ್ಯವಾಗುತ್ತಿಲ್ಲ. ಸದ್ಯ ಡಾರ್ಲಿಂಗ್‌ ಕೃಷ್ಣ ಅವರ ಜೊತೆ “ದಿಲ್‌ ಪಸಂದ್‌’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದು, ಈ ಸಿನಿಮಾದ ಶೂಟಿಂಗ್‌ ನಡೆಯುತ್ತಿದೆ. ಇದರ ಜೊತೆ ಸೀರಿಯಲ್‌ ಶೂಟಿಂಗ್‌, ಟಿ.ವಿ ಪ್ರೋಗ್ರಾಂ ಇವೆಂಟ್ಸ್‌ ಕೂಡ ಇರುವುದರಿಂದ, ಈ ಬಾರಿ ಇಡೀ ನವರಾತ್ರಿ ಸಂದರ್ಭದಲ್ಲಿ ಎಂದಿನಂತೆ ನಾನು ಶೂಟಿಂಗ್‌ನಲ್ಲೇ ಬಿಝಿ ಯಾಗಿರುತ್ತೇನೆ. ಈ ನವರಾತ್ರಿ ಎಲ್ಲರಿಗೂ ಸುಖ, ಶಾಂತಿ, ಸಮೃದ್ಧಿ, ನೆಮ್ಮದಿ ತರಲಿ ಎಂದು ಹಾರೈಸುತ್ತೇನೆ.

-ಮೇಘಾ ಶೆಟ್ಟಿ, ನಟಿ

ಇದನ್ನೂ ಓದಿ:ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಮತ್ತು ಪ್ರಥಮ ಮಹಿಳೆ ಸವಿತಾ ಕೋವಿಂದ್‌ ಚಹಾಕೂಟ

ನಮ್ಮ ಮನೆಯಲ್ಲಿ ಪ್ರತಿವರ್ಷ ಅಮ್ಮನ ನೇತೃತ್ವದಲ್ಲೇ ದಸರಾ ಆಚರಣೆ ಆಗುತ್ತದೆ. ಮನೆಯಲ್ಲಿ ಪ್ರತಿನಿತ್ಯ ಪೂಜೆ, ಆಮೇಲೆ ಒಂದಷ್ಟು ದೇವಸ್ಥಾನಗಳಿಗೆ ಹೋಗುತ್ತೇವೆ. ಈ ಸಲ ದಸರಾ ಹಬ್ಬದ ಸಂದರ್ಭದಲ್ಲಿಯೇ ನನ್ನ ಸಿನಿಮಾ ಕೆಲಸಗಳನ್ನೂ ಮಾಡಬೇಕಾಗಿದೆ. ಸದ್ಯ “ಚಾರ್ಲಿ 777′, “ಲಕ್ಕಿ ಮ್ಯಾನ್‌’ ಸಿನಿಮಾಗಳ ಡಬ್ಬಿಂಗ್‌ ನಡೆಯುತ್ತಿದ್ದು, ಹಬ್ಬದ ನಡುವೆ ಈ ಸಿನಿಮಾಗಳ ಕೆಲಸವನ್ನೂ ಮಾಡುತ್ತಿದ್ದೇನೆ. ಸದ್ಯದ ಮಟ್ಟಿಗೆ ಕೊರೋನಾ ಇನ್ನೂ ಭಯ ಇರುವುದರಿಂದ, ಆದಷ್ಟು ಹೊರಗೆ ಹೋಗದೆ ಎಲ್ಲರೂ ಮನೆಯಲ್ಲೇ ಸರಳವಾಗಿ ದಸರಾ ಆಚರಿಸಿದರೆ ಒಳ್ಳೆಯದು. ಈ ದಸರಾ ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದು ಹಾರೈಸುತ್ತೇನೆ

-ಸಂಗೀತಾ ಶೃಂಗೇರಿ, ನಟಿ

ಈ ವರ್ಷ ದಸರಾ ನನಗೆ ಹಿಂದೆಂದಿಗಿಂತಲೂ ಡಬಲ್‌ ಖುಷಿಗೆ ಕಾರಣವಾಗಿದೆ. ಅದಕ್ಕೆ ಕಾರಣ “ಸಲಗ’ ಸಿನಿಮಾ. ಈ ದಸರಾ ಹಬ್ಬದ ಸಂದರ್ಭದಲ್ಲಿ ನಾನು ಅಭಿನಯಿಸಿರುವ “ಸಲಗ’ ಸಿನಿಮಾ ರಿಲೀಸ್‌ ಆಗ್ತಿದೆ. ಕಳೆದ ಕೆಲ ದಿನಗಳಿಂದ “ಸಲಗ’ ಪ್ರಮೋಶನ್ಸ್‌ ಜೋರಾಗಿ ನಡೆಯುತ್ತಿದೆ. ಈ ವರ್ಷ ರಿಲೀಸ್‌ ಆಗುತ್ತಿರುವ ನನ್ನ ಮೊದಲ ಸಿನಿಮಾ ಆಗಿರುವುದರಿಂದ, ನನ್ನ ಸಂಪೂರ್ಣ ಗಮನ “ಸಲಗ’ದ ಕಡೆಗಿದೆ. ಜೊತೆಗೆ ಮನೆಯಲ್ಲೂ ಹಬ್ಬಕ್ಕೆ ತಯಾರಿ ಮಾಡಿಕೊಂಡಿದ್ದೇನೆ. ಎಲ್ಲರೂ ಖುಷಿಯಿಂದ ದಸರಾ ಆಚರಿಸಿ ಜೊತೆಗೆ ನಮ್ಮ ಸಿನಿಮಾ ನೋಡಿ ಹರಸಿ. ಈ ದಸರಾ ಎಲ್ಲರಿಗೂ ಖುಷಿ, ಸಂತೋಷ ತರಲಿ ಎಂದು ಕೇಳಿಕೊಳ್ಳುತ್ತೇನೆ.

-ಸಂಜನಾ ಆನಂದ್‌, ನಟಿ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.