Sharan; ‘ಅವತಾರ್‌ ಪುರುಷ-2’ ಮೇಲೆ ಶರಣ್‌ ನಿರೀಕ್ಷೆ


Team Udayavani, Mar 10, 2024, 2:59 PM IST

Sharan; ‘ಅವತಾರ್‌ ಪುರುಷ-2’ ಮೇಲೆ ಶರಣ್‌ ನಿರೀಕ್ಷೆ

ಪುಷ್ಕರ್‌ ಮಲ್ಲಿಕಾರ್ಜುನಯ್ಯ ನಿರ್ಮಾಣದ, ಸಿಂಪಲ್‌ ಸುನಿ ನಿರ್ದೇಶನದ ಹಾಗೂ ಶರಣ್‌ ನಾಯಕರಾಗಿ ನಟಿಸಿರುವ “ಅವತಾರ ಪುರುಷ-2′ ಚಿತ್ರ ಮಾರ್ಚ್‌ 22 ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಇತ್ತೀಚೆಗೆ ಚಿತ್ರತಂಡ ಮಾಧ್ಯಮ ಮುಂದೆ ಬಂದು ಚಿತ್ರದ ಬಗೆಗಿನ ಮಾಹಿತಿ ನೀಡಿತು.

ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಸಿಂಪಲ್‌ ಸುನಿ, “ಎರಡು ವರ್ಷಗಳಿಂದ ಸ್ನೇಹಿತರು ಹಾಗೂ ಅಭಿಮಾನಿಗಳು ಅವತಾರ ಪುರುಷ 2 ಯಾವಾಗ ರಿಲೀಸ್‌? ಎಂದು. ಈಗ ನಮ್ಮ ಚಿತ್ರದ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಈ ಚಿತ್ರ ಇದೇ 22ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರದ ಮೊದಲ ಭಾಗ ನೋಡಿದವರಿಗೂ ಹಾಗೂ ನೋಡದವರಿಗೂ ಈ ಚಿತ್ರ ಇಷ್ಟವಾಗುವುದಂತು ಖಂಡಿತ. ಅಂತಹ ಉತ್ತಮ ಮನರಂಜನಾ ಅಂಶವಿರುವ ಚಿತ್ರವಿದು. ಶರಣ್‌ ಅವರು ನಾಯಕ ನಾಗಿ, ಆಶಿಕಾ ರಂಗನಾಥ್‌ ನಾಯಕಿಯಾಗಿ ನಟಿಸಿದ್ದಾರೆ. ಕುಮಾರ ಪಾತ್ರದಲ್ಲಿ ಶ್ರೀನಗರ ಕಿಟ್ಟಿ ಕಾಣಿಸಿ ಕೊಂಡಿದ್ದಾರೆ. ಸಾಯಿಕುಮಾರ್‌, ಸಾಧುಕೋಕಿಲ, ಸುಧಾ ರಾಣಿ, ಭವ್ಯ ಮುಂತಾದವರು ತಾರಾಬಳಗದಲ್ಲಿದ್ದಾರೆ. ಕಲಾವಿದರ ಹಾಗೂ ತಾಂತ್ರಿಕವರ್ಗದವರ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ’ ಎಂದರು.

“ಈ ಚಿತ್ರವನ್ನು ಮೋಹನ್‌ ಅವರು ಚಿತ್ರದ ವಿತರಣೆ ಮಾಡುತ್ತಿದ್ದಾರೆ. ನೋಡುಗರಿಗೆ ಈ ಚಿತ್ರ ಮನರಂಜನೆ ನೀಡುವುದು ಖಚಿತ’ ಎನ್ನುವುದು ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ.

“ನನ್ನನ್ನು ಕೂಡ ಬಹಳಷ್ಟು ಜನ ಅವತಾರ ಪುರುಷ 2 ಯಾವಾಗ ಬಿಡುಗಡೆಯಾಗುತ್ತದೆ? ಎಂದು ಕೇಳುತ್ತಿದ್ದರು. ಚಿತ್ರದ ಎರಡನೇ ಭಾಗ ಇಷ್ಟು ಕುತೂಹಲ ಹುಟ್ಟಿಸಿದೆ ಎಂದರೆ ನಿಜಕ್ಕೂ ಮೊದಲ ಭಾಗ ಎಲ್ಲರಿಗೂ ಇಷ್ಟವಾಗಿದೆ ಎಂದು ಅರ್ಥ. ನಾನು, ನನ್ನ ಯಾವ ಸಿನಿಮಾವನ್ನು ಮೊದಲು ನೋಡುವುದಿಲ್ಲ. ಅಭಿಮಾನಿಗಳ ಜೊತೆಗೆ ಚಿತ್ರಮಂದಿರದಲ್ಲೇ ನೋಡುತ್ತೇನೆ. ಈ ಚಿತ್ರವನ್ನು ನೋಡಲು ನಾನು ಸಹ ಕಾತುರದಿಂದ ಕಾಯುತ್ತಿದ್ದೇನೆ. ಕೆಲವರು ಚಿತ್ರ ಸ್ವಲ್ಪ ತಡವಾಯಿತು ಎನ್ನುತ್ತಿದ್ದಾರೆ. ಮೊದಲ ಭಾಗ 2022 ರಲ್ಲಿ. ಎರಡನೇ ಭಾಗ 2024 ರ ಮಾರ್ಚ್‌ 22ರಂದು ತೆರೆಕಾಣುತ್ತಿದೆ’ ಎನ್ನುವುದು ಶರಣ್‌ ಮಾತು.

“ಬಹಳ ದಿನಗಳ ನಂತರ ನನ್ನ ಅಭಿನಯದ ಕನ್ನಡ ಚಿತ್ರ ಬಿಡುಗಡೆಯಾಗುತ್ತಿದೆ. ಒಳ್ಳೆಯ ತಂಡದೊಂದಿಗೆ ಚಿತ್ರ ಮಾಡಿರುವ ಖುಷಿಯಿದೆ. ದಯವಿಟ್ಟು ಚಿತ್ರವನ್ನು ಚಿತ್ರಮಂದಿರಗಳಲ್ಲೇ ನೋಡಿ’ ಎಂದರು ನಟಿ ಆಶಿಕಾ ರಂಗನಾಥ್‌. ನಟ ಶ್ರೀನಗರ ಕೊಟ್ಟಿ ಕೂಡಾ ಮಾತನಾಡಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.