![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 6, 2022, 9:29 AM IST
ಕೊನೆಗೂ ಶಿವರಾಜ್ಕುಮಾರ್ ಅಭಿಮಾನಿಗಳ ಕುತೂಹಲಕ್ಕೆ ತೆರೆಬಿದ್ದಿದೆ. ಅಭಿಮಾನಿಗಳು ಸಂಭ್ರಮಿಸಲು ಕಾಯುತ್ತಿದ್ದ ದಿನವನ್ನು ಚಿತ್ರತಂಡ ಈಗ ಅಧಿಕೃತವಾಗಿ ಘೋಷಿಸಿದೆ. ಅದು “ಬೈರಾಗಿ’ ಚಿತ್ರದ ರಿಲೀಸ್ ಡೇಟ್.
ಹೌದು, ಶಿವಣ್ಣ ನಟನೆಯ “ಬೈರಾಗಿ’ ಚಿತ್ರ ಜುಲೈ 1ರಂದು ತೆರೆಕಾಣುತ್ತಿದೆ. ಈ ಮೂಲಕ ಶಿವಣ್ಣ ಅಭಿಮಾನಿಗಳ ಕುತೂಹಲಕ್ಕೆ ತೆರೆಬಿದ್ದಿದೆ. 2022ರಲ್ಲಿ ಬಿಡುಗಡೆಯಾಗುತ್ತಿರುವ ಶಿವರಾಜ್ ಕುಮಾರ್ ಅವರ ಮೊದಲ ಚಿತ್ರ ಕೂಡಾ ಇದಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಪೋಸ್ಟರ್, ಸ್ಟಿಲ್ಸ್ ಸಿನಿಮಾ ಬಗೆಗಿನ ಕುತೂಹಲ ಹೆಚ್ಚಿಸಿದ್ದು, ಮಾಸ್ ಪ್ರಿಯರನ್ನು ಸ್ವಲ್ಪ ಹೆಚ್ಚೇ ಸೆಳೆಯುತ್ತಿದೆ.
ಇನ್ನು, ಈಗಾಗಲೇ ಚಿತ್ರದ “ರಿದಮ್ ಆಫ್ ಶಿವಪ್ಪ’ ಹಾಡು ಬಿಡುಗಡೆಯಾಗಿ ಹಿಟ್ಲಿಸ್ಟ್ ಸೇರಿದೆ. ಈ ಹಾಡನ್ನು ಶಿವರಾಜ್ ಕುಮಾರ್ ಹಾಗೂ ಶರಣ್ ಜೊತೆಯಾಗಿ ಹಾಡಿದ್ದಾರೆ. ಆರಂಭದಲ್ಲಿ ಈ ಹಾಡನ್ನು ಶಿವಣ್ಣ-ಪುನೀತ್ ರಾಜ್ಕುಮಾರ್ ಜೊತೆಯಾಗಿ ಹಾಡಲು ನಿರ್ಧರಿಸಿದ್ದರಂತೆ. ಪುನೀತ್ ಅವರು ಕೂಡಾ ಈ ಹಾಡಲು ಒಪ್ಪಿದ್ದರು. ಇತ್ತೀಚೆಗಷ್ಟೇ ಈ ವಿಚಾರವನ್ನು ಶಿವಣ್ಣ ಹೇಳಿಕೊಂಡಿದ್ದಾರೆ. “ವಜ್ರಕಾಯ’ ಬಳಿಕ ಶಿವಣ್ಣನ ಸಿನಿಮಾಕ್ಕೆ ಶರಣ್ ದನಿಗೂಡಿಸಿದ ಹಾಡು ಮಾಸ್ಪ್ರಿಯರನ್ನು ಸೆಳೆಯುತ್ತಿದೆ.
ಪ್ರಮೋದ್ ಮರವಂತೆ ಸಾಹಿತ್ಯವಿರುವ “ಸಂಡೆ ಮಂಡೆ ಎವೆರಿಡೇ, ಲವ್ವಿಗಿಲ್ಲ ಹಾಲಿಡೇ…’ ಎಂಬ ಹಾಡು ಸಿಂಗಲ್ ಶಾಟ್ನಲ್ಲಿ ಶೂಟ್ ಮಾಡಿರುವುದು ಮತ್ತೂಂದು ವಿಶೇಷ. ಹಾಡು ಮಾಸ್ ಪ್ರಿಯರನ್ನು ಹೆಚ್ಚೆಚ್ಚು ಸೆಳೆಯುತ್ತಿದೆ.
“ರಿದಮ್ ಆಫ್ ಶಿವಪ್ಪ’ ಕಾನ್ಸೆಪ್ಟ್’ನಡಿ ಮೂಡಿಬಂದಿರುವ ಈ ಹಾಡಿಗೆ ಇಡೀ “ಬೈರಾಗಿ’ ತಂಡ ಹೆಜ್ಜೆ ಹಾಕಿದ್ದು, ದೇವನಹಳ್ಳಿ ಬಳಿಯಿರುವ ನೂತನ ಮಾಲ್ ನಲ್ಲಿ ಚಿತ್ರೀಕರಣ ನಡೆಸಲಾಗಿದೆ. ಮುರಳಿ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಬಿಡುಗಡೆಯಾಗಿದ್ದ “ನಖರನಖ’ ಹಾಡಿಗೆ ಆ್ಯಂಥೋನಿ ದಾಸ್ ದನಿಗೂಡಿಸಿದ್ದರು. ಇದೀಗ “ಸಂಡೆ-ಮಂಡೆ’ ಹಾಡು ಶಿವಣ್ಣ-ಶರಣ್ ದನಿಯಲ್ಲಿ ಮೂಡಿಬಂದಿದ್ದು ಜೆ.ಪಿ ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ರಿಲೀಸ್ ಆಗಿದೆ.
ವಿಜಯ್ ಮಿಲ್ಟನ್ ನಿರ್ದೇಶನವಿರುವ ಈ ಚಿತ್ರದಲ್ಲಿ ಹಿರಿಯ ನಟ ಶಶಿಕುಮಾರ್, ಅನು ಪ್ರಭಾಕರ್, ಅಂಜಲಿ, ಯಶ ಶಿವಕುಮಾರ್, ಚಿಕ್ಕಣ್ಣ ಮೊದಲಾದವರ ನಟಿಸಿದ್ದಾರೆ. ಕೃಷ್ಣ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಕೃಷ್ಣ ಸಾರ್ಥಕ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ “ಬೈರಾಗಿ’ ಕೂಡಾ ಸೇರಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.