
Sandalwood: ಸೋಷಿಯಲ್ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ
Team Udayavani, Apr 28, 2024, 4:05 PM IST

ಸೋಷಿಯಲ್ ಮೀಡಿಯಾ ಕುರಿತು ಹಲವು ನಟ-ನಟಿಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಮಾತುಗಳನ್ನು ತಿರುಚುವ, ಥಂಬ್ನೈಲ್ ಮೂಲಕ ಅವಹೇಳನ ಮಾಡುವುದನ್ನು ವಿರೋಧಿಸಿದ್ದಾರೆ. ಈಗ ನಟ ಶಿವರಾಜಕುಮಾರ್ ಸಹ ಸೋಷಿಯಲ್ ಮೀಡಿಯಾ ವಿರುದ್ಧ ಕಿಡಿಕಾರಿದ್ದಾರೆ.
ಶನಿವಾರ ಬೆಳಿಗ್ಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನಡೆದ “ಫಾದರ್’ ಚಿತ್ರದ ಮುಹೂರ್ತದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾ ಎನ್ನುವುದು ಆಟ ಸಾಮಾನು ಆಗಿಬಿಟ್ಟಿದೆ. ನಾವಿದ್ದ ಕಾಲ ಬಹಳ ಚೆನ್ನಾಗಿತ್ತು. ನಾವು ನಿಜಕ್ಕೂ ಪುಣ್ಯ ಮಾಡಿದ್ದೆವು. ಸೋಷಿಯಲ್ ಮೀಡಿಯಾದವರು ದಯವಿಟ್ಟು ಒಳ್ಳೆಯದು ಮಾಡೋಕೆ ನೋಡಿ. ಕೆಟ್ಟದ್ದು ಮಾಡಬೇಡಿ’ ಎಂದು ಕಿವಿಮಾತು ಹೇಳಿದರು.
ಸೋಷಿಯಲ್ ಮೀಡಿಯಾದಿಂದ ತಮ್ಮ ಹಾಗೂ ನಿರ್ಮಾಪಕ- ನಿರ್ದೇಶಕ ಆರ್. ಚಂದ್ರು ಅವರ ಸಂಬಂಧ ಹಾಳಾಗುವುದಿಲ್ಲ ಎಂದ ಅವರು, “ನೀವೇನೇ ಮಾಡಿದರೂ, ನಮ್ಮ ಸಂಬಂಧ ಹಾಳಾಗಲ್ಲ. ನನ್ನ ಮತ್ತು ಚಂದ್ರು ಅವರ ಬಾಂಧವ್ಯ ಯಾವಾಗಲೂ ಚೆನ್ನಾಗಿರುತ್ತದೆ. ನಾನೇನೇ ಇದ್ದರೂ ನೇರವಾಗಿ ಚಂದ್ರು ಅವರನ್ನು ಕೇಳುತ್ತೇನೆ. ಪತ್ರಿಕೋದ್ಯೋಮದ ನೈತಿಕತೆಯನ್ನು ಕೆಡಿಸುವ ಕೆಲಸ ಸೋಷಿಯಲ್ ಮೀಡಿಯಾ ಮಾಡುತ್ತಿದೆ. ಇಷ್ಟ ಬಂದ ಹಾಗೆ ಏನು ಬೇಕಾದರೂ ಹಾಕಿಕೊಳ್ಳಬಹುದು ಎನ್ನುವುದು ತಪ್ಪು. ನಿಮಗೆ ತಮಾಷೆ ಎನಿಸಬಹುದು. ನಿಮ್ಮನೆ ಒಲೆ ಉರಿಯೋಕೆ ಇನ್ನೊಬ್ಬರ ಮನೆಯ ಒಲೆ ಆರಿಸುವ ಕೆಲಸ ಮಾಡಬೇಡಿ. ಅದು ನಿಮಗೈ ಅಪಾಯ ಆಗುತ್ತದೆ’ ಎಂದು ಶಿವರಾಜಕುಮಾರ್ ಈ ಸಂದರ್ಭದಲ್ಲಿ ಹೇಳಿದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.