ಶ್ರೇಯಸ್‌ ಈಗ “ವಿಷ್ಣುಪ್ರಿಯ’

ಪಡ್ಡೆಹುಲಿ ಹುಡುಗನ ಹೊಸ ಚಿತ್ರ

Team Udayavani, Jul 22, 2019, 3:01 AM IST

shreyas

ನಿರ್ಮಾಪಕ ಕೆ. ಮಂಜು ಪುತ್ರ ಶ್ರೇಯಸ್‌ “ಪಡ್ಡೆಹುಲಿ’ ಚಿತ್ರದ ಮೂಲಕ ನಾಯಕ ನಟನಾಗಿ ಬೆಳ್ಳಿತೆರೆಗೆ ಪರಿಚಯವಾಗಿದ್ದು ನಿಮಗೆ ನೆನಪಿರಬಹುದು. “ಪಡ್ಡೆಹುಲಿ’ ಚಿತ್ರ ನಿರೀಕ್ಷಿತ ಮಟ್ಟದಲ್ಲಿ ಬಾಕ್ಸಾಫೀಸ್‌ನಲ್ಲಿ ಸದ್ದು ಮಾಡದಿದ್ದರೂ, ನಟ ಶ್ರೇಯಸ್‌ ನಟನೆ, ಎನರ್ಜಿ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ಶ್ರೇಯಸ್‌ ಸದ್ದಿಲ್ಲದೆ ತಮ್ಮ ಎರಡನೇ ಚಿತ್ರದ ತಯಾರಿ ಶುರು ಮಾಡಿದ್ದರು.

ಶ್ರೇಯಸ್‌ ಅಭಿನಯಿಸುತ್ತಿರುವ ಎರಡನೇ ಚಿತ್ರದ ಟೈಟಲ್‌ ಫಿಕ್ಸ್‌ ಆಗಿದೆ. ಚಿತ್ರಕ್ಕೆ “ವಿಷ್ಣುಪ್ರಿಯ’ ಎಂದು ಹೆಸರಿಡಲಾಗಿದ್ದು, ನೈಜ ಘಟನೆಯನ್ನ ಆಧರಿಸಿ ಈ ಚಿತ್ರ ತೆರೆಗೆ ಬರುತ್ತಿದೆ. ಎಲ್ಲರಿಗೂ ಗೊತ್ತಿರುವಂತೆ ನಿರ್ಮಾಪಕ ಕೆ.ಮಂಜು, ಡಾ.ವಿಷ್ಣುವರ್ಧನ್‌ ಅವರ ದೊಡ್ಡ ಅಭಿಮಾನಿ. ಅದೇ ಕಾರಣದಿಂದ ಮಗನ ಮೊದಲ ಚಿತ್ರ “ಪಡ್ಡೆಹುಲಿ’ಯಲ್ಲೂ ವಿಷ್ಣುವರ್ಧನ್‌ ಅವರ ಸ್ಮರಣೆ ಮಾಡಿದ್ದರು.

ಈಗ ಎರಡನೇ ಚಿತ್ರಕ್ಕೂ “ವಿಷ್ಣುಪ್ರಿಯ’ ಎಂಬ ಟೈಟಲ್‌ ಇಟ್ಟು, ವಿಷ್ಣುವರ್ಧನ್‌ ಮೇಲಿನ ಅಭಿಮಾನ ಮೆರೆದಿದ್ದಾರೆ ಕೆ.ಮಂಜು. ಇಲ್ಲಿಯವರೆಗೆ 25ಕ್ಕೂ ಹೆಚ್ಚು ಚಿತ್ರಗಳನ್ನು, ಹಲವು ಜಾಹೀರಾತುಗಳನ್ನು ನಿರ್ದೇಶಿಸಿರುವ ಮಲಯಾಳಂ ಮೂಲದ ನಿರ್ದೇಶಕ ವಿ.ಕೆ ಪ್ರಕಾಶ್‌, “ವಿಷ್ಣುಪ್ರಿಯ’ ಚಿತ್ರಕ್ಕೆ ಆ್ಯಕ್ಷನ್‌-ಕಟ್‌ ಹೇಳುತ್ತಿದ್ದಾರೆ. ಇದೊಂದು ನೈಜ ಘಟನೆ ಆಧಾರಿತ ಚಿತ್ರವಾಗಿದ್ದು, ಧಾರವಾಡದ ಸಿಂಧುಶ್ರೀ ಎಂಬ ಹುಡುಗಿಯ ಕಥೆ ಆಯ್ಕೆಯಾಗಿದೆ.

ನೈಜ ಘಟನೆಯನ್ನಾಧರಿಸಿದ ಕಥೆ ಇದಾಗಿದೆಯಂತೆ. ಈ ಹಿಂದೆ ಕೆ.ಮಂಜು ಅವರು “ಕೆ.ಮಂಜು ಸ್ಕ್ರಿಪ್ಟ್ ಯೋಜನೆ’ ಯಡಿ ಲೇಖಕರಿಂದ ಕಥೆ ಆಹ್ವಾನಿಸಿದ್ದರು. ಸುಮಾರು 50ಕ್ಕೂ ಹೆಚ್ಚು ಕಥೆಗಳು ಬಂದಿದ್ದು, ಅದರಲ್ಲಿ ಸಿಂಧುಶ್ರೀಯವರ ಕಥೆ ಆಯ್ಕೆಯಾಗಿದೆ. ಅಂದಹಾಗೆ, “ಪಡ್ಡೆಹುಲಿ’ ಚಿತ್ರದ ನಂತರ ಶ್ರೇಯಸ್‌ಗಾಗಿ ಇಲ್ಲಿಯವರೆಗೆ ಸುಮಾರು 85ಕ್ಕೂ ಹೆಚ್ಚು ಸ್ಕ್ರಿಪ್ಟ್ಗಳು ಬಂದಿದ್ದರೂ,

ಯಾವ ಕಥೆಯನ್ನೂ ಒಪ್ಪಿಕೊಂಡಿರದ ನಿರ್ಮಾಪಕ ಕೆ. ಮಂಜು, ಈ ಚಿತ್ರದ ಕಥೆ ನೈಜವಾಗಿದೆ ಮತ್ತು ಹೊಸತರವಾಗಿದೆ ಎನ್ನುವ ಕಾರಣಕ್ಕೆ ಒಪ್ಪಿಕೊಳ್ಳಲಾಗಿದೆ ಎನ್ನುತ್ತಾರೆ. ಸದ್ಯ “ವಿಷ್ಣುಪ್ರಿಯ’ ಚಿತ್ರದ ಸ್ಕ್ರಿಪ್ಟ್ ಕೆಲಸಗಳು ಅಂತಿಮ ಹಂತದಲ್ಲಿದ್ದು, ಆಗಸ್ಟ್‌ನಲ್ಲಿ ಈ ಚಿತ್ರದ ಮುಹೂರ್ತ ನೆರವೇರಲಿದ್ದು, ಸೆಪ್ಟೆಂಬರ್‌ನಲ್ಲಿ “ವಿಷ್ಣುಪ್ರಿಯ’ ಚಿತ್ರದ ಚಿತ್ರೀಕರಣ ಶುರುವಾಗಲಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.