![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 9, 2021, 12:48 PM IST
ದುನಿಯಾ ವಿಜಯ್ ಅಭಿನಯದ ಮತ್ತು ಚೊಚ್ಚಲ ನಿರ್ದೇಶನದ “ಸಲಗ’ ಚಿತ್ರ ಇದೇ ಅಕ್ಟೋಬರ್ 14ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕಳೆದ ಕೆಲ ದಿನಗಳಿಂದ ಭರ್ಜರಿಯಾಗಿ “ಸಲಗ’ ಪ್ರಚಾರ ಕಾರ್ಯದಲ್ಲಿರುವ ಚಿತ್ರತಂಡ, ಚಿತ್ರವನ್ನು ಪ್ರೇಕ್ಷಕರಿಗೆ ತಲುಪಿಸುವ ಕಸರತ್ತಿನಲ್ಲಿ ನಿರತವಾಗಿದೆ. ಇನ್ನು ದಸರಾ
ಹಬ್ಬದ ಸಂದರ್ಭದಲ್ಲಿಯೇ “ಸಲಗ’ ತೆರೆಗೆ ಬರುತ್ತಿರುವುದರಿಂದ, ಬಿಡುಗಡೆಗೂ ನಾಲ್ಕು ದಿನಗಳ ಮುಂಚೆಯೇ “ಸಲಗ’ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ನಡೆಸಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ.
ಇದೇ ಅಕ್ಟೋಬರ್ 10ರಂದು ಬೆಂಗಳೂರಿನಲ್ಲಿ ಖಾಸಗಿ ಹೋಟೆಲ್ನಲ್ಲಿ “ಸಲಗ’ ಪ್ರೀ-ರಿಲೀಸ್ ಇವೆಂಟ್ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ನಟರಾದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ “ಸಲಗ’ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸುತ್ತಿದ್ದಾರೆ.
ಚಿತ್ರರಂಗದ ಸ್ಟಾರ್ ಜೊತೆಗೆ ರಾಜಕೀಯ ರಂಗದ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದು, “ಸಲಗ’ ಪ್ರೀ-ರಿಲೀಸ್ ಇವೆಂಟ್ ಭರದಿಂದ ತಯಾರಿ ನಡೆಯುತ್ತಿದೆ.
ಇದನ್ನೂ ಓದಿ:‘ನಿನ್ನ ಸನಿಹಕೆ’ ಚಿತ್ರ ವಿಮರ್ಶೆ: ಸಾಗುತ ದೂರ ಮತ್ತಷ್ಟು ಸನಿಹ!
ಇನ್ನು ಇತ್ತೀಚೆಗಷ್ಟೇ ಸೆನ್ಸಾರ್ ಪರೀಕ್ಷೆಯಲ್ಲಿ “ಸಲಗ’ ಪಾಸಾಗಿದ್ದು, ಯಾವುದೇ ಕಟ್ಸ್ ಇಲ್ಲದೆ ಚಿತ್ರಕ್ಕೆ “ಎ’ ಪ್ರಮಾಣ ಪತ್ರ ನೀಡಲಾಗಿದೆ. ರೌಡಿಸಂ ಮತ್ತು ಅಂಡರ್ ವರ್ಲ್ಡ್ ಕಥಾಹಂದರ ಹೊಂದಿರುವ “ಸಲಗ’ ಚಿತ್ರದಲ್ಲಿ ದುನಿಯಾ ವಿಜಯ್ಗೆ ನಾಯಕಿಯಾಗಿ ಸಂಜನಾ ಆನಂದ್ ಜೋಡಿಯಾಗಿದ್ದಾರೆ. ನಟರಾದ ಡಾಲಿ ಧನಂಜಯ್, ಕಾಕ್ರೋಚ್ ಸುಧೀ, ಯಶ್ ಶೆಟ್ಟಿ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಚಿತ್ರದ ಹಾಡುಗಳಿಗೆ ಚರಣ್ ರಾಜ್ ಸಂಗೀತ ಸಂಯೋಜಿಸಿದ್ದು, ಈಗಾಗಲೇ ಬಿಡುಗಡೆಯಾಗಿರುವ “ಸಲಗ’ ಹಾಡುಗಳು, ಟ್ರೇಲರ್ ದೊಡ್ಡ ಮಟ್ಟಿಗೆ ಸೌಂಡ್ ಮಾಡುತ್ತಿದೆ. ಕೆ.ಪಿ ಶ್ರೀಕಾಂತ್ “ಸಲಗ’ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.