![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 8, 2024, 3:11 PM IST
“ಸೋಮು ಸೌಂಡ್ ಇಂಜಿನಿಯರ್’- ಸದ್ಯ ಕನ್ನಡ ಚಿತ್ರರಂಗದಲ್ಲಿ ನಿರೀಕ್ಷೆ ಹುಟ್ಟಿಸಿರುವ ಹೊಸಬರ ಸಿನಿಮಾವಿದು. ಈಗ ಆ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ನೋಡುಗರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಇತ್ತೀಚೆಗೆ ಚಿತ್ರದ ಟ್ರೇಲರ್ ಅನ್ನು ನಟ ಡಾಲಿ ಧನಂಜಯ್ ಹಾಗೂ ನಿರ್ದೇಶಕ ಸೂರಿ ಬಿಡುಗಡೆ ಮಾಡಿ ತಂಡಕ್ಕೆ ಶುಭಕೋರಿದರು. ಬಳಿಕ ಮಾತನಾಡಿದ ನಿರ್ದೇಶಕ ಸೂರಿ, “ಸಿನಿಮಾ ಕಾಡುತ್ತದೆ. ಅದು ಸತ್ಯ. ಸಿನಿಮಾದಲ್ಲಿ ತುಂಬಾ ವಿಷಯಗಳು ಇವೆ. ಆ ಪ್ರದೇಶದಿಂದ ಬರುವ ಸಿನಿಮಾಗಳು ನಮಗೆ ಬೇಕಿವೆ. ಸಿನಿಮಾದಿಂದ ಸಿನಿಮಾಗೆ ನಾವು ಬೇರೆ ರೀತಿಯ ಫಾರ್ಮೆಟ್ ಗೆ ಹೋಗುತ್ತಿದ್ದೇವೆ. ಶೂಟ್ ಮಾಡುವುದು ಒಂದೇ ರೀತಿ ಸಾಧ್ಯವಿಲ್ಲ. ಅದೊಂದು ಬೇರೆನೇ ಇರುತ್ತದೆ. ಟಗರು ಆಗುವುದಕ್ಕೂ ಮೊದೆಲೇ ನನಗೆ ಅವನಲ್ಲಿ ಪ್ರೌಡಿಮೆ ನೋಡಿದೆ. ಇವನಿಗೆ ಅರ್ಥವಾಗುತ್ತಿದೆ ಎಂದಾಗ ಸಿನಿಮಾ ಮಾಡು ಎಂದೇ’ ಎನ್ನುತ್ತಾ ತಮ್ಮ ಶಿಷ್ಯನ ಬಗ್ಗೆ ಹೇಳಿದರು.
“ಈ ಸಿನಿಮಾ ಶುರುವಾಗಿದ್ದು, ನನ್ನ ಗುರುಗಳು ಹೇಳಿದ ಮಾತಿನಿಂದ. ನಿಮ್ಮ ಭಾಷೆ, ನೀನು ಅಲ್ಲೇ ಬೆಳೆದಿದ್ದೀಯಾ? ಅಲ್ಲಿ ಸಿನಿಮಾ ಮಾಡು ಅಭಿ ಎಂದರು. ಸ್ಕ್ರಿಪ್ಟ್ ಮುಗಿದ ಮೇಲೆ ಸೂರಿ ಅವರಿಗೆ ಕೊಟ್ಟೆ. ಸರ್ ಇದನ್ನು ಮಾಡಿಕೊಂಡು ಬಾ ಎಂದರು. ಮುಗಿದ ಆದ ಮೇಲೆ ಅವರಿಗೆ ತೋರಿಸಿದೆ. ನನಗೆ ಖುಷಿ ಆಯ್ತು. ನನಗೆ ಸರ್ಗೆ ತೋರಿಸುವವರೆಗೆ ಭಯ ಇತ್ತು’ ಎನ್ನುವುದು ನಿರ್ದೇಶಕ ಅಭಿ ಮಾತು.
“ಸೋಮು ಎಂಬ ಪಾತ್ರದಲ್ಲಿ ನಟಿಸಿದ್ದೇನೆ. ದುರಂಕಾರದಲ್ಲಿ ಮೆರೆಯುತ್ತಿರುವ ಹುಡುಗನ ಲೈಫ್ ನಲ್ಲಿ ಏನಾಗುತ್ತದೆ ಅನ್ನೋದೇ ಸಿನಿಮಾ’ ಎಂದರು ನಾಯಕ ಶ್ರೇಷ್ಠ. ಚರಣ್ ರಾಜ್ ಚಿತ್ರಕ್ಕೆ ಸಂಗೀತ ನೀಡಿದ್ದರೆ, ಧನಂಜಯ ರಂಜನ್,
ನಾಗಾರ್ಜುನ ಶರ್ಮಾ, ಹಾಡುಗಳಿಗೆ ಸಾಹಿತ್ಯ ಬರೆದಿದ್ದು, ಮಾಸ್ತಿ ಜೊತೆಗೂಡಿ ಅಭಿ ಸಂಭಾಷಣೆ ಬರೆದಿದ್ದಾರೆ. ದೀಪು ಎಸ್ ಕುಮಾರ್ ಅವರ ಸಂಕಲನ ಈ ಚಿತ್ರಕ್ಕಿದೆ. ಸಲಗ ಹಾಗೂ ಭೀಮ ಖ್ಯಾತಿಯ ಶಿವಸೇನಾ ತಮ್ಮ ಕ್ಯಾಮರಾದಲ್ಲಿ ಚಿತ್ರವನ್ನ ಸೆರೆ ಹಿಡಿದಿದ್ದಾರೆ. ನಾಯಕಿಯಾಗಿ ಶೃತಿ ಪಾಟೀಲ್ ನಟಿಸಿದ್ದಾರೆ. ಕ್ರಿಸ್ಟೋಫರ್ ಕಿಣಿ ಚಿತ್ರದ ನಿರ್ಮಾಪಕರು.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.