![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 31, 2019, 7:02 AM IST
ದರ್ಶನ್ ನಾಯಕರಾಗಿರುವ “ರಾಬರ್ಟ್’ ಚಿತ್ರಕ್ಕೆ ದಿನದಿಂದ ದಿನಕ್ಕೆ ಹೊಸ ಕಲಾವಿದರು ಸೇರಿಕೊಳ್ಳುತ್ತಲೇ ಇದ್ದಾರೆ. ಈಗಾಗಲೇ ವಿನೋದ್ ಪ್ರಭಾಕರ್, ತೇಜಸ್ವಿನಿ ಸೇರಿರುವ ಸುದ್ದಿಯನ್ನು ನೀವು ಓದಿರಬಹುದು. ಈಗ ಸೋನಾಲ್ ಮೊಂತೆರೋ ಸರದಿ. ಯಾವ ಸೋನಾಲ್ ಮೊಂತೆರೋ ಎಂದರೆ “ಪಂಚತಂತ್ರ’ ಸಿನಿಮಾ ಬಗ್ಗೆ ಹೇಳಬೇಕು. ಯೋಗರಾಜ್ ಭಟ್ ನಿರ್ದೇಶನದ “ಪಂಚತಂತ್ರ’ ಚಿತ್ರದಲ್ಲಿ ಬೋಲ್ಡ್ ಆಗಿ ನಟಿಸಿದ ಸೋನಾಲ್ಗೆ “ರಾಬರ್ಟ್’ ಚಿತ್ರದಿಂದಲೂ ಅವಕಾಶ ಸಿಕ್ಕಿದೆ.
ಹಾಗಂತ ನಾಯಕಿಯಾಗಿಯಲ್ಲ, ಪ್ರಮುಖ ಪಾತ್ರವೊಂದರದಲ್ಲಿ. ಈಗಾಗಲೇ ಸೋನಾಲ್ ನಟಿಸಿರುವ ದೃಶ್ಯಗಳನ್ನು ನಿರ್ದೇಶಕ ತರುಣ್ ಸುಧೀರ್ ಚಿತ್ರೀಕರಿಸಿಕೊಂಡಿದ್ದಾರೆ. ಸಿನಿಮಾ ಆರಂಭವಾದ ಕೆಲವೇ ದಿನಗಳಲ್ಲಿ ಸೋನಾಲ್ ಅವರ ದೃಶ್ಯ ಚಿತ್ರೀಕರಿಸಿಕೊಂಡಿರುವ ತರುಣ್, ಈ ವಿಷಯವನ್ನು ಈಗಲೇ ಎಲ್ಲೂ ಹಂಚಿಕೊಳ್ಳಬೇಡಿ ಎಂದಿದ್ದರಂತೆ. ಅದೇ ಕಾರಣದಿಂದ ಸೋನಾಲ್ ಆ ಬಗ್ಗೆ ಮಾತನಾಡಿರಲಿಲ್ಲ.
ಈಗ “ರಾಬರ್ಟ್’ ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದೆ. ಬೆಂಗಳೂರು, ವಾರಾಣಾಸಿ ಸೇರಿದಂತೆ ಹಲವು ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಚಿಕ್ಕದಲ್ಲಿ ಸೋನಾಲ್ ಅವರ ಪಾತ್ರಕ್ಕೆ ಪ್ರಾಮುಖ್ಯತೆ ಇದೆಯಂತೆ. ಮಂಗಳೂರು ಮೂಲದ ಸೋನಾಲ್ ತುಳು ಸೇರಿದಂತೆ ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. ಸದ್ಯ ಉಪೇಂದ್ರ ನಾಯಕರಾಗಿರುವ “ಬುದ್ಧಿವಂತ-2′ ಚಿತ್ರಕ್ಕೂ ಸೋನಾಲ್ ನಾಯಕಿ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.