![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 12, 2021, 12:56 PM IST
ಮುಂಗಾರುಮಳೆ ಸಿನೆಮಾ ಖ್ಯಾತಿಯ ನಿರ್ದೇಶಕ ಯೋಗರಾಜ್ ಭಟ್ ಮತ್ತು ರವಿ ಶಾಮನೂರ್ ಜೊತೆಗೂಡಿ ನಿರ್ಮಾಣ ಮಾಡುತ್ತಿರುವ ‘ಪದವಿ ಪೂರ್ವ’ ಚಿತ್ರದಲ್ಲಿ ‘ರಾಬರ್ಟ್’ಸಿನೆಮಾ ಖ್ಯಾತಿಯ ಸೋನಲ್ ಮೊಂಥೆರೋ ಗೆಸ್ಟ್ ಅಪಿಯರೆನ್ಸ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ವಿನೋದ್ ಪ್ರಭಾಕರ್ ಜೊತೆ ‘ರಾಬರ್ಟ್’ ಸಿನಿಮಾದಲ್ಲಿ ಸಖತ್ ಡಸ್ಟೆಪ್ ಹಾಕುವ ಮೂಲಕ ಚಂದನವನದ ಬ್ಯೂಟಿ ಸ್ಟಾರ್, ಹೊಸ ಕ್ರಶ್ ಮೊಂಥೆರೋ ಅವರಿಗೆ ‘ಪದವಿ ಪೂರ್ವ’ ಪಾಲಿಗೊದಗಿದೆ.
ನಿರ್ದೇಶಕ ಯೋಗರಾಜ್ ಭಟ್ ರೊಂದಿಗೆ ಅನೇಕ ಸಿನೆಮಾಗಳೊಂದಿಗೆ ಹಲವು ವರ್ಷಗಳಿಂದ ಕೆಲಸ ಮಾಡಿರುವ ಅನುಭವ ಹೊಂದಿರುವ ಹರಿಪ್ರಸಾದ್ ಜಯಣ್ಣ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು ಪೃಥ್ವಿ ಶಾಮನೂರ್ ಈ ಸಿನಿಮಾಗೆ ನಾಯಕರಾಗಿದ್ದು, ಅಂಜಲಿ ಅನೀಶ್ ಮತ್ತು ಯಶಾ ಶಿವಕುಮಾರ್ ಮುಖ್ಯ ಭೂಮಿಕೆಯಲ್ಲಿ ಮಿಂಚಲಿದ್ದಾರೆ.
ಈಗಾಗಲೇ ‘ಪದವಿ ಪೂರ್ವ’ ಚಿತ್ರತಂಡ 4ನೇ ಹಂತದ ಚಿತ್ರೀಕರಣ ಮುಗಿಸಿದ್ದು, ಬಾಕಿ ಉಳಿದಿರುವ ಶೂಟಿಂಗ್ ಹಾಗೂ ಇತರೆ ಕೆಲಸಗಳಲ್ಲಿ ಬ್ಯುಸಿಯಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಚಿತ್ರದ ನಿರ್ದೇಶಕ ಹರಿಪ್ರಸಾದ್ ಜಯಣ್ಣ, ಈ ಸಿನಿಮಾವು 90ರ ದಶಕದ ಕಥೆಯನ್ನು ಹೊಂದಿದೆ. ಇದೊಂದು ಚೆಂದದ ಪ್ರೇಮಕಥೆಯಾಗಿದ್ದು, ಪ್ರೇಕ್ಷಕರಿಗೆ ಇಷ್ಟವಾಗುವಂತೆ ನಿರ್ಮಾಣ ಮಾಡಲಾಗುತ್ತಿದೆ. ಸೋನಲ್ ಈ ಸಿನಿಮಾದಲ್ಲಿ ಗೆಸ್ಟ್ ಅಪಿಯರೆನ್ಸ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇಡೀ ಚಿತ್ರಕಥೆಯು ಅವರ ಪಾತ್ರದೊಂದಿಗೆ ಪ್ರಾರಂಭವಾಗಿ ಕೊನೆಯಾಗುತ್ತದೆ. ಅವರ ಪಾತ್ರವು ಪಸ್ತುತ ಸನ್ನಿವೇಶದಲ್ಲಿ ನಡೆಯುತ್ತದೆ. ಕಣ್ಣಿನ ತಜ್ಞ ವೈದ್ಯರಾಗಿ ಅವರು ಅಭಿನಯಿಸಲಿದ್ದಾರೆ ಎಂದಿದ್ದಾರೆ.
ಸೆಪ್ಟೆಂಬರ್ ನಲ್ಲಿ ನಾವು ಸೋನಲ್ ಪಾತ್ರದ ಚಿತ್ರೀಕರಣವನ್ನು ಪ್ರಾರಂಭಿಸುತ್ತೇವೆ. ಬೆಂಗಳೂರು ಮತ್ತು ಮಂಗಳೂರಿನಲ್ಲಿ ಶೂಟಿಂಗ್ ನಡೆಯಲಿದೆ. ಗೆಸ್ಟ್ ಅಪಿಯರೆನ್ಸ್ ನಲ್ಲಿ ಸೋನಲ್ ಕಾಣಿಸಿಕೊಂಡರೂ ಅವರು ನಮ್ಮ ಚಿತ್ರದ ಭಾಗವಾಗಿರುವುದಕ್ಕೆ ನಮಗೆ ಸಂತಸ ತಂದಿದೆ ಎಂದು ಹೇಳಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.