![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 24, 2019, 3:05 AM IST
ಪುನೀತ್ರಾಜಕುಮಾರ್ ಅಭಿನಯದ “ಯುವರತ್ನ’ ಚಿತ್ರತಂಡದ ಬಳಗ ದಿನ ಕಳೆದಂತೆ ದೊಡ್ಡದಾಗುತ್ತಿದೆ. ಹೌದು, ಇತ್ತೀಚೆಗಷ್ಟೇ ನಟ ದಿಗಂತ್ “ಯುವರತ್ನ’ ಚಿತ್ರತಂಡ ಸೇರಿಕೊಂಡಿದ್ದರು. ಆ ಚಿತ್ರದಲ್ಲಿ ಅವರು ಜಿಲ್ಲಾಧಿಕಾರಿ ಪಾತ್ರ ನಿರ್ವಹಿಸುತ್ತಿದ್ದಾರೆ ಅಂತ ಈ ಹಿಂದೆ ಇದೇ ಬಾಲ್ಕನಿಯಲ್ಲಿ ಹೇಳಲಾಗಿತ್ತು. ಈಗ ಹೊಸ ಸುದ್ದಿಯೆಂದರೆ, “ಯುವರತ್ನ’ ಚಿತ್ರಕ್ಕೆ ಮತ್ತೂಬ್ಬ ನಟಿಯ ಎಂಟ್ರಿಯಾಗಿದೆ.
ಹೌದು, ಆ ಚಿತ್ರತಂಡಕ್ಕೆ ನಟಿ ಸೋನುಗೌಡ ಅವರು ಸೇರ್ಪಡೆಯಾಗಿದ್ದಾರೆ. ಈ ಚಿತ್ರದಲ್ಲಿ ಸಯ್ಯೇಶಾ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಆದರೆ, ಸೋನುಗೌಡ ಅವರಿಲ್ಲಿ ಯಾವ ಪಾತ್ರ ಮಾಡುತ್ತಿದ್ದಾರೆ ಎಂಬ ಬಗ್ಗೆ ಗುಟ್ಟು ಬಿಟ್ಟುಕೊಟ್ಟಿಲ್ಲ. ಆ ಕುರಿತು, ಸೋನುಗೌಡ ಅವರು ತಮ ಟ್ವಿಟ್ಟರ್ ಖಾತೆಯಲ್ಲಿ “ಯುವರತ್ನ’ ಚಿತ್ರದಲ್ಲಿ ನಟಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ.
ಸೋನುಗೌಡ ಅವರು ಇತ್ತೀಚೆಗೆ ಉಪೇಂದ್ರ ಅಭಿನಯದ “ಐ ಲವ್ ಯು ‘ ನಟಿಸಿದ್ದರು. ಆ ಚಿತ್ರ ಈಗ 50 ನೇ ದಿನದತ್ತ ದಾಪುಗಾಲು ಇಡುತ್ತಿರುವ ಬೆನ್ನಲ್ಲೇ, ಸೋನುಗೌಡ ಅವರೀಗ “ಯುವರತ್ನ’ ಚಿತ್ರದಲ್ಲಿ ನಟಿಸುವ ಸುದ್ದಿಯನ್ನು ಹೊರಹಾಕಿದ್ದಾರೆ. ಸಹಜವಾಗಿಯೇ ಸೋನುಗೌಡ ಅವರು ಖುಷಿಯ ಮೂಡ್ನಲ್ಲಿದ್ದಾರೆ. ಅದಕ್ಕೆ ಕಾರಣ, ಇದೇ ಮೊದಲ ಸಲ ಅವರು ಪುನೀತ್ರಾಜ್ಕುಮಾರ್ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿರುವುದು.
ಸೋನುಗೌಡ ಅವರಿಲ್ಲಿ ಯಾವ ಪಾತ್ರ ನಿರ್ವಹಿಸುತ್ತಿದ್ದಾರೆ ಎಂಬುದಕ್ಕೆ ಉತ್ತರವಿಲ್ಲ. ಎಲ್ಲದ್ದಕ್ಕೂ ಸಿನಿಮಾ ಬಂದ ನಂತರವಷ್ಟೇ ಉತ್ತರ ಸಿಗಲಿದೆ. ಇನ್ನು, “ಯುವರತ್ನ’ ಚಿತ್ರತಂಡದ ಬಳಗ ದೊಡ್ಡದಾಗುತ್ತಲೇ ಇದೆ. ಚಿತ್ರದಲ್ಲಿ ಪ್ರಕಾಶ್ ರೈ, ಧನಂಜಯ್, ವಸಿಷ್ಠ, “ಟಗರು’ ಖ್ಯಾತಿಯ ತ್ರಿವೇಣಿ, ಅರುಗೌಡ, ರಾಧಿಕಾ ಶರತ್ಕುಮಾರ್ ಸೇರಿದಂತೆ ಹಲವು ಕಲಾವಿದರ ದಂಡೇ ಇಲ್ಲಿದೆ. ಇನ್ನು, ಈ ಚಿತ್ರಕ್ಕೂ ಹರಿಕೃಷ್ಣ ಅವರೇ ಸಂಗೀತ ನೀಡಲಿದ್ದಾರೆ ಎಂಬ ನಿರೀಕ್ಷೆ ಎಲ್ಲರಲ್ಲೂ ಇತ್ತು.
ಕಾರಣ, ಈ ಹಿಂದೆ ಸಂತೋಷ್ ಆನಂದ್ರಾಮ್ ನಿರ್ದೇಶಿಸಿದ್ದ “ರಾಜಕುಮಾರ’ ಚಿತ್ರಕ್ಕೂ ಹರಿಕೃಷ್ಣ ಸಂಗೀತ ನೀಡಿದ್ದು, ಆ ಚಿತ್ರದ ಹಾಡುಗಳು ಸೂಪರ್ ಹಿಟ್ ಆಗಿದ್ದವು. “ಯುವರತ್ನ’ ಚಿತ್ರಕ್ಕೂ ಆ ಕಾಂಬಿನೇಷನ್ ವರ್ಕೌಟ್ ಆಗುತ್ತೆ ಅಂದುಕೊಂಡಿದ್ದವರಿಗೆ, ತೆಲುಗು ಸಂಗೀತ ನಿರ್ದೇಶಕ ತಮನ್ ಸಂಗೀತ ನಿರ್ದೇಶಕರು ಅನ್ನೋದು ಗೊತ್ತಾಗಿದೆ. ಅದೇನೆ ಇರಲಿ, “ಯುವರತ್ನ’ ಸದ್ಯದ ಮಟ್ಟಿಗೆ ನಿರೀಕ್ಷೆ ಹೆಚ್ಚಿಸಿರುವುದಂತೂ ನಿಜ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.