“ಯುವರತ್ನ’ ಜೊತೆಯಾದ ಸೋನುಗೌಡ

ಅಪ್ಪು ಜೊತೆ ಮೊದಲ ಸಿನಿಮಾ

Team Udayavani, Jul 24, 2019, 3:05 AM IST

sonu-gowda

ಪುನೀತ್‌ರಾಜಕುಮಾರ್‌ ಅಭಿನಯದ “ಯುವರತ್ನ’ ಚಿತ್ರತಂಡದ ಬಳಗ ದಿನ ಕಳೆದಂತೆ ದೊಡ್ಡದಾಗುತ್ತಿದೆ. ಹೌದು, ಇತ್ತೀಚೆಗಷ್ಟೇ ನಟ ದಿಗಂತ್‌ “ಯುವರತ್ನ’ ಚಿತ್ರತಂಡ ಸೇರಿಕೊಂಡಿದ್ದರು. ಆ ಚಿತ್ರದಲ್ಲಿ ಅವರು ಜಿಲ್ಲಾಧಿಕಾರಿ ಪಾತ್ರ ನಿರ್ವಹಿಸುತ್ತಿದ್ದಾರೆ ಅಂತ ಈ ಹಿಂದೆ ಇದೇ ಬಾಲ್ಕನಿಯಲ್ಲಿ ಹೇಳಲಾಗಿತ್ತು. ಈಗ ಹೊಸ ಸುದ್ದಿಯೆಂದರೆ, “ಯುವರತ್ನ’ ಚಿತ್ರಕ್ಕೆ ಮತ್ತೂಬ್ಬ ನಟಿಯ ಎಂಟ್ರಿಯಾಗಿದೆ.

ಹೌದು, ಆ ಚಿತ್ರತಂಡಕ್ಕೆ ನಟಿ ಸೋನುಗೌಡ ಅವರು ಸೇರ್ಪಡೆಯಾಗಿದ್ದಾರೆ. ಈ ಚಿತ್ರದಲ್ಲಿ ಸಯ್ಯೇಶಾ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಆದರೆ, ಸೋನುಗೌಡ ಅವರಿಲ್ಲಿ ಯಾವ ಪಾತ್ರ ಮಾಡುತ್ತಿದ್ದಾರೆ ಎಂಬ ಬಗ್ಗೆ ಗುಟ್ಟು ಬಿಟ್ಟುಕೊಟ್ಟಿಲ್ಲ. ಆ ಕುರಿತು, ಸೋನುಗೌಡ ಅವರು ತಮ ಟ್ವಿಟ್ಟರ್‌ ಖಾತೆಯಲ್ಲಿ “ಯುವರತ್ನ’ ಚಿತ್ರದಲ್ಲಿ ನಟಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಸೋನುಗೌಡ ಅವರು ಇತ್ತೀಚೆಗೆ ಉಪೇಂದ್ರ ಅಭಿನಯದ “ಐ ಲವ್‌ ಯು ‘ ನಟಿಸಿದ್ದರು. ಆ ಚಿತ್ರ ಈಗ 50 ನೇ ದಿನದತ್ತ ದಾಪುಗಾಲು ಇಡುತ್ತಿರುವ ಬೆನ್ನಲ್ಲೇ, ಸೋನುಗೌಡ ಅವರೀಗ “ಯುವರತ್ನ’ ಚಿತ್ರದಲ್ಲಿ ನಟಿಸುವ ಸುದ್ದಿಯನ್ನು ಹೊರಹಾಕಿದ್ದಾರೆ. ಸಹಜವಾಗಿಯೇ ಸೋನುಗೌಡ ಅವರು ಖುಷಿಯ ಮೂಡ್‌ನ‌ಲ್ಲಿದ್ದಾರೆ. ಅದಕ್ಕೆ ಕಾರಣ, ಇದೇ ಮೊದಲ ಸಲ ಅವರು ಪುನೀತ್‌ರಾಜ್‌ಕುಮಾರ್‌ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿರುವುದು.

ಸೋನುಗೌಡ ಅವರಿಲ್ಲಿ ಯಾವ ಪಾತ್ರ ನಿರ್ವಹಿಸುತ್ತಿದ್ದಾರೆ ಎಂಬುದಕ್ಕೆ ಉತ್ತರವಿಲ್ಲ. ಎಲ್ಲದ್ದಕ್ಕೂ ಸಿನಿಮಾ ಬಂದ ನಂತರವಷ್ಟೇ ಉತ್ತರ ಸಿಗಲಿದೆ. ಇನ್ನು, “ಯುವರತ್ನ’ ಚಿತ್ರತಂಡದ ಬಳಗ ದೊಡ್ಡದಾಗುತ್ತಲೇ ಇದೆ. ಚಿತ್ರದಲ್ಲಿ ಪ್ರಕಾಶ್‌ ರೈ, ಧನಂಜಯ್‌, ವಸಿಷ್ಠ, “ಟಗರು’ ಖ್ಯಾತಿಯ ತ್ರಿವೇಣಿ, ಅರುಗೌಡ, ರಾಧಿಕಾ ಶರತ್‌ಕುಮಾರ್‌ ಸೇರಿದಂತೆ ಹಲವು ಕಲಾವಿದರ ದಂಡೇ ಇಲ್ಲಿದೆ. ಇನ್ನು, ಈ ಚಿತ್ರಕ್ಕೂ ಹರಿಕೃಷ್ಣ ಅವರೇ ಸಂಗೀತ ನೀಡಲಿದ್ದಾರೆ ಎಂಬ ನಿರೀಕ್ಷೆ ಎಲ್ಲರಲ್ಲೂ ಇತ್ತು.

ಕಾರಣ, ಈ ಹಿಂದೆ ಸಂತೋಷ್‌ ಆನಂದ್‌ರಾಮ್‌ ನಿರ್ದೇಶಿಸಿದ್ದ “ರಾಜಕುಮಾರ’ ಚಿತ್ರಕ್ಕೂ ಹರಿಕೃಷ್ಣ ಸಂಗೀತ ನೀಡಿದ್ದು, ಆ ಚಿತ್ರದ ಹಾಡುಗಳು ಸೂಪರ್‌ ಹಿಟ್‌ ಆಗಿದ್ದವು. “ಯುವರತ್ನ’ ಚಿತ್ರಕ್ಕೂ ಆ ಕಾಂಬಿನೇಷನ್‌ ವರ್ಕೌಟ್‌ ಆಗುತ್ತೆ ಅಂದುಕೊಂಡಿದ್ದವರಿಗೆ, ತೆಲುಗು ಸಂಗೀತ ನಿರ್ದೇಶಕ ತಮನ್‌ ಸಂಗೀತ ನಿರ್ದೇಶಕರು ಅನ್ನೋದು ಗೊತ್ತಾಗಿದೆ. ಅದೇನೆ ಇರಲಿ, “ಯುವರತ್ನ’ ಸದ್ಯದ ಮಟ್ಟಿಗೆ ನಿರೀಕ್ಷೆ ಹೆಚ್ಚಿಸಿರುವುದಂತೂ ನಿಜ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.