![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 22, 2023, 12:18 PM IST
ಕಿರುತೆರೆಯ ಹಲವು ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಯಶಸ್ವಿಯಾಗಿರುವ ನಟ ಕಂ ನಿರೂಪಕ ಸೃಜನ್ ಲೋಕೇಶ್ ಈಗ ಡೈರೆಕ್ಟರ್ ಕ್ಯಾಪ್ ಧರಿಸುತ್ತಿದ್ದಾರೆ. ಹೌದು, ಆಗಾಗ್ಗೆ ಕಿರುತೆರೆಯ ಜೊತೆ ಹಿರಿತೆರೆಯಲ್ಲೂ ಕಾಣಿಸಿಕೊಳ್ಳುತ್ತಿದ್ದ ಸೃಜನ್ ಲೋಕೇಶ್, ಈಗ ಪೂರ್ಣ ಪ್ರಮಾಣದಲ್ಲಿ ನಿರ್ದೇಶನದತ್ತ ಮುಖ ಮಾಡಿದ್ದಾರೆ.
ಸೃಜನ್ ಲೋಕೇಶ್ ನಿರ್ದೇಶನ ಮಾಡುತ್ತಿರುವ ಚೊಚ್ಚಲ ಸಿನಿಮಾಕ್ಕೆ “ಜಿಎಸ್ಟಿ’ ಎಂದು ಹೆಸರಿಡಲಾಗಿದ್ದು, ಇದೀಗ ಸಿನಿಮಾದ ಮುಹೂರ್ತ ಕೂಡ ಅದ್ಧೂರಿಯಾಗಿ ನೆರವೇರಿದೆ.
“ಸಂದೇಶ್ ಪ್ರೊಡಕ್ಷನ್ಸ್’ ಬ್ಯಾನರಿನಲ್ಲಿ ಸಂದೇಶ್ ಎನ್. ನಿರ್ಮಿಸುತ್ತಿರುವ “ಜಿಎಸ್ಟಿ’ ಸಿನಿಮಾದಲ್ಲಿ ಸೃಜನ್ ಲೋಕೇಶ್ ನಿರ್ದೇಶನದ ಜೊತೆಗೆ ತೆರೆಮೇಲೆ ನಾಯಕ ನಟನಾಗಿಯೂ ಕಾಣಿಸಿಕೊಳ್ಳುತ್ತಿದ್ದಾರೆ. ರಜಿನಿ ಭಾರಧ್ವಾಜ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಾರೆ.
ಉಳಿದಂತೆ ರವಿಶಂಕರ ಗೌಡ, ಪ್ರಮೋದ್ ಶೆಟ್ಟಿ, ಗಿರಿಜಾ ಲೋಕೇಶ್, ನಿವೇದಿತ ಗೌಡ, ತಬಲ ನಾಣಿ, ಮಾ. ಸುಕೃತ್ ಸೃಜನ್ ಲೋಕೇಶ್, ಶೋಭರಾಜ್, ಅಶೋಕ್, ಅರವಿಂದ ರಾವ್, ವಿನೋದ್, ರಮ್ಯಾ ಮೊದಲಾದವರು “ಜಿಎಸ್ಟಿ’ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಮುಹೂರ್ತದ ಬಳಿಕ “ಜಿಎಸ್ಟಿ’ ಸಿನಿಮಾದ ಬಗ್ಗೆ ಮಾತನಾಡಿದ ನಾಯಕ ನಟ ಕಂ ನಿರ್ದೇಶಕ, “ಇದೊಂದು ಹ್ಯೂಮರಸ್ ಹಾರರ್ ಕಥಾಹಂದರ ಹೊಂದಿರುವ ಸಿನಿಮಾ. “ಜಿಎಸ್ಟಿ’ ಅಂದ್ರೆ “ಘೋಸ್ಟ್ಸ್ ಇನ್ ಟ್ರಬಲ್’ ಎಂದರ್ಥ. ದೆವ್ವಗಳು ಸಂಕಷ್ಟದಲ್ಲಿ ಸಿಲುಕಿಕೊಂಡರೆ, ಹೇಗಿರುತ್ತದೆ ಎಂಬುದು ಸಿನಿಮಾದ ಕಥೆಯ ಒಂದು ಎಳೆ. ಇದರಲ್ಲಿ ಹಾರರ್, ಹಾಮಿಡಿ, ಎಮೊಶನ್ಸ್ ಎಲ್ಲವೂ ಇರಲಿದೆ. ನಮ್ಮ “ಜಿಎಸ್ಟಿ’ ಟ್ಯಾಕ್ಸ್ ಫ್ರೀ ಎಂಟರ್ಟೈನ್ಮೆಂಟ್ ಸಿನಿಮಾ. ಸುಮಾರು ಒಂದು ಗಂಟೆಗೂ ಹೆಚ್ಚು ಗ್ರಾಫಿಕ್ಸ್ ಸಿನಿಮಾದಲ್ಲಿದೆ. ಸುಮಾರು ಐವತ್ತು ದಿನ ಶೂಟಿಂಗ್ಗೆ ಪ್ಲಾನ್ ಹಾಕಿಕೊಂಡಿದ್ದೇವೆ’ ಎಂದು ಸಿನಿಮಾದ ಬಗ್ಗೆ ವಿವರಣೆ ನೀಡಿದರು.
“ಜಿಎಸ್ಟಿ’ ಸಿನಿಮಾಕ್ಕೆ ಗುಂಡ್ಲುಪೇಟೆ ಸುರೇಶ್ ಛಾಯಾಗ್ರಹಣವಿದ್ದು, ಸಿನಿಮಾದ ಹಾಡುಗಳಿಗೆ ಚಂದನ್ ಶೆಟ್ಟಿ ಸಂಗೀತ ಸಂಯೋಜಿಸುತ್ತಿದ್ದಾರೆ. ಹಾಡುಗಳಿಗೆ ಕವಿರಾಜ್ ಸಾಹಿತ್ಯ ಮತ್ತು ರಾಜಶೇಖರ್ ಸಂಭಾಷಣೆ ಬರೆಯುತ್ತಿದ್ದಾರೆ. ಮುಹೂರ್ತ ಸಮಾರಂಭದಲ್ಲಿ ಹಿರಿಯ ನಿರ್ದೇಶಕ ಟಿ. ಎಸ್ ನಾಗಾಭರಣ, ಪಿ.ಶೇಷಾದ್ರಿ, ನಟ ನಿರೂಪ್ ಭಂಡಾರಿ, ಹಿರಿಯ ನಟ ಸುಂದರರಾಜ್, ನಟಿಯರಾದ ಶ್ರುತಿ, ತಾರಾ ಅನುರಾಧಾ ಮೊದಲಾದವರು ಹಾಜರಿದ್ದು ಚಿತ್ರತಂಡಕ್ಕೆ ಶುಭ ಕೋರಿದರು.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.