ಕ್ರೇಜಿಸ್ಟಾರ್‌ ರವಿ ಬೋಪಣ್ಣದಲ್ಲಿ ಸುದೀಪ್‌ ಗೆಸ್ಟ್‌

ಹೊಸ ಚಿತ್ರದಲ್ಲಿ ರವಿಚಂದ್ರನ್‌ ಬಿಝಿ

Team Udayavani, Aug 11, 2019, 3:00 AM IST

sudeep-ravi

ಸುದೀಪ್‌ ನಿರ್ದೇಶನದ “ಮಾಣಿಕ್ಯ’ ಚಿತ್ರದಲ್ಲಿ ರವಿಚಂದ್ರನ್‌ ಪ್ರಮುಖ ಪಾತ್ರ ಮಾಡಿದ್ದರು. ಆ ನಂತರ “ಹೆಬ್ಬುಲಿ’ಯಲ್ಲೂ ರವಿಚಂದ್ರನ್‌ ನಟಿಸಿದ್ದರು. ಇನ್ನು, ರವಿಚಂದ್ರನ್‌ ನಿರ್ದೇಶನದ “ಅಪೂರ್ವ’ ಚಿತ್ರದಲ್ಲಿ ಸುದೀಪ್‌ ಗೆಸ್ಟ್‌ ಅಪಿಯರೆನ್ಸ್‌ ಮಾಡಿರೋದು ನಿಮಗೆ ಗೊತ್ತೇ ಇದೆ. ಈಗ ಮತ್ತೂಮ್ಮೆ ರವಿಚಂದ್ರನ್‌ ನಿರ್ದೇಶನದ ಸಿನಿಮಾದಲ್ಲಿ ಸುದೀಪ್‌ ಗೆಸ್ಟ್‌ ಅಪಿಯರೆನ್ಸ್‌ ಮಾಡುತ್ತಿದ್ದಾರೆ. ಅದು “ರವಿ ಬೋಪಣ್ಣ’. ಇದು ರವಿಚಂದ್ರನ್‌ ಅವರ ಹೊಸ ಸಿನಿಮಾ.

ಸ್ವತಃ ರವಿಚಂದ್ರನ್‌ ಅವರೇ ನಿರ್ದೇಶಿಸಿ, ನಟಿಸುತ್ತಿರುವ ಚಿತ್ರವಿದು. ಚಿತ್ರಕ್ಕೆ ಸಂಗೀತ ಕೂಡಾ ರವಿಚಂದ್ರನ್‌ ಅವರದೇ. ಈ ಸಿನಿಮಾದಲ್ಲಿ ಸುದೀಪ್‌ ಅವರು ಗೆಸ್ಟ್‌ ಅಪಿಯರೆನ್ಸ್‌ ಮಾಡಲಿದ್ದಾರೆ. ಈಗಾಗಲೇ ಈ ಬಗ್ಗೆ ಸುದೀಪ್‌ ಜೊತೆ ರವಿಚಂದ್ರನ್‌ ಮಾತನಾಡಿದ್ದು, ಸುದೀಪ್‌ ಕೂಡಾ ಓಕೆ ಅಂದಿದ್ದಾರೆ. ಹಾಗಂತ ಯಾವ ಪಾತ್ರ ಎಂಬುದು ಸದ್ಯಕ್ಕೆ ಸಸ್ಪೆನ್ಸ್‌. ಎಲ್ಲಾ ಓಕೆ, ರವಿಚಂದ್ರನ್‌ ಅವರು “ರವಿ ಬೋಪಣ್ಣ’ ಚಿತ್ರವನ್ನು ಯಾವಾಗ ಶುರು ಮಾಡಿದರು ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ.

ಈ ಚಿತ್ರವನ್ನು ರವಿಚಂದ್ರನ್‌ ಸದ್ದಿಲ್ಲದೇ “ರವಿ’ ಎಂಬ ಹೆಸರಿನಲ್ಲಿ ಶುರುಮಾಡಿ, ಏಳು ದಿನಗಳ ಕಾಲ ಚಿತ್ರೀಕರಣ ಕೂಡಾ ಮಾಡಿದ್ದರು. ಆದರೆ, ಅದು ರವಿಚಂದ್ರನ್‌ ಅವರಿಗೆ ತೃಪ್ತಿಯಾಗಲಿಲ್ಲ. ಜೊತೆಗೆ ರವಿಚಂದ್ರನ್‌ ಅವರ ಗಡ್ಡದ ಗೆಟಪ್‌ ನೋಡಿದ ನಿರ್ಮಾಪಕರು, “ಈ ಗೆಟಪ್‌ ತುಂಬಾ ಚೆನ್ನಾಗಿದೆ. ಇದರಲ್ಲೇ ಮುಂದುವರೆಯುವ’ ಎಂಬ ಸಲಹೆ ಕೂಡಾ ಕೊಟ್ಟರಂತೆ. ಹಾಗಾಗಿ, ಈಗ “ರವಿ ಬೋಪಣ್ಣ’ ಎಂಬ ಹೆಸರಿನೊಂದಿಗೆ ಹೊಸದಾಗಿ ಚಿತ್ರೀಕರಣ ಮಾಡಲು ಮುಂದಾಗಿದ್ದಾರೆ ರವಿಚಂದ್ರನ್‌.

ಅಂದಹಾಗೆ, ಇದು ಸೈಬರ್‌ ಕ್ರೈಮ್‌ ಸುತ್ತ ನಡೆಯುವ ಕಥೆಯಾಗಿದ್ದು, ರವಿಚಂದ್ರನ್‌ ಇಲ್ಲಿ ಸೈಬರ್‌ ಸೆಲ್‌ನ ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರಂತೆ. ಚಿತ್ರದಲ್ಲಿ ಸ್ನೇಹಕ್ಕೂ ಹೆಚ್ಚಿನ ಮಹತ್ವವಿದೆಯಂತೆ. ಕಾವ್ಯಾ ಶೆಟ್ಟಿ “ರವಿ ಬೋಪಣ್ಣ’ದ ನಾಯಕಿ. ಜೊತೆಗೆ ಇನ್ನೊಬ್ಬ ನಾಯಕಿ ಕೂಡಾ ಇದ್ದು, ಆಯ್ಕೆ ಇನ್ನಷ್ಟೇ ನಡೆಯಬೇಕಿದೆ. ಸುಮಾರು 12 ವರ್ಷಗಳ ಬಳಿಕ ಮೋಹನ್‌, ರವಿಚಂದ್ರನ್‌ ನಿರ್ದೇಶನದ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿದ್ದಾರೆ. ಚಿತ್ರಕ್ಕೆ ಸೀತಾರಾಮ್‌ ಛಾಯಾಗ್ರಹಣವಿದೆ.

ಚಿತ್ರದ ಬಗ್ಗೆ ಮಾತನಾಡುವ ರವಿಚಂದ್ರನ್‌, “ಇದು ಸ್ಕ್ರೀನ್‌ಪ್ಲೇ ಮೇಲೆ ನಿಂತಿರುವ ಸಿನಿಮಾ. “ದೃಶ್ಯ-2′ ತರಹದ ಫೀಲ್‌ ಕೊಡಲಿದೆ’ ಎನ್ನುತ್ತಾರೆ. ಚಿತ್ರದಲ್ಲಿ ರವಿಚಂದ್ರನ್‌ ಎರಡು ಗೆಟಪ್‌ನಲ್ಲಿ ಕಾಣಿಸಿಕೊಳ್ಳಲಿದ್ದು, ಒಂದಷ್ಟು ಭಾಗದ ಚಿತ್ರೀಕರಣ ಮಳೆಯಲ್ಲಿ ನಡೆಯಲಿದೆಯಂತೆ. ಅಂದಹಾಗೆ, ರವಿಚಂದ್ರನ್‌ ಅವರ ಮತ್ತೂಂದು ಚಿತ್ರ “ರಾಜೇಂದ್ರ ಪೊನ್ನಪ್ಪ’ ಕೂಡಾ ನಡೆಯುತ್ತಿದೆ. ಪ್ರವಾಹ ಸಂತ್ರಸ್ತರಿಗೂ “ರವಿ ಬೋಪಣ್ಣ’ ತಂಡ ಸಹಾಯಕ್ಕೆ ಮುಂದಾಗಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.