‘ಗತವೈಭವ’ ತೋರಿಸಲು ಸುನಿ ರೆಡಿ: ದುಷ್ಯಂತ್‌ ಗೆ ಹೀರೋ ಪಟ್ಟ


Team Udayavani, Mar 3, 2022, 9:18 AM IST

ಗತವೈಭವ ತೋರಿಸಲು ಸುನಿ ರೆಡಿ: ದುಷ್ಯಂತ್‌ ಗೆ ಹೀರೋ ಪಟ್ಟ

ಸುನಿ ನಿರ್ದೇಶನದಲ್ಲಿ ಮೂಡಿಬಂದ “ಸಖತ್‌’ ಚಿತ್ರ ಹಿಟ್‌ ಆಗಿದ್ದು, ಗೊತ್ತೇ ಇದೆ. ಈಗ ಸುನಿ ಮತ್ತೂಂದು ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಅದು “ಗತವೈಭವ’.

ಹೀಗೊಂದು ವಿಭಿನ್ನ ಶೀರ್ಷಿಕೆಯ ಚಿತ್ರ ಇತ್ತೀಚೆಗೆ ಆರಂಭವಾಗಿದ್ದು, ಮೊದಲ ಹಂತವಾಗಿ ಚಿತ್ರದ ಟೈಟಲ್‌ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಚಿತ್ರದ ಮೂಲಕ ನವನಟ ದುಷ್ಯಂತ್‌ ನಾಯಕರಾಗುತ್ತಿದ್ದಾರೆ.

ಹೀರೋ ಆಗುತ್ತಿರುವ ಬಗ್ಗೆ ಕಾರ್ಯಕ್ರಮದಲ್ಲಿ ಮಾತನಾಡಿದ ದುಷ್ಯಂತ್‌, “ನಾನು ಮೂಲತಃ ತುಮಕೂರಿನವನು. ವಿದೇಶದಲ್ಲಿ ಎಲ್‌ಎಲ್‌ಬಿ ಓದಿದ್ದೇನೆ. ಆದರೆ ಅಭಿನಯದಲ್ಲಿ ಆಸಕ್ತಿ ಹೆಚ್ಚು . ಮೊದಲು ನಾನು ಅಪ್ಪು ಅವರನ್ನು ನೆನೆಯುತ್ತೇನೆ. ಈ ಚಿತ್ರದ ಟೀಸರ್‌ ಕಳೆದ ವರ್ಷ ಸಿದ್ಧವಾಗಿತ್ತು. ಮೊದಲು ನಾವು ತೋರಿಸಿದ್ದೆ ಅಪ್ಪು ಅವರಿಗೆ. ಚಿತ್ರರಂಗಕ್ಕೆ ಬರುವವರಿಗೆ ಕಾಲೆಳೆಯುವವರೆ ಹೆಚ್ಚು. ಆದರೆ ನಿನಗೆ ಒಳ್ಳೆಯ ಭವಿಷ್ಯವಿದೆ. ಚಿತ್ರದಲ್ಲಿ ನಟಿಸು ಎಂದಿದ್ದರು ಅಪ್ಪು. ಅವರ ಮಾತುಗಳು ನನಗೆ ಸ್ಪೂರ್ತಿ. ನಮ್ಮದು ಸಂಪ್ರದಾಯಸ್ಥರ ಕುಟುಂಬ. ಸಿನಿಮಾದಲ್ಲಿ ನಟಿಸುವುದು ನನ್ನ ತಂದೆ, ತಾಯಿಗೆ ಇಷ್ಟವಿರಲಿಲ್ಲ. ಕೊನೆಗೆ ತಾಯಿಯನ್ನು ಒಪ್ಪಿಸಿದೆ. ತಂದೆ ಈಗಲೂ ಪೂರ್ಣ ಒಪ್ಪಿಗೆ ನೀಡಿಲ್ಲ. ನಾನು ವಿದೇಶದಲ್ಲಿ ಓದುತ್ತಿದ್ದಾಗ ದಿನ ಕನ್ನಡಿ ಮುಂದೆ ನಿಂತು ನಟನಂತೆ ಅಭಿನಯಿಸುತ್ತಿದ್ದೆ. ನಂತರ ಅಭಿನಯಕ್ಕೆ ಬೇಕಾದ ತರಬೇತಿ ಪಡೆದೆ. ನನ್ನ ಸ್ನೇಹಿತರೊಬ್ಬರ ಮೂಲಕ ಸುನಿ ಅವರ ಪರಿಚಯವಾಯಿತು. ಕಥೆ ಸಿದ್ದವಾಯಿತು. ನಿರ್ಮಾಪಕರ ಹುಡುಕಾಟ ಆರಂಭವಾಯಿತು’ ಎಂದರು ದುಶ್ಯಂತ್‌.

ಇದನ್ನೂ ಓದಿ:ದಾಳಿಗೆ “ಸರ್ವಾಧಿಕಾರಿ’ ಬೆಲೆ ತೆರಲೇಬೇಕು! ಅಮೆರಿಕ ಸಂಸತ್‌ನಲ್ಲಿ ಬೈಡೆನ್‌ ಭಾಷಣ

ತಮ್ಮ ಮಗ ಹೀರೋ ಆಗುತ್ತಿರುವ ಬಗ್ಗೆ ಮಾತನಾಡಿದ ಗುಬ್ಬಿ ಶಾಸಕ ಶ್ರೀನಿವಾಸ್‌, “ನಾವು ರಾಜಕೀಯ ವ್ಯಕ್ತಿಗಳು ನಿಮಗಿಂತ ಚೆನ್ನಾಗಿ ನಟನೆ ಮಾಡುತ್ತೇವೆ. ಆದರೆ ನಾನು ನನ್ನ ಮಗನನ್ನು ಬೆಳೆಸಿದ ರೀತಿಯ ಬೇರೆ. ಅವನ ಆಯ್ಕೆಯೇ ಬೇರೆ. ಚುನಾವಣೆಗೆ ಕೋಟ್ಯಾಂತರ ರೂಪಾಯಿ ಖರ್ಚು ಮಾಡುವ ನನಗೆ ಸಿನಿಮಾ ನಿರ್ಮಾಣ ದೊಡ್ಡ ವಿಷಯವಲ್ಲ. ಆದರೆ ನನಗಿಷ್ಟವಿಲ್ಲದ ಕೆಲಸಕ್ಕೆ ನಾನು ಕೊಡಲ್ಲ. ಈ ಚಿತ್ರತಂಡ ನೋಡಿದರೆ ಸಂತೋಷವಾಗುತ್ತಿದೆ. ನನ್ನ ಮಗನಿಂದ ಒಳ್ಳೆಯದು ಆಗದಿದ್ದರೂ ಪರವಾಗಿಲ್ಲ, ಯಾರಿಗೂ ಕೆಟ್ಟದಾಗುವುದು ಬೇಡ’ ಎಂದರು ಶ್ರೀನಿವಾಸ್‌.

ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಸುನಿ, “ಗತವೈಭವ ಎಂದರೆ ಗತಿಸಿ ಹೋದ ವೈಭವ ಎಂದು. ಈ ನಮ್ಮ ಚಿತ್ರದಲ್ಲಿ ವಾಸ್ಕೋಡಿಗಾಮನ ಕಥೆ ಸೇರಿದಂತೆ ಕೆಲವು ಐತಿಹಾಸಿಕ ಸನ್ನಿವೇಶಗಳಿರುತ್ತದೆ. ಫ‌ನ್‌, ಸೆಂಟಿಮೆಂಟ್‌ ಹಾಗೂ ಮೈಂಡ್‌ ಗೇಮ್‌ನ ಮಿಶ್ರಣ ಅನ್ನಬಹುದು. ದುಶ್ಯಂತ್‌ ಗೆ ಸ್ಟೇಜ್‌ ಫಿಯರ್‌ ಇಲ್ಲ. ಟೀಸರ್‌ ನಲ್ಲಿ ಆತನ ಅಭಿನಯಕ್ಕೆ ಹಾಗೂ ಧ್ವನಿಗೆ ಹೆಚ್ಚಿನ ಪ್ರಶಂಸೆ ವ್ಯಕ್ತವಾಗಿದೆ. ಏಪ್ರಿಲ್‌ ಕೊನೆಯಲ್ಲಿ ಚಿತ್ರೀಕರಣ ಆರಂಭವಾಗಲಿದೆ ಎಂದರು ಸುನಿ.

ಈ ಚಿತ್ರವನ್ನು ದೀಪಕ್‌ ತಿಮ್ಮಪ್ಪ ನಿರ್ಮಿಸುತ್ತಿದ್ದು, ಇವರಿಗೆ ಸುನಿ ಕೈ ಜೋಡಿಸಿದ್ದಾರೆ. ಚಿತ್ರಕ್ಕೆ ವಿಲಿಯಂ ಡೇವಿಡ್‌ ಛಾಯಾಗ್ರಹಣ, ಭರತ್‌ ಬಿ.ಜೆ ಸಂಗೀತವಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.