ಕನ್ನಡಕ್ಕೆ ಬಂದ ತಮಿಳು ಗಾಯಕ ಗಾನಬಾಲ


Team Udayavani, Jun 4, 2018, 11:03 AM IST

ganabala.jpg

ಕನ್ನಡದ ಬಹುತೇಕ ನಿರ್ದೇಶಕರು ಹಾಗೂ ಸಂಗೀತ ನಿರ್ದೇಶಕರು ಬಾಲಿವುಡ್‌ ಗಾಯಕರತ್ತ ಮುಖ ಮಾಡುತ್ತಿದ್ದರು. ಈಗೀಗ ಆ ಟ್ರೆಂಡ್‌ ಕೊಂಚ ಕಡಿಮೆಯಾಗುವ ಲಕ್ಷಣ ಕಾಣುತ್ತಿದೆ. “ಟಗರು’ ಮೂಲಕ ಆ್ಯಂಟೋನಿ ದಾಸನ್‌ ಸುದ್ದಿಯಾಗಿದ್ದೇ ತಡ, ಒಬ್ಬೊಬ್ಬರೇ ತಮಿಳು ಗಾಯಕರತ್ತ ಮುಖ ಮಾಡುತ್ತಿದ್ದಾರೆ. ಆ ಸಾಲಿಗೆ ಈಗ ಮೋಹನ್‌ ಕಾಮಾಕ್ಷಿ ನಿರ್ದೇಶನದ “ಆದಿ ಪುರಾಣ’ ಚಿತ್ರವೂ ಸೇರಿದೆ.

ಹೌದು, ಈ ಚಿತ್ರದ ಹಾಡಿಗೆ ತಮಿಳು ಗಾಯಕ ಗಾನಬಾಲ ಧ್ವನಿಯಾಗಿದ್ದಾರೆ. ಗಾನಬಾಲ ತಮಿಳು ಚಿತ್ರರಂಗ ಅತ್ಯುತ್ತಮ ಗಾಯಕರಲ್ಲೊಬ್ಬರು. ತಮಿಳು ಚಿತ್ರರಂಗದಲ್ಲಿ ಇನ್ನು ಮುಂದೆ ನಾನು ಹಾಡುವುದೇ ಇಲ್ಲ ಎಂದು ಘೋಷಣೆ ಮಾಡಿದ್ದರು ಗಾನಬಾಲ. ಕಳೆದ ಒಂದೂವರೆ ವರ್ಷದಿಂದ ಹಾಡುವುದನ್ನೇ ನಿಲ್ಲಿಸಿದ್ದ ಗಾನಬಾಲ, ಕನ್ನಡದ “ಆದಿ ಪುರಾಣ’ ಚಿತ್ರದ ಹಾಡಿಗೆ ಧ್ವನಿಯಾಗುವ ಮೂಲಕ ಮತ್ತೆ ಹಾಡಿದ್ದಾರೆ.

ಸಂಗೀತ ನಿರ್ದೇಶಕ ವಿಕ್ರಮ್‌ ವಸಿಷ್ಠ ಬರೆದ “ಕುದುರೆ ಕುದುರೆ ರೇಸ್‌ ಕೋರ್ಸ್‌ ಕುದುರೆ ಹೆಂಗೆಂಗೋ ಆಡುತ್ತಿದೆ…’ ಎಂಬ ಗೀತೆಗೆ ಗಾನಬಾಲ ಹಾಡಿದ್ದಾರೆ. ಅಂದಹಾಗೆ, ಜನಪದ ಶೈಲಿಯ ಹಾಡಾಗಿರುವುದರಿಂದ ನಿರ್ದೇಶಕ ಮೋಹನ್‌ ಕಾಮಾಕ್ಷಿ ಮತ್ತು ನಿರ್ಮಾಪಕ ಶಮಂತ್‌ ಅವರು ಸಂಗೀತ ನಿರ್ದೇಶಕ ವಿಕ್ರಮ್‌ ವಸಿಷ್ಠ ಅವರೊಂದಿಗೆ ಚೆನ್ನೈಗೆ ತೆರಳಿ, ಗಾನಬಾಲ ಅವರಿಗೆ ಹಾಡುವಂತೆ ಮನವಿ ಮಾಡಿದ್ದಾರೆ.

ಕೊನೆಗೆ ಹಾಡಿನ ಸಾಹಿತ್ಯ ಕೇಳಿದ ಗಾನಬಾಲ, ನಾಯಕ ಶಶಾಂಕ್‌ ಪರಿಚಯಿಸುವ ಹಾಡನ್ನು ಹಾಡುವ ಮೂಲಕ ಮತ್ತೆ ತಮ್ಮ ಗಾಯನವನ್ನು ಮುಂದುವರೆಸುವುದಾಗಿ ಹೇಳಿದ್ದಾರೆ. ಈಗಾಗಲೇ ತಮಿಳು ಚಿತ್ರರಂಗದಲ್ಲಿ ಗಾನಬಾಲ ಬಹುತೇಕ ಸ್ಟಾರ್‌ ನಟರ ಚಿತ್ರಗಳಿಗೆ ಹಾಡಿದ್ದಾರೆ. ಆ್ಯಂಟೋನಿ ದಾಸನ್‌ ಮತ್ತು ಗಾನಬಾಲ ಇಬ್ಬರೂ ಸಹ ಚಿತ್ರವೊಂದರಲ್ಲಿ ಹಾಡಿದ ಹಾಡು ಸೂಪರ್‌ ಹಿಟ್‌ ಕೂಡ ಆಗಿದೆ.

ಸದ್ಯಕ್ಕೆ, “ಆದಿಪುರಾಣ’ಕ್ಕೆ ಹಾಡಿರುವ ಗಾನಬಾಲ ಹಾಡು, ಕನ್ನಡದಲ್ಲಿ ಹೊಸಬಗೆಯ ಹಾಡಾಗಲಿದೆ ಎಂಬುದು ಚಿತ್ರತಂಡದ ಮಾತು. “ಇದೊಂದು ಯೂತ್ಸ್ಗೆ ಸಂಬಂಧಿಸಿದ ಚಿತ್ರ. ರೊಮ್ಯಾಂಟಿಕ್‌ ಕಾಮಿಡಿ ಚಿತ್ರದ ಹೈಲೈಟ್‌. ಕನ್ನಡಕ್ಕೆ ಹೊಸತನ ಬೇಕೆಂಬ ಕಾರಣಕ್ಕೆ ಫ್ರೆಶ್‌ ಎನಿಸುವ ಕಥೆಯೊಂದಿಗೆ ಬರುತ್ತಿರುವುದಾಗಿ ಹೇಳುವ ಶಮಂತ್‌, ಇಷ್ಟರಲ್ಲೇ ಚಿತ್ರ ಬಿಡುಗಡೆ ಮಾಡಲು ತಯಾರಿ ನಡೆಸುತ್ತಿರುವುದಾಗಿ ಹೇಳುತ್ತಾರೆ. ಚಿತ್ರದಲ್ಲಿ ಮೋಕ್ಷ, ಅಹಲ್ಯ ನಾಯಕಿಯರು. ಗುರು ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.