Kannada cinema: ‘ತಾರಿಣಿ’ ಎಂಬ ತುಂಬು ಗರ್ಭಿಣಿ ಕಥೆ
Team Udayavani, Oct 8, 2023, 5:04 PM IST
ಸಾಮಾನ್ಯವಾಗಿ ಸಿನಿಮಾದಲ್ಲಿ ಹೀರೋಯಿನ್ಸ್ ಸ್ಲಿಮ್ ಆಗಿಯೂ, ಗ್ಲಾಮರಸ್ ಆಗಿಯೂ ಇರುವಂಥ ಪಾತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳಲು ಬಯಸುತ್ತಾರೆ. ಹೀಗಾಗಿಯೇ ಅನೇಕ ನಾಯಕಿಯರು ಮದುವೆಯಾದ ನಂತರ ಅಥವಾ ಮಕ್ಕಳಾದ ನಂತರ ತೆರೆಮರೆಗೆ ಸರಿಯುತ್ತಾರೆ. ಆದರೆ ನಟಿ ಮಮತಾ ರಾಹುತ್ ಮಾತ್ರ ಈ ವಿಷಯದಲ್ಲಿ ವಿಭಿನ್ನ. ನಿಜ ಜೀವನದಲ್ಲಿ ತಾನು ಗರ್ಭಿಣಿಯಾಗಿದ್ದಾಗಲೇ ನಟಿ ಮಮತಾ ರಾಹುತ್, ತೆರೆಮೇಲೆ ಕೂಡ ಗರ್ಭಿಣಿ ಪಾತ್ರದಲ್ಲೇ ಕಾಣಿಸಿಕೊಂಡಿದ್ದಾರೆ.
ಹೌದು, ಸಿದ್ದು ಪೂರ್ಣಚಂದ್ರ ನಿರ್ದೇಶನದ “ತಾರಿಣಿ’ ಗರ್ಭಿಣಿಯ ಕುರಿತಾದ ಕಥಾಹಂದರ ಹೊಂದಿದ ಸಿನಿಮಾ. ಈ ಸಿನಿಮಾದಲ್ಲಿ ಗರ್ಭಿಣಿಯಾಗಿದ್ದ ನಟಿ ಮಮತಾ ರಾಹುತ್, ತೆರೆಮೇಲೆ ಕೂಡ ಗರ್ಭಿಣಿ ಪಾತ್ರವನ್ನು ನಿಭಾಯಿಸಿದ್ದಾರೆ. ಈಗಾಗಲೇ “ತಾರಿಣಿ’ ಸಿನಿಮಾದ ಬಹುತೇಕ ಕೆಲಸಗಳು ಪೂರ್ಣ ಗೊಂಡಿದ್ದು, ಇತ್ತೀಚೆಗೆ ಈ ಸಿನಿಮಾದ ಫಸ್ಟ್ಲುಕ್ ಬಿಡುಗಡೆಯಾಯಿತು. ಹಿರಿಯ ಸಾಹಿತಿ, ಹೋರಾಟಗಾರ್ತಿ ಮತ್ತು ಮಾಜಿ ಸಚಿವೆ ಬಿ. ಟಿ. ಲಲಿತಾ ನಾಯಕ್ ಸೇರಿದಂತೆ ಹಲವು ಗಣ್ಯರು “ತಾರಿಣಿ’ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದರು.
ಇದೇ ವೇಳೆ ಮಾತನಾಡಿದ “ತಾರಿಣಿ’ ಸಿನಿಮಾದ ನಿರ್ದೇಶಕ ಸಿದ್ದು ಪೂರ್ಣಚಂದ್ರ, “ಇದೊಂದು ಗರ್ಭಿಣಿಯ ಸುತ್ತ ನಡೆಯುವ ಸಿನಿಮಾ. ನಾಯಕಿ ಮಮತಾ ರಾಹುತ್ ತುಂಬು ಗರ್ಭಿಣಿ ಇರುವಾಗಲೇ ಈ ಸಿನಿಮಾದ ಪಾತ್ರವನ್ನು ನಿರ್ವಹಿಸಿರು ವುದು ವಿಶೇಷ. ಅಷ್ಟೇ ಅಲ್ಲದೇ ಮಗುವಾದ ನಂತರದ ಸನ್ನಿವೇಶಗಳೂ ಈ ಸಿನಿಮಾ ದಲ್ಲಿದ್ದು, ಆ ದೃಶ್ಯಗಳಲ್ಲೂ ಮಮತಾ ರಾಹುತ್ ಮತ್ತು ಅವರ ಮಗು ಇಬ್ಬರೂ ಸಿನಿಮಾದಲ್ಲಿ ಅಭಿನಯಿಸಿದ್ದಾರೆ’ ಎಂದು ತೆರೆಹಿಂದಿನ ಕಥೆ ವಿವರಿಸಿದರು.
“ನಿರ್ದೇಶಕರು ಹೇಳಿದ ಕಥೆ ಕೇಳಿ ತುಂಬ ಇಷ್ಟವಾಯಿತು. ಹಾಗಾಗಿ ಏಳು ತಿಂಗಳ ಗರ್ಭಿಣಿ ಇದ್ದಾಗಲೇ ಈ ಪಾತ್ರವನ್ನು ಮಾಡಬೇಕೆಂದು ನಿರ್ಧರಿಸಿದ್ದೆ. ಅದರಂತೆ ಶೂಟಿಂಗ್ನಲ್ಲೂ ಪಾಲ್ಗೊಂಡೆ. ಕೆಲವು ದಿನಗಳ ಚಿತ್ರೀಕರಣ ನಂತರ ನನಗೆ ಅವಧಿಗೂ ಮುನ್ನವೇ ಹೆರಿಗೆ ಆಯಿತು. ಆನಂತರ ಕೂಡ ನಾನು ಚಿತ್ರೀಕರಣದಲ್ಲಿ ಭಾಗಿಯಾದೆ. ನನ್ನ ಮಗು ಕೂಡ ಈ ಚಿತ್ರದಲ್ಲಿ ಅಭಿನಯಿಸಿದೆ’ ಎನ್ನುವುದು ನಟಿ ಮಮತಾ ರಾಹುತ್ ಮಾತು.
ಹೆಣ್ಣು ಭ್ರೂಣ ಹತ್ಯೆ ಮಾಡಬೇಡಿ ಎಂಬ ಸಾಮಾಜಿಕ ಸಂದೇಶವಿರುವ ಈ ಚಿತ್ರವನ್ನು ಮಮತಾ ರಾಹುತ್ ಪತಿ ಸುರೇಶ್ ಕೊಟ್ಯಾನ್ ಚಿತ್ರಾಪು “ಶ್ರೀಗಜನಿ ಪ್ರೊಡಕ್ಷನ್ಸ್’ ಲಾಂಛನದಲ್ಲಿ ನಿರ್ಮಿಸಿದ್ದಾರೆ. ಮಮತಾ ರಾಹುತ್ ಜೊತೆಗೆ ರೋಹಿತ್, ಭವಾನಿ ಪ್ರಕಾಶ್, ಸುಧಾ ಪ್ರಸನ್ನ, ಡಾ. ಸುರೇಶ್ ಚಿತ್ರಾಪು, ಪ್ರಮಿಳಾ ಸುಬ್ರಹ್ಮಣ್ಯಂ, ವಿಜಯಲಕ್ಷ್ಮೀ, ದೀಪಿಕಾ ಗೌಡ, ಸನ್ನಿ, ತೇಜಸ್ವಿನಿ, ಕವಿತಾ ಕಂಬಾರ್, ಬೇಬಿ ನಿಶಿತಾ, ಬೇಬಿ ರಿಧಿ, ಪ್ರಿನ್ಸ್ ಜಿತಿನ್ ಕೋಟ್ಯಾನ್, ಮಟಿಲ್ಡಾ ಡಿಸೋಜ, ಅರ್ಚನಾ ಗಾಯ ಕ್ವಾಡ್, ಶೀಬಾ ಮೂರ್ತಿ, ಶ್ವೇತಾ, ಚೈತ್ರಾ, ಮಂಜು ನಂಜನಗೂಡು, ರಘು ಸಮರ್ಥ್ ಮುಂತಾ ದವರು “ತಾರಿಣಿ’ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್ ಅರವಿಂದ ಸ್ವಾಮಿ ಹಾಡು ಹಬ್ಬ
Vaibhavi Shandilya: ಮಾರ್ಟಿನ್ ಪ್ರೀತಿ ಪಾತ್ರಳು ನಾನು…; ವೈಭವಿ ಕಣ್ತುಂಬ ನಿರೀಕ್ಷೆ
Radhika kumaraswamy: ಭೈರಾದೇವಿ ನನ್ನ ಡ್ರೀಮ್ ಪ್ರಾಜೆಕ್ಟ್…: ರಾಧಿಕಾ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ
Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್ ಆರೋಪ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.