Sandalwood: ಭ್ರೂಣ ಹತ್ಯೆಯ ವಿರುದ್ಧ ತಾರಿಣಿ


Team Udayavani, Mar 20, 2024, 10:14 AM IST

Sandalwood: ಭ್ರೂಣ ಹತ್ಯೆಯ ವಿರುದ್ಧ ತಾರಿಣಿ

ಕನ್ನಡ ಚಿತ್ರರಂಗದಲ್ಲಿ ಕೆಲವು ಸಿನಿಮಾಗಳು ತಮ್ಮ ಬಿಗ್‌ ಬಜೆಟ್‌, ಬಿಗ್‌ ಸ್ಟಾರ್‌ ಕಾಸ್ಟಿಂಗ್‌ ಮೂಲಕ ಗಮನ ಸೆಳೆದರೆ, ಇನ್ನು ಕೆಲವು ಸಿನಿಮಾಗಳು ತಮ್ಮ ಕಂಟೆಂಟ್‌ ಮತ್ತು ಮೇಕಿಂಗ್‌ ಮೂಲಕವೇ ಗಮನ ಸೆಳೆಯುತ್ತವೆ. ಇತ್ತೀಚೆಗೆ ಹೀಗೆ ತನ್ನ ಕಂಟೆಂಟ್‌ ಮತ್ತು ಮೇಕಿಂಗ್‌ ಮೂಲಕ ಗಮನ ಸೆಳೆಯುತ್ತಿರುವ ಸಿನಿಮಾ “ತಾರಿಣಿ’.

ಕೆಲ ತಿಂಗಳ ಹಿಂದಷ್ಟೇ ರಾಜ್ಯದ ಅತಿದೊಡ್ಡ ಲಿಂಗಪತ್ತೆ, ಭ್ರೂಣಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು ಅನೇಕರಿಗೆ ಗೊತ್ತಿರಬಹುದು. ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಲಿಂಗಪತ್ತೆ, ಭ್ರೂಣಹತ್ಯೆ ಮಾಫಿಯಾ ರಾಜಕೀಯ ಮತ್ತು ಸಾಮಾಜಿಕವಾಗಿ ದೊಡ್ಡ ಸುದ್ದಿಯಾಗಿತ್ತು. ಇದೇ ಲಿಂಗಪತ್ತೆ, ಭ್ರೂಣಹತ್ಯೆ ವಿಷಯವನ್ನು ಇಟ್ಟುಕೊಂಡು ತಯಾರಾ ಗಿರುವ “ತಾರಿಣಿ’ ಸಿನಿಮಾ ಇದೇ ಮಾರ್ಚ್‌ 29ರಂದು ಥಿಯೇಟರಿಗೆ ಬರುತ್ತಿದೆ.

ಈಗಾಗಲೇ ಅನೇಕ ಸದ್ದಿಲ್ಲದೆ ಹತ್ತಾರು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿರುವ, “ತಾರಿಣಿ’ ವಿವಿಧ ವಿಭಾಗಗಳಲ್ಲಿ ಸುಮಾರು 25ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ತನ್ನದಾಗಿಸಿ ಕೊಂಡಿದೆ. ಈ ಸಿನಿಮಾದ ಇನ್ನೊಂದು ವಿಶೇಷವೆಂದರೆ, ಮೊದಲ ಬಾರಿಗೆ ನಟಿ ಮಮತಾ ರಾಹುತ್‌ ನಿಜ ಜೀವನದಲ್ಲಿ ತಾನು ಗರ್ಭಿಣಿಯಾಗಿದ್ದಾಗಲೇ, ತೆರೆಮೇಲೆ ಕೂಡ “ತಾರಿಣಿ’ ಸಿನಿಮಾದಲ್ಲಿ ಗರ್ಭಿಣಿ ಪಾತ್ರದಲ್ಲೇ ಕಾಣಿಸಿಕೊಂಡಿರುವುದು.

ಈ ಹಿಂದೆ “ಕೃಷ್ಣ ಗಾರ್ಮೆಂಟ್ಸ್‌’, “ದಾರಿ ಯಾವುದಯ್ಯ ವೈಕುಂಠಕ್ಕೆ’, “ಬ್ರಹ್ಮಕಮಲ’ ಮೊದಲಾದ ಸದಭಿರುಚಿ ಸಿನಿಮಾಗಳನ್ನು ನಿರ್ದೇಶಿಸಿ ಸೈ ಎನಿಸಿ ಕೊಂಡಿ ರುವ ಸಿದ್ದು ಪೂರ್ಣಚಂದ್ರ ನೈಜ ಘಟನೆ ಪ್ರೇರಿತ “ತಾರಿಣಿ’ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್‌-ಕಟ್‌ ಹೇಳಿದ್ದಾರೆ.

ಮೂಲತಃ ವೃತ್ತಿಯಲ್ಲಿ ವೈದ್ಯರಾಗಿರುವ ಮಮತಾ ರಾಹುತ್‌ ಪತಿ ಡಾ. ಸುರೇಶ್‌ ಕೋಟ್ಯಾನ್‌ ಚಿತ್ರಾಪು “ಶ್ರೀಗಜನಿ ಪ್ರೊಡಕ್ಷನ್ಸ್‌’ ಬ್ಯಾನರ್‌ನಲ್ಲಿ “ತಾರಿಣಿ’ ಸಿನಿಮಾ ವನ್ನು ನಿರ್ಮಿಸಿದ್ದಾರೆ. “ನಮ್ಮ ಸುತ್ತಮುತ್ತ ನೋಡಿದ ವಿಷಯಗಳು ಮತ್ತು ನನ್ನ ವೈದ್ಯಕೀಯ ವೃತ್ತಿ ಈ ಸಿನಿಮಾ ಮಾಡಲು ಕಾರಣ.

ಒಂದಷ್ಟು ಆದರ್ಶವನ್ನು ಇಟ್ಟುಕೊಂಡು, ಶಿಸ್ತುಬದ್ಧವಾಗಿ, ಸಾಕಷ್ಟು ಪೂರ್ವ ತಯಾರಿ ಮಾಡಿಕೊಂಡು ಈ ಸಿನಿಮಾ ಮಾಡಿದ್ದೇವೆ. ಹಾಗಂತ ಈ ಸಿನಿಮಾದಲ್ಲಿ ಯಾವುದೇ ಉಪದೇಶವಿಲ್ಲ. “ತಾರಿಣಿ’ ಭಾವನಾತ್ಮಕವಾಗಿ ನೋಡುಗರಿಗೆ ಕನೆಕ್ಟ್ ಆಗುತ್ತದೆ. ನಮಗೇ ಗೊತ್ತಿಲ್ಲದಂತೆ, ನಮ್ಮನ್ನು ಆವರಿಸಿಕೊಂಡು ಭ್ರೂಣ ಹತ್ಯೆಯ ಪಾಪಪ್ರಜ್ಞೆ ಕಾಡುವಂತೆ ಮಾಡುತ್ತದೆ’ ಎನ್ನುವುದು “ತಾರಿಣಿ’ ಬಗ್ಗೆ ನಿರ್ಮಾಪಕ ಡಾ. ಸುರೇಶ್‌ ಕೋಟ್ಯಾನ್‌ ಮಾತು.

ಹೆಣ್ಣು ಭ್ರೂಣ ಹತ್ಯೆ ಮಾಡಬೇಡಿ ಎಂಬ ಸಾಮಾಜಿಕ ಸಂದೇಶವಿರುವ “ತಾರಿಣಿ’ ಸಿನಿಮಾದಲ್ಲಿ ಮಮತಾ ರಾಹುತ್‌ ಜೊತೆಗೆ ರೋಹಿತ್‌, ಭವಾನಿ ಪ್ರಕಾಶ್‌, ಸುಧಾ ಪ್ರಸನ್ನ, ಬೇಬಿ ನಿಶಿತಾ, ಬೇಬಿ ರಿಧಿ, ಪ್ರಿನ್ಸ್‌ ಜಿತಿನ್‌ ಕೋಟ್ಯಾನ್‌ ಅಭಿನಯಿಸಿದ್ದಾರೆ

ಟಾಪ್ ನ್ಯೂಸ್

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

3-holiday

Heavy Rain: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

2-Vijayapura

Vijayapura: ಕೃಷ್ಣಾ ನದಿ ತೆಪ್ಪ ದುರಂತ: ಮತ್ತೊಬ್ಬನ ಶವ ಪತ್ತೆ

Dinesh-gundurao

Private Hospital: ಡೆಂಗ್ಯೂ ಪರೀಕ್ಷೆಗೆ ಏಕರೂಪ ದರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಖುಷಿಯ ಜೊತೆಗೊಂದು ಬೇಸರ!; ಗೆಲುವಿನ ಹಾದಿಯಲ್ಲಿ ಪ್ರೇಕ್ಷಕರ ಕೊರತೆ

Sandalwood: ಖುಷಿಯ ಜೊತೆಗೊಂದು ಬೇಸರ!; ಗೆಲುವಿನ ಹಾದಿಯಲ್ಲಿ ಪ್ರೇಕ್ಷಕರ ಕೊರತೆ

Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್‌ ಲಾಂಚ್‌

Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್‌ ಲಾಂಚ್‌

18

Actress Akshita Bopaiah: ತಮಿಳಿನತ್ತ ನವನಟಿ ಅಕ್ಷಿತಾ ಸಿನಿಯಾನ

Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ

Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

4-yadagiri

Narayanapur: ವಿದ್ಯುತ್‌ ತಂತಿ ತಗುಲಿ ಮಹಿಳೆ ಸಾವು

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.