![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-415x249.jpg)
ಕುತೂಹಲ ಹೆಚ್ಚಿಸಿದ ಮೇಘನಾ ರಾಜ್ ನಟನೆಯ ‘ತತ್ಸಮ ತದ್ಭವ’
Team Udayavani, Jul 18, 2023, 3:42 PM IST
![tatsama tadbhava movie teaser](https://www.udayavani.com/wp-content/uploads/2023/07/tatsava-620x342.jpg)
ಮದುವೆ ನಂತರ ಸಿನಿಮಾ ರಂಗದಿಂದ ದೂರ ಉಳಿದಿದ್ದ ನಟಿ ಮೇಘನಾ ರಾಜ್ “ತತ್ಸಮ ತದ್ಭವ’ ಸಿನಿಮಾದ ಮೂಲಕ ಮತ್ತೆ ಬೆಳ್ಳಿತೆರೆಗೆ ಕಂ ಬ್ಯಾಕ್ ಆಗುತ್ತಿರುವ ವಿಷಯ ನಿಮಗೆ ಗೊತ್ತಿರಬಹುದು. ಈಗ ಮೇಘನಾ ರಾಜ್ ಅಭಿನಯಿಸುತ್ತಿರುವ, ಇದೇ “ತತ್ಸಮ ತದ್ಭವ’ ಸಿನಿಮಾದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಸಿನಿಮಾ ಪೋಸ್ಟ್ ಪ್ರೊಡಕ್ಷನ್ನ ಅಂತಿಮ ಹಂತದಲ್ಲಿದೆ.
ಇದೇ ವೇಳೆ “ತತ್ಸಮ ತದ್ಭವ’ ಸಿನಿಮಾದ ಪ್ರಚಾರ ಕಾರ್ಯಗಳಿಗೆ ನಿಧಾನವಾಗಿ ಚಾಲನೆ ನೀಡಿರುವ ಚಿತ್ರತಂಡ, ಇದೀಗ ಸಿನಿಮಾದ ಮೊದಲ ಟೀಸರ್ ಅನ್ನು ಬಿಡುಗಡೆ ಮಾಡಿದೆ.
ಇನ್ನು ಬಿಡುಗಡೆಯಾಗಿರುವ “ತತ್ಸಮ ತದ್ಭವ’ ಸಿನಿಮಾದ ಟೀಸರ್ನಲ್ಲಿ ಕಥೆಯಲ್ಲಿರುವ ಸಸ್ಪೆನ್ಸ್-ಥ್ರಿಲ್ಲರ್ ಅಂಶಗಳ ಸಣ್ಣ ಝಲಕ್ ಅನ್ನು ಬಿಟ್ಟುಕೊಡಲಾಗಿದ್ದು, ಒಂದಷ್ಟು ಕುತೂಹಲವನ್ನು ಕೆರಳಿಸುವಲ್ಲಿ ಯಶಸ್ವಿಯಾಗಿರುವ ಟೀಸರ್ ನೋಡುಗರ ಗಮನ ಸೆಳೆಯುವಂತಿದೆ.
“ತತ್ಸಮ ತದ್ಭವ’ ಸಿನಿಮಾದ ಟೀಸರ್ ಬಗ್ಗೆ ಮಾತನಾಡಿರುವ ನಟಿ ಮೇಘನಾ ರಾಜ್, ತಮ್ಮ ಸಿನಿಮಾದ ಟೀಸರ್ ನೋಡಿ ಹಾರೈಸಿ ಎಂದು ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಿ ಮನವಿ ಮಾಡಿದ್ದಾರೆ.
ಇನ್ನು ಮಹಿಳಾ ಪ್ರಧಾನ ಕಥಾಹಂದರದ ಇನ್ವೆಸ್ಟಿಗೇಟಿವ್ ಕ್ರೈಂ-ಥ್ರಿಲ್ಲರ್ ಶೈಲಿಯ “ತತ್ಸಮ ತದ್ಭವ’ ಸಿನಿಮಾದಲ್ಲಿ ಮೇಘನಾ ಮಗಳ ಹುಡುಕಾಟದಲ್ಲಿರುವ ತಾಯಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮೊದಲ ಬಾರಿಗೆ ಮೇಘನಾ ಇಂಥದ್ದೊಂದು ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ತಮ್ಮ ಪಾತ್ರ ಪ್ರೇಕ್ಷಕರ ಮನಮುಟ್ಟಲಿದೆ ಎಂಬ ವಿಶ್ವಾಸ ಮೇಘನಾ ಅವರಿಗೂ ಇದೆ.
“ತತ್ಸಮ ತದ್ಭವ’ ಸಿನಿಮಾ ಕನ್ನಡ ಮತ್ತು ಮಲೆಯಾಳಂ ಭಾಷೆಗಳಲ್ಲಿ ನಿರ್ಮಾಣವಾಗಿದ್ದು, ಸಿನಿಮಾವನ್ನು ಪನ್ನಗ ಭರಣ, ಸ್ಪೂರ್ತಿ ಅನಿಲ್, ಚೇತನ್ ನಂಜುಂಡಯ್ಯ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ವಿಶಾಲ್ ಆತ್ರೇಯ ನಿರ್ದೇಶನ ಮಾಡಿದ್ದಾರೆ. “ತತ್ಸಮ ತದ್ಭವ’ ಚಿತ್ರದ ಹಾಡುಗಳಿಗೆ ವಾಸುಕಿ ವೈಭವ್ ಸಂಗೀತ ಸಂಯೋಜಿಸಿದ್ದು, ಶ್ರೀನಿವಾಸ್ ರಾಮಯ್ಯ ಛಾಯಾಗ್ರಹಣ, ರವಿ ಆರಾಧ್ಯ ಸಂಕಲನವಿದೆ.
ಉಳಿದಂತೆ ಮೇಘನಾ ರಾಜ್ ಅವರೊಂದಿಗೆ ಪ್ರಜ್ವಲ್ ದೇವರಾಜ್, ಶ್ರುತಿ, ಟಿ. ಎಸ್ ನಾಗಾಭರಣ, ಬಾಲಾಜಿ ಮನೋಹರ್ ಮೊದಲಾದವರು “ತತ್ಸಮ ತದ್ಭವ’ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಎಲ್ಲ ಅಂದುಕೊಂಡಂತೆ ನಡೆದರೆ, ಇದೇ ಆಗಸ್ಟ್ ವೇಳೆಗೆ ಸಿನಿಮಾವನ್ನು ತೆರೆಗೆ ತರುವ ಯೋಚನೆಯಲ್ಲಿದೆ “ತತ್ಸಮ ತದ್ಭವ’ ಚಿತ್ರತಂಡ.
ಟಾಪ್ ನ್ಯೂಸ್
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-150x90.jpg)
Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ
![Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ](https://www.udayavani.com/wp-content/uploads/2024/07/government-guest-house-150x81.jpg)
Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ
![Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ](https://www.udayavani.com/wp-content/uploads/2024/07/jay-150x83.jpg)
Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ
![Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/GOA-150x88.jpg)
Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ
![Hubli; CM-DCM issue not to be debated on sidewalks: RB Thimmapura](https://www.udayavani.com/wp-content/uploads/2024/07/RB-150x83.jpg)
Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.